Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿಶ್ವಭೂಪಟದಲ್ಲಿ ಬೆಂಗಳೂರು ಮೂಡಿಸಿದ ಧೀಮಂತ

by admin December 10, 2024
written by admin December 10, 2024 0 comments 2 minutes read
0FacebookTwitterPinterestEmail
350

ಬೆಂಗಳೂರು:ರಾಜಧಾನಿ ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿಯಾಗಿ ವಿಶ್ವಭೂಪಟದಲ್ಲಿ ಕಂಗೊಳಿಸುವಂತೆ ಮಾಡಿದ ಪದ್ಮವಿಭೂಷಣ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (93) ವಿಧಿ ವಶರಾಗಿದ್ದಾರೆ.

ಸುದೀರ್ಘ ಕಾಲದಿಂದ ಉಸಿರಾಟದ ತೊಂದರೆ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಕೃಷ್ಣ ಅವರು, ಇಂದು ಮುಂಜಾನೆ 2-30ಕ್ಕೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ನಾಳೆ ಬೆಳಗ್ಗೆ 8 ಗಂಟೆವರೆಗೂ ಅವರ ನಿವಾಸದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ನಂತರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಕೊಂಡೊಯ್ದು, ಅವರ ಜಮೀನಿನಲ್ಲಿ ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಮೂರು ದಿನ ಶೋಕಾಚರಣೆ

ಕೃಷ್ಣ ಅವರ ಗೌರವಾರ್ಥ ಡಿಸೆಂಬರ್ 11, ಬುಧವಾರದಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಇರಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಎಸ್.ಎಂ.ಕೃಷ್ಣ ಅವರು ಪತ್ನಿ ಪ್ರೇಮಾ, ಇಬ್ಬರು ಪುತ್ರಿಯರಾದ ಮಾಳವೀಕಾ ಮತ್ತು ಶಾಂಭವಿ ಹಾಗೂ ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಅಳಿಯ ಕಾಫಿಡೇ ಸಂಸ್ಥಾಪಕ ಸಿದ್ಧಾರ್ಥ ಆತ್ಮಹತ್ಯೆ ನಂತರ ಕೃಷ್ಣ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದರು.

1932ರ ಮೇ 1ರಂದು ಸೋಮನಹಳ್ಳಿಯಲ್ಲಿ ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರರಾಗಿ ಜನಿಸಿದ ಎಸ್.ಎಂ.ಕೃಷ್ಣ ಅವರು ಪ್ರಾಥಮಿಕ ಶಿಕ್ಷಣವನ್ನು ಮದ್ದೂರಿನಲ್ಲಿ ನಂತರ ಪದವಿ ಶಿಕ್ಷಣವನ್ನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪಡೆದರು.

ಕಾನೂನು ಪದವಿ

ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪಡೆದು ಅಮೆರಿಕದ ಟೆಕ್ಸಾಸ್‌ನಲ್ಲಿ ಉನ್ನತ ವ್ಯಾಸಂಗ ಮುಗಿಸಿ, ಭಾರತಕ್ಕೆ ಹಿಂತಿರುಗಿ ರೇಣುಕಾಚಾರ್ಯ ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು.

1962ರಲ್ಲಿ ರಾಜಕೀಯ ಬದುಕು ಆರಂಭಿಸಿದ ಅವರು, ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ವಿಧಾನಸಭೆ ಪ್ರವೇಶಿಸಿದರು.

1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ, 1971ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಮರು ಆಯ್ಕೆಗೊಂಡರು.

ರಾಷ್ಟ್ರ ರಾಜಕಾರಣಕ್ಕೆ

1972ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿ, ನಂತರ ರಾಷ್ಟ್ರ ರಾಜಕಾರಣಕ್ಕೆ ತೆರಳಿ ಇಂದಿರಾ ಗಾಂಧಿ ಆಡಳಿತದಲ್ಲಿ ಕೈಗಾರಿಕಾ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು.

ರಾಷ್ಟ್ರದ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ ಕೆಲವೇ ವ್ಯಕ್ತಿಗಳಲ್ಲಿ ಎಸ್.ಎಂ.ಕೃಷ್ಣ ಒಬ್ಬಾರಾಗಿದ್ದು, ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರಾಗಿದ್ದರು.

ಮುಖ್ಯಮಂತ್ರಿ ದೇವರಾಜ ಅರಸ್ ಸಂಪುಟದಲ್ಲಿ ಸಚಿವರಾಗಿ, ಎಸ್.ಬಂಗಾರಪ್ಪ ಆಡಳಿತಾವಧಿಯಲ್ಲಿ ವಿಧಾನಸಭಾಧ್ಯಕ್ಷರಾಗಿ, ವೀರಪ್ಪ ಮೊಯಿಲಿ ಆಡಳಿತದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ 1999ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದು 2004ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯಭಾರ ನಡೆಸಿದರು.

ನಂತರ ಕೇಂದ್ರ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿ, 2008ರಲ್ಲಿ ರಾಜ್ಯಪಾಲ ಹುದ್ದೆ ತೊರೆದು ಮತ್ತೆ ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೃಷ್ಣ ಅವರು, ಅಲ್ಪದಿನಗಳಲ್ಲೇ ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿ ವಿಶ್ರಾಂತ ಬದುಕು ನಡೆಸುತ್ತಿದ್ದರು.

ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
as cm-central minister-governor done good services m krishna no morethree day mourning
0 FacebookTwitterPinterestEmail
admin

previous post
ಯೋಗೇಶ್ವರ್, ಅನ್ನಪೂರ್ಣ, ಪಠಾಣ್ ಪ್ರಮಾಣವಚನ
next post
ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ