Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಬಿಜೆಪಿ ಬೀದಿ ಜಗಳ ಶಮನಕ್ಕೆ ವರಿಷ್ಠರು

by admin November 28, 2024
written by admin November 28, 2024 0 comments 1 minutes read
Share 0FacebookTwitterPinterestEmail
92

ಬೆಂಗಳೂರು:ಕರ್ನಾಟಕ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯ ಪರಿಹರಿಸಲು ದೆಹಲಿ ವರಿಷ್ಠರು ಮಧ್ಯ ಪ್ರವೇಶ ಮಾಡಲಿದ್ದಾರೆ.

ವರಿಷ್ಠರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಡಿಸೆಂಬರ್ 4ರಂದು ರಾಜ್ಯಕ್ಕೆ ಕಳುಹಿಸುತ್ತಿದ್ದು, ಇವರೊಂದಿಗೆ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಧಾ ಮೋಹನ್ ದಾಸ್ ಅಗರವಾಲ್ ಅವರೂ ಉಪಸ್ಥಿತರಿರುವರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಹಗರಣಗಳು ಹಾಗೂ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಲ್ಕು ತಂಡಗಳನ್ನು ರಚಿಸಿ ರಾಜ್ಯದ ನಾಲ್ಕೂ ದಿಕ್ಕಿನಿಂದ ಹೋರಾಟಕ್ಕೆ ಇಳಿದಿದ್ದಾರೆ.

ಪರ-ವಿರೋಧಿ ಬಣಗಳ ಹೋರಾಟ

ರಾಜ್ಯಾಧ್ಯಕ್ಷರ ನಿರ್ಧಾರ ಧಿಕ್ಕರಿಸಿ ಯಡಿಯೂರಪ್ಪ ವಿರೋಧಿ ಬಣದ ಬಸನಗೌಡ ಪಾಟೀಲ್ ಯತ್ನಾಳ್ ಬಣ ಪ್ರತ್ಯೇಕವಾಗಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ಬೀದಿಗಿಳಿದಿದೆ.

ಯತ್ನಾಳ್ ನಿರ್ಧಾರ ವಿರೋಧಿಸಿ, ಯಡಿಯೂರಪ್ಪ ಬಣದ ಕೆಲವು ಹಿರಿಯ ಮುಖಂಡರು ಶುಕ್ರವಾರದಿಂದ ಪ್ರತ್ಯೇಕ ಯಾತ್ರೆ ಹಮ್ಮಿಕೊಂಡಿದ್ದು, ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ರಾಜ್ಯ ಬಿಜೆಪಿ ಮುಖಂಡರಲ್ಲಿನ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್‌ನವರು ಅಪಹಾಸ್ಯ ವಿಷಯ ಮಾಡಿಕೊಂಡಿದ್ದಾರೆ.

ದೆಹಲಿ ವರಿಷ್ಠರಿಗೆ ದೂರು

ಯತ್ನಾಳ್ ಮತ್ತವರ ಸಂಗಡಿಗರಿಂದ ಆಗುತ್ತಿರುವ ಮುಜುಗರ ತಪ್ಪಿಸುವಂತೆ ಸ್ವತಃ ವಿಜಯೇಂದ್ರ ಅವರೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರು.

ವರಿಷ್ಠರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರು, ಡಿಸೆಂಬರ್‌ನಲ್ಲಿ ನಮ್ಮಲ್ಲಿನ ಎಲ್ಲಾ ಗೊಂದಲ ಬಗೆಹರಿದು, ಐದು ಬಾಗಿಲುಗಳು ಮುಚ್ಚಲಿವೆ ಎಂದು ಮಾರ್ಮಿಕವಾಗಿ ನುಡಿದಿದ್ದರು.

ವರಿಷ್ಠರು ಕಳುಹಿಸುತ್ತಿರುವ ಈ ಮುಖಂಡರು ಕರ್ನಾಟಕದ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಹಿರಿಯ ನಾಯಕರು ಹಾಗೂ ಪರ-ವಿರೋಧಿ ಬಣದ ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅಧಿಕಾರ ಅಂತ್ಯದ ಸನಿಹಕ್ಕೆ !
ವೈಮನಸ್ಸು ವಿಷಾದಕರ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಬ್ಬಾಗಿಲೆಂದೇ ಪರಿಗಣಿಸಿರುವ ಕರ್ನಾಟಕದಲ್ಲಿ ನಾಯಕರ ವೈಮನಸ್ಸು ಬೀದಿಗೆ ಬಂದಿರುವುದು ವಿಷಾದಕರ ಎಂದಿದ್ದಾರೆ.

ಕೇಂದ್ರದಲ್ಲಿ ಸಚಿವರಾಗಿದ್ದವರು, ಸಂಸದರು, ಮಾಜಿ ಮಂತ್ರಿಗಳೇ ಒಂದು ವಿಷಯಕ್ಕೆ ತದ್ವಿರುದ್ಧವಾಗಿ ಹೋರಾಟಕ್ಕೆ ಮುಂದಾಗಿರುವುದು ವಿಪರ್ಯಾಸ.

ಸಿದ್ದರಾಮಯ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ, ಈ ಸರ್ಕಾರದ ಹಗರಣಗಳು ಎಷ್ಟವೆಯೆಂದರೆ, ಪ್ರತಿನಿತ್ಯವೂ ಒಂದು ಹೋರಾಟ ನಡೆಸಬಹುದಾಗಿದೆ.

ಕರ್ನಾಟಕದಲ್ಲಿ ಇದೇ ಮೊದಲು

ಆದರೆ, ಇದನ್ನು ಬಿಟ್ಟು ಪ್ರತ್ಯೇಕ ಗುಂಪುಗಳಾಗಿ ಹೋರಾಟ ನಡೆಸುತ್ತಿರುವುದು ಕರ್ನಾಟಕದಲ್ಲಿ ಇದೇ ಮೊದಲು.

ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ವರಿಷ್ಠರು ನೇಮಕ ಮಾಡಿದ ನಂತರ ಅದಕ್ಕೆ ಎಲ್ಲರೂ ತೆಲೆಬಾಗಲೇಬೇಕು, ಅದನ್ನು ಬಿಟ್ಟು ಅವರ ವಿರುದ್ಧವೇ ಹೋರಾಟ ನಡೆಸಿದರೆ, ಪಕ್ಷದ ವರಿಷ್ಠರ ನಿರ್ಧಾರವನ್ನೇ ಪ್ರಶ್ನಿಸಿದಂತೆ ಎಂದು ಕಿಡಿಕಾರಿದರು.

ಇಷ್ಟೆಲ್ಲಾ ಆಗುತ್ತಿದ್ದರೂ ವರಿಷ್ಠರು ಮಧ್ಯೆ ಪ್ರವೇಶಿಸದಿರುವುದಕ್ಕೆ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದರು.

Share this:

  • WhatsApp
  • Post
  • Tweet
  • Print
  • Email
b s yadiyurappab y vijayendrabasana gowda patil yatnalhigh command entrykarnataka bjpradha mohan das agarvaltarun chugh
Share 0 FacebookTwitterPinterestEmail
admin

previous post
ಬಿಜೆಪಿ ಸಂಘಟನೆಗೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ
next post
ಸಿದ್ದರಾಮಯ್ಯ ಅಧಿಕಾರ ಅಂತ್ಯದ ಸನಿಹಕ್ಕೆ !

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ