Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಬಿಜೆಪಿ ಬೀದಿ ಜಗಳ ಶಮನಕ್ಕೆ ವರಿಷ್ಠರು

by admin November 28, 2024
written by admin November 28, 2024 0 comments 1 minutes read
0FacebookTwitterPinterestEmail
167

ಬೆಂಗಳೂರು:ಕರ್ನಾಟಕ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯ ಪರಿಹರಿಸಲು ದೆಹಲಿ ವರಿಷ್ಠರು ಮಧ್ಯ ಪ್ರವೇಶ ಮಾಡಲಿದ್ದಾರೆ.

ವರಿಷ್ಠರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಡಿಸೆಂಬರ್ 4ರಂದು ರಾಜ್ಯಕ್ಕೆ ಕಳುಹಿಸುತ್ತಿದ್ದು, ಇವರೊಂದಿಗೆ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಧಾ ಮೋಹನ್ ದಾಸ್ ಅಗರವಾಲ್ ಅವರೂ ಉಪಸ್ಥಿತರಿರುವರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಹಗರಣಗಳು ಹಾಗೂ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಲ್ಕು ತಂಡಗಳನ್ನು ರಚಿಸಿ ರಾಜ್ಯದ ನಾಲ್ಕೂ ದಿಕ್ಕಿನಿಂದ ಹೋರಾಟಕ್ಕೆ ಇಳಿದಿದ್ದಾರೆ.

ಪರ-ವಿರೋಧಿ ಬಣಗಳ ಹೋರಾಟ

ರಾಜ್ಯಾಧ್ಯಕ್ಷರ ನಿರ್ಧಾರ ಧಿಕ್ಕರಿಸಿ ಯಡಿಯೂರಪ್ಪ ವಿರೋಧಿ ಬಣದ ಬಸನಗೌಡ ಪಾಟೀಲ್ ಯತ್ನಾಳ್ ಬಣ ಪ್ರತ್ಯೇಕವಾಗಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ಬೀದಿಗಿಳಿದಿದೆ.

ಯತ್ನಾಳ್ ನಿರ್ಧಾರ ವಿರೋಧಿಸಿ, ಯಡಿಯೂರಪ್ಪ ಬಣದ ಕೆಲವು ಹಿರಿಯ ಮುಖಂಡರು ಶುಕ್ರವಾರದಿಂದ ಪ್ರತ್ಯೇಕ ಯಾತ್ರೆ ಹಮ್ಮಿಕೊಂಡಿದ್ದು, ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ರಾಜ್ಯ ಬಿಜೆಪಿ ಮುಖಂಡರಲ್ಲಿನ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್‌ನವರು ಅಪಹಾಸ್ಯ ವಿಷಯ ಮಾಡಿಕೊಂಡಿದ್ದಾರೆ.

ದೆಹಲಿ ವರಿಷ್ಠರಿಗೆ ದೂರು

ಯತ್ನಾಳ್ ಮತ್ತವರ ಸಂಗಡಿಗರಿಂದ ಆಗುತ್ತಿರುವ ಮುಜುಗರ ತಪ್ಪಿಸುವಂತೆ ಸ್ವತಃ ವಿಜಯೇಂದ್ರ ಅವರೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರು.

ವರಿಷ್ಠರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರು, ಡಿಸೆಂಬರ್‌ನಲ್ಲಿ ನಮ್ಮಲ್ಲಿನ ಎಲ್ಲಾ ಗೊಂದಲ ಬಗೆಹರಿದು, ಐದು ಬಾಗಿಲುಗಳು ಮುಚ್ಚಲಿವೆ ಎಂದು ಮಾರ್ಮಿಕವಾಗಿ ನುಡಿದಿದ್ದರು.

ವರಿಷ್ಠರು ಕಳುಹಿಸುತ್ತಿರುವ ಈ ಮುಖಂಡರು ಕರ್ನಾಟಕದ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಹಿರಿಯ ನಾಯಕರು ಹಾಗೂ ಪರ-ವಿರೋಧಿ ಬಣದ ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅಧಿಕಾರ ಅಂತ್ಯದ ಸನಿಹಕ್ಕೆ !
ವೈಮನಸ್ಸು ವಿಷಾದಕರ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಬ್ಬಾಗಿಲೆಂದೇ ಪರಿಗಣಿಸಿರುವ ಕರ್ನಾಟಕದಲ್ಲಿ ನಾಯಕರ ವೈಮನಸ್ಸು ಬೀದಿಗೆ ಬಂದಿರುವುದು ವಿಷಾದಕರ ಎಂದಿದ್ದಾರೆ.

ಕೇಂದ್ರದಲ್ಲಿ ಸಚಿವರಾಗಿದ್ದವರು, ಸಂಸದರು, ಮಾಜಿ ಮಂತ್ರಿಗಳೇ ಒಂದು ವಿಷಯಕ್ಕೆ ತದ್ವಿರುದ್ಧವಾಗಿ ಹೋರಾಟಕ್ಕೆ ಮುಂದಾಗಿರುವುದು ವಿಪರ್ಯಾಸ.

ಸಿದ್ದರಾಮಯ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ, ಈ ಸರ್ಕಾರದ ಹಗರಣಗಳು ಎಷ್ಟವೆಯೆಂದರೆ, ಪ್ರತಿನಿತ್ಯವೂ ಒಂದು ಹೋರಾಟ ನಡೆಸಬಹುದಾಗಿದೆ.

ಕರ್ನಾಟಕದಲ್ಲಿ ಇದೇ ಮೊದಲು

ಆದರೆ, ಇದನ್ನು ಬಿಟ್ಟು ಪ್ರತ್ಯೇಕ ಗುಂಪುಗಳಾಗಿ ಹೋರಾಟ ನಡೆಸುತ್ತಿರುವುದು ಕರ್ನಾಟಕದಲ್ಲಿ ಇದೇ ಮೊದಲು.

ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ವರಿಷ್ಠರು ನೇಮಕ ಮಾಡಿದ ನಂತರ ಅದಕ್ಕೆ ಎಲ್ಲರೂ ತೆಲೆಬಾಗಲೇಬೇಕು, ಅದನ್ನು ಬಿಟ್ಟು ಅವರ ವಿರುದ್ಧವೇ ಹೋರಾಟ ನಡೆಸಿದರೆ, ಪಕ್ಷದ ವರಿಷ್ಠರ ನಿರ್ಧಾರವನ್ನೇ ಪ್ರಶ್ನಿಸಿದಂತೆ ಎಂದು ಕಿಡಿಕಾರಿದರು.

ಇಷ್ಟೆಲ್ಲಾ ಆಗುತ್ತಿದ್ದರೂ ವರಿಷ್ಠರು ಮಧ್ಯೆ ಪ್ರವೇಶಿಸದಿರುವುದಕ್ಕೆ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b s yadiyurappab y vijayendrabasana gowda patil yatnalhigh command entrykarnataka bjpradha mohan das agarvaltarun chugh
0 FacebookTwitterPinterestEmail
admin

previous post
ಬಿಜೆಪಿ ಸಂಘಟನೆಗೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ
next post
ಸಿದ್ದರಾಮಯ್ಯ ಅಧಿಕಾರ ಅಂತ್ಯದ ಸನಿಹಕ್ಕೆ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ