Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ

by admin December 10, 2024
written by admin December 10, 2024 0 comments 1 minutes read
0FacebookTwitterPinterestEmail
316

ಬೆಂಗಳೂರು:ಸಾಲು ಸಾಲು ಸಂಕಷ್ಟಗಳ ನಡುವೆಯೂ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷ ಅಧಿಕಾರದ ವೇಳೆ ವಿಶ್ವ ಭೂಪಟದಲ್ಲಿ ಕರ್ನಾಟಕ ರಾರಾಜಿಸುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅದರಲ್ಲೂ ಬೆಂಗಳೂರನ್ನು ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವದ ಸಿಲಿಕಾನ್ ಸಿಟಿಯಾಗಿ ಮೇರುಮಟ್ಟಕ್ಕೆ ಕೊಂಡೊಯ್ಯುವಲ್ಲಿ ಕಾರಣೀಭೂತರಾಗಿದ್ದಲ್ಲದೆ, ರಾಜಧಾನಿಯನ್ನು ಸಿಂಗಪೂರ್ ಮಾದರಿ ನಗರವನ್ನಾಗಿಸುವ ಕಾರ್ಯಕ್ಕೆ ಮುಂದಾಗಿದ್ದರು.

ಇವರ ಆಡಳಿತಾವಧಿಯಲ್ಲೇ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ನಾಲ್ಕು ಪಥಗಳ ಮಾರ್ಗವಾಗಿ ಮಾರ್ಪಟ್ಟಿತು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ, ಮೆಟ್ರೊ ಯೋಜನೆ, ನಗರ ಮತ್ತು ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಕಲ್ಪಿಸುವುದೂ ಸೇರಿದಂತೆ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು.

ಸತತ ಬರಗಾಲದ ನಡುವೆಯೂ ರಾಜ್ಯದ ಬೊಕ್ಕಸ ಬರಿದಾಗದಂತೆ ನೋಡಿಕೊಂಡಿದ್ದಲ್ಲದೆ, ರೈತರಿಗಾಗಿ ಯಶಸ್ವಿನಿ ವಿಮಾ ಯೋಜನೆ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾನ್ಹದ ಬಿಸಿಯೂಟ ಯೋಜನೆ ಆರಂಭಿಸಿದ ಹೆಗ್ಗಳಿಕೆ ಇವರದ್ದಾಗಿದೆ.

ಸ್ತ್ರೀಶಕ್ತಿ ಸಸ್ವಹಾಯ ಗುಂಪುಗಳನ್ನು ಅಸ್ತಿತ್ವಕ್ಕೆ ತಂದಿಲ್ಲದೆ, ಗ್ರಾಮೀಣ ಭಾಗದಲ್ಲಿ ವಸತಿಗಳ ನಿರ್ಮಾಣಕ್ಕೆ ಒತ್ತು ನೀಡಿದರು.

ರಾಜ್ಯ ಬೊಕ್ಕಸಕ್ಕೆ ಹಣ

ಆಡಳಿತವನ್ನು ಮದ್ಯದ ದೊರೆಗಳಿಂದ ಮುಕ್ತಗೊಳಿಸಲು ಪಾನೀಯ ನಿಗಮ ಸ್ಥಾಪಿಸಿ, ಸೆಕೆಂಡ್ಸ್ ಹಾವಳಿ ತಡೆಗಟ್ಟಿ ಪಾನಪ್ರಿಯರಿಗೆ ಕಡಿಮೆ ದರದಲ್ಲಿ ಮದ್ಯ ದೊರೆಯುವಂತೆ ಮಾಡುವ ಮೂಲಕ ರಾಜ್ಯ ಬೊಕ್ಕಸಕ್ಕೂ ಹಣ ಹರಿದುಬರುವಂತೆ ಮಾಡಿದರು.

ಒಂದೇ ಸೂರಿನಡಿ ಸರ್ಕಾರಿ ಸೇವೆ ದೊರೆಯಬೇಕೆಂದು ವಿಧಾನಸೌಧದ ಪಕ್ಕದಲ್ಲೇ ವಿಕಾಸಸೌಧ, ಅದರ ಸನಿಹದಲ್ಲೇ ಉದ್ಯೋಗಸೌಧ ನಿರ್ಮಿಸಿದರು.

ರೈತರ ಜಮೀನಿಗಾಗಿ ಭೂಮಿ ಆಪ್ ತಂದಿಲ್ಲದೆ, ಬಿಡಿಎ ಮೂಲಕ ಹೊಸ ಬಡಾವಣೆಗಳನ್ನು ನಿರ್ಮಿಸಿ ಲಕ್ಷಾಂತರ ನಿವೇಶನಗಳನ್ನು ಹಂಚಿಕೆ ಮಾಡಿದರು.

ಇವರ ಆಡಳಿತಾವಧಿಯಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾದ ಸನ್ನಿವೇಶದಲ್ಲಿ ಕಾವೇರಿ ಜಲವಿವಾದ ಉಲ್ಬಣಗೊಂಡಿತ್ತು.

ವಿಶ್ವಭೂಪಟದಲ್ಲಿ ಬೆಂಗಳೂರು ಮೂಡಿಸಿದ ಧೀಮಂತ
ಮಂಡ್ಯದವರೆಗೆ ಪಾದಯಾತ್ರೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡುವುದಕ್ಕೂ ಮುನ್ನ ಇವರು ಬೆಂಗಳೂರಿನಿಂದ ಮಂಡ್ಯದವರೆಗೆ ಪಾದಯಾತ್ರೆ ನಡೆಸಿದರು.

ಕೆ.ಎಚ್.ರಂಗನಾಥ್, ಎಚ್.ಸಿ.ಶ್ರೀಕಂಠಯ್ಯ, ಎಂ.ವೈಘೋರ್ಪಡೆ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ಡಿ.ಬಿ.ಚಂದ್ರೇಗೌಡ ಸೇರಿದಂತೆ ಘಟಾನುಘಟಿಗಳು ಕೃಷ್ಣ ಮಂತ್ರಿಮಂಡಲದಲ್ಲಿ ಇದ್ದರು.

ಆದಾಗ್ಯೂ ಇವರ ಆಡಳಿತಾವಧಿಯಲ್ಲಿ ಕಾವೇರಿ ಜಲ ವಿವಾದ, ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಗ್ರಾಮೀಣ ಕೃಪಾಂಕ ಸೇರಿದಂತೆ ಹಲವು ವಿಷಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಯಿತು.

ವರನಟ ಡಾ.ರಾಜ್ ಅಪಹರಣ

ಇದರ ನಡುವೆ ಕಾಡುಗಳ್ಳ ವೀರಪ್ಪನ್‌ನಿಂದ ಕನ್ನಡದ ವರನಟ ಡಾ.ರಾಜ್‌ಕುಮಾರ್ ಅಪಹರಣ ಕೃಷ್ಣ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿತು.

ಅಂದು ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಸಿನೆಮಾ ದಿಗ್ಗಜರು ಹಾಗೂ ಪತ್ರಕರ್ತರನ್ನು ಬಳಸಿಕೊಂಡು ಬಹಳ ಚಾಕಚಕ್ಯತೆಯಿಂದ ವೀರಪ್ಪನ್ ಬಂಧನದಿಂದ ರಾಜ್‌ಕುಮಾರ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಕೃಷ್ಣ ಯಶಸ್ವಿಯಾದರು.

ವೀರಪ್ಪನ್ ಇವರ ಆಡಳಿತದಲ್ಲಿ ಒಂದಲ್ಲಾ ಒಂದು ಸಮಸ್ಯೆ ಒಡ್ಡುತ್ತಲೇ ಇದ್ದ, ಮಾಜಿ ಸಚಿವ ನಾಗಪ್ಪ ಹತ್ಯೆಯೂ ಅದೇ ಸಮಯದಲ್ಲಿ ನಡೆಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
achievements in distressarchitect of vikasa soudhas m krishna
0 FacebookTwitterPinterestEmail
admin

previous post
ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ
next post
ಉಪಕಾರ ಸ್ಮರಣೆಯೇ ಇಲ್ಲದ ಐಟಿ-ಬಿಟಿ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ