Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಬಗ್ಗೆಯೂ ರವಿ ಹೀನ ಮಾತು ಆಡಿದ್ದಾರೆ

by admin December 21, 2024
written by admin December 21, 2024 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
0FacebookTwitterPinterestEmail
137

ಬೆಂಗಳೂರು:ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂಬುದಾಗಿ ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ, ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ, ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ, ಅವರ ಮಾತುಗಳು ಸರಿಯೋ ತಪ್ಪೋ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ಚಿಕ್ಕಮಗಳೂರು ಜನ ಸುಸಂಸ್ಕೃತರು

ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ, ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ, ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ.

ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ, ಮುನಿರತ್ನ ಪ್ರಕರಣದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಏನು ಹೇಳಿದ್ದರು, ಎಫ್‌ಎಸ್‌ಎಲ್ ವರದಿಯಲ್ಲಿ ಸತ್ಯಾಂಶ ಬಂದ ನಂತರ ಪಕ್ಷದಿಂದ ಹೊರಹಾಕುವುದಾಗಿ ಹೇಳಿದ್ದರು.

ಪ್ರಕರಣದಲ್ಲಿ ಅವರು ಒಂದು ಭಾಗವಾಗಿದ್ದರೂ ಆತನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಇದೇ ಅವರ ನಾಯಕತ್ವ, ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ, ಅವರ ಮನೆಯಲ್ಲಿ ಅವರ ಪಕ್ಷದಲ್ಲಿ ಏನಾದರೂ ನಾನೇ ಕಾರಣ, ಹೊರಗಡೆ ಏನಾದರೂ ನಾನೇ ಕಾರಣ, ನನ್ನ ಸ್ಮರಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು.

ಐಷಾರಾಮಿ ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸ
ಆತ್ಮಸಾಕ್ಷಿಯೇ ನ್ಯಾಯ ನೀಡುತ್ತೆ

ನಿಂದನಾತ್ಮಕ ಮಾತು ಆಡಿಯಾಗಿದೆ, ಸರ್ಕಾರ ಹೇಗೆ ನ್ಯಾಯ ಕೊಡಿಸಲಿದೆ, ಆತ್ಮಸಾಕ್ಷಿಯೇ ನ್ಯಾಯ ನೀಡುತ್ತದೆ.

ಇದಕ್ಕೆಲ್ಲ ಕೊನೆ ಹಾಡುತ್ತೇವೆ ಎಂಬ ಸಿ.ಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ, ಬಹಳ ಸಂತೋಷ, ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರಾ, ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರಾ.

ಮಾನಹಾನಿಕರ ಪದ ಬಳಕೆ ವಿಚಾರ ಚರ್ಚೆಗೆ ಬದಲು ಬಿಜೆಪಿಯವರು ತಮ್ಮ ಹೇಳಿಕೆ ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ, ಇವರ ಆಡಳಿತದಲ್ಲಿ ಪೊಲೀಸರನ್ನು ಹೇಗೆ ಬಳಸಿಕೊಂಡಿದ್ದರು ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
belagavi incidentsc t ravidcm d k shivakumar
0 FacebookTwitterPinterestEmail
admin

previous post
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆ
next post
ಐಷಾರಾಮಿ ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ