Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಡಿ.15ರಂದು ಸಿದ್ದರಾಮಯ್ಯಗೆ ದೇವೇಗೌಡರ ಉತ್ತರ

by admin December 6, 2024
written by admin December 6, 2024 0 comments 1 minutes read
0FacebookTwitterPinterestEmail
201

ಬೆಂಗಳೂರು:ಹಾಸನದ ಜನಕಲ್ಯಾಣ ಸಮಾವೇಶಕ್ಕೆ ಪ್ರತಿಯಾಗಿ ಡಿಸೆಂಬರ್ 15ರಂದು ಮಂಡ್ಯದಲ್ಲಿ ಜೆಡಿಎಸ್ ಬೃಹತ್ ಸಮ್ಮೇಳನ ಆಯೋಜಿಸಿದೆ.

ಹಾಸನದ ಸಮಾವೇಶ ಮುಗಿಯುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ದೆಹಲಿ ನಿವಾಸಲ್ಲಿ ಅವರ ಸಮ್ಮುಖದಲ್ಲೇ ಈ ನಿರ್ಣಯ ಕೈಗೊಳ್ಳಲಾಗಿದೆ.

ದೇವೇಗೌಡರಲ್ಲದೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಮಾಜಿ ಶಾಸಕರಾದ ಸಾ.ರಾ. ಮಹೇಶ್ ಹಾಗೂ ಸಿ.ಎಸ್ ಪುಟ್ಟರಾಜು ಉಪಸ್ಥಿತಿತರಿದ್ದರು.

ಅಭಿನಂದನಾ ಸಮಾವೇಶ

ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉತ್ತರ ನೀಡಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮೈಸೂರು, ರಾಮನಗರ, ಹಾಸನ, ಚಾಮರಾಜನಗರ ಹಾಗೂ ಸ್ಥಳೀಯ ಮಂಡ್ಯದ ಒಂದು ಲಕ್ಷ ಕಾರ್ಯಕರ್ತರನ್ನು ಅಲ್ಲಿನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿಸಿ, ಹಾಸನದಲ್ಲಿ ಸಿದ್ದರಾಮಯ್ಯ ಎತ್ತಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರಂತೆ.

ಡಿಸೆಂಬರ್ 16 ಕುಮಾರಸ್ವಾಮಿ ಅವರ ಜನ್ಮದಿನವಾಗಿದ್ದು ಅದರ ಹಿಂದಿನ ದಿನ, ಅವರು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಯುತ್ತಿದೆ.

ಪಂಚಾಯತ್ ಚುನಾವಣೆ: ದೆಹಲಿಯಲ್ಲಿ ನಿಖಿಲ್ ಚರ್ಚೆ
ಪುಟ್ಟರಾಜು, ಸಾ.ರಾ.ಮಹೇಶ್ ಹೊಣೆಗಾರಿಕೆ

ಸಿ.ಎಸ್.ಪುಟ್ಟರಾಜು ಹಾಗೂ ಸಾ.ರಾ.ಮಹೇಶ್ ಅಭಿನಂದನಾ ಸಮಾರಂಭದ ಪೂರ್ಣ ಹೊಣೆಗಾರಿಕೆ ವಹಿಸಿಕೊಳ್ಳಲಿದ್ದಾರೆ.

ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನ ಗಡಿ ಜಿಲ್ಲೆಯಲ್ಲೇ ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಸೇರಿಸಿ ಅವರಿಗೆ ಟಾಂಗ್ ಕೊಡುವುದು ಹಾಗೂ ಅವರ ಮೇಲಿನ ಭ್ರಷ್ಟಾಚಾರ ಆರೋಪಗಳನ್ನು ಜನರ ಮುಂದಿಡಲು ಕುಮಾರಸ್ವಾಮಿ ವೇದಿಕೆ ಬಳಸಿಕೊಳ್ಳಲಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮುಂದಾಳತ್ವದಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಪಕ್ಷದಲ್ಲಿ ದೊಡ್ಡ ಹುದ್ದೆಯನ್ನು ಕುಮಾರಸ್ವಾಮಿ ವೇದಿಕೆಯಲ್ಲೇ ಘೋಷಣೆ ಮಾಡಲಿದ್ದಾರಂತೆ.

ಜಿ.ಟಿ.ಡಿ. ಮನವೊಲಿಕೆ

ಪಕ್ಷದಲ್ಲಿದ್ದುಕೊಂಡೇ ನಾಯಕರ ಮೇಲೆ ಮುನಿಸಿಕೊಂಡಿರುವ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಕೆಲವರ ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಕಾರ್ಯವೂ ಸಮಾವೇಶಕ್ಕೂ ಮುನ್ನ ಕಾರ್ಯಕ್ರಮದ ಆಯೋಜಕರಿಂದ ನಡೆಯಲಿದೆ.

ಪುಟ್ಟರಾಜು ಹಾಗೂ ಮಹೇಶ್ ಅವರುಗಳು, ಜಿ.ಟಿ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ನಂತರ ದೇವೇಗೌಡರ ಬಳಿ ಕರೆತಂದು ಸಂಧಾನ ನಡೆಸಲು ಮುಂದಾಗಿದ್ದಾರೆ.

ಹಾಸನದ ಸಮಾವೇಶದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆ ಇಲ್ಲದ ರಾಜಕೀಯ ವಿಷಯಗಳನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯ ಅವರಿಗೆ ಸ್ವತಃ ದೇವೇಗೌಡರೇ ಅಂದಿನ ಸಭೆಯಲ್ಲಿ ಉತ್ತರ ನೀಡಲಿದ್ದಾರಂತೆ.

ಕುಟುಂಬ ವಿಷಯವಲ್ಲದೆ, ಜೆಡಿಎಸ್ ಪಕ್ಷದ ವಿರುದ್ಧವೂ ಮನಬಂದಂತೆ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದು, ಇವೆಲ್ಲಕ್ಕೂ ತಕ್ಷಣವೇ ಉತ್ತರ ನೀಡಲು ಮಂಡ್ಯದಲ್ಲೇ ಅಭಿನಂದನಾ ಸಮಾರಂಭ ನೆಪದಲ್ಲಿ ಸಮಾವೇಶ ನಡೆಯಲಿದೆ.

ಸಮಾನತೆ ನಿರ್ಮಾಣವೇ ಸಂವಿಧಾನದ ಧ್ಯೇಯೋದ್ದೇಶ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongresdecember 15th jds summithd devegowdahd kumara swamynikhil kumara swamy
0 FacebookTwitterPinterestEmail
admin

previous post
ಪಂಚಾಯತ್ ಚುನಾವಣೆ: ದೆಹಲಿಯಲ್ಲಿ ನಿಖಿಲ್ ಚರ್ಚೆ
next post
ಸರ್ಕಾರಿ ಆಸ್ಪತ್ರೆಗಳಲ್ಲಿ ಗೃಹಲಕ್ಷ್ಮಿ ಬಾಣಂತಿಯರ ಸಾವು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ