Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಮನಮೋಹನ್ ಸಿಂಗ್ ನಿಧನಕ್ಕೆ ದೇವೇಗೌಡರ ಕಂಬನಿ

by admin December 27, 2024
written by admin December 27, 2024 0 comments 2 minutes read
0FacebookTwitterPinterestEmail
239

ಬೆಂಗಳೂರು:ದೇಶದ ಪ್ರಧಾನಮಂತ್ರಿಯಾಗಿ, ಆರ್ಥಿಕ ತಜ್ಞರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಡಾ.ಮನಮೋಹನ್ ಸಿಂಗ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ ಸಂದೇಶದಲ್ಲಿ, ಡಾ.ಮನಮೋಹನ್ ಸಿಂಗ್ ಭಾರತೀಯ ಅರ್ಥ ವ್ಯವಸ್ಥೆ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಸಂಸತ್‌ನಲ್ಲಿ 33 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಏಪ್ರಿಲ್ 3ರಂದು ರಾಜ್ಯಸಭೆಯಿಂದ ನಿವೃತ್ತಿ ಹೊಂದಿದ್ದರು, ಆರ್‌ಬಿಐ ಗವರ್ನರ್, ಅರ್ಥಶಾಸ್ತ್ರಜ್ಞ, ವಿತ್ತ ಸಚಿವ ಮತ್ತು ಪ್ರಧಾನಿಯಾಗಿ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ.

ಖಾಸಗೀಕರಣ, ಸರಳೀಕರಣ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಆರ್ಥಿಕ ಸಂಕಷ್ಟದಿಂದ ದೇಶವನ್ನು ಪಾರು ಮಾಡಿ ಅಭಿವೃದ್ಧಿಗೆ ನಾಂದಿ ಹಾಡಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಅವರು, ಪಿ.ವಿ.ನರಸಿಂಹ ರಾವ್ ಆಡಳಿತದಲ್ಲಿ ಚಿನ್ನ ಅಡವಿಟ್ಟು ದೇಶ ನಡೆಸುವ ಪರಿಸ್ಥಿತಿ ಇತ್ತು, ಇಂತಹ ಸಂಕಷ್ಟದಲ್ಲಿ ಡಾ.ಸಿಂಗ್ ಅರ್ಥ ಸಚಿವರಾಗಿ ಕೆಲವು ಆರ್ಥಿಕ ನೀತಿಗಳಲ್ಲಿ ಮಾರ್ಪಾಟು ಮಾಡಿ ಸುಧಾರಣೆ ತಂದರು, ಖಾಸಗೀಕರಣ, ಸರಳೀಕರಣ ಹಾಗೂ ವಿದೇಶಿ ವಿನಿಮಯ ಗಳಿಕೆಗೆ ಜಾರಿಗೊಳಿಸಿದ ಮಾರ್ಗಸೂಚಿಗಳು ಭಾರತದ ಅಭಿವೃದ್ಧಿಗೆ ಮುನ್ನಡೆ ಬರೆದವು ಎಂದು ಗುಣಗಾನ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ, ಶ್ರೇಷ್ಠ ಆರ್ಥಿಕ ತಜ್ಞರಾಗಿ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂಬ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಉದಾರೀಕರಣ ನೀತಿ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು, ಅವರ ದೂರದೃಷ್ಟಿ ಯೋಜನೆಗಳು ಭಾರತ ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಡಾ.ಮನಮೋಹನ್ ಸಿಂಗ್ ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು, ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಕರಿಸಿದ್ದರು, ನಗರದಲ್ಲಿ ಅನೇಕ ಮೇಲ್ಸೇತುವೆಗಳೂ ಅವರ ಕೊಡುಗೆಗಳಾಗಿವೆ, ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು, ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದರು, ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಅನೇಕ ಜನಪರ ಕಾಯ್ದೆಗಳನ್ನು ಜಾರಿಗೆ ತಂದರು ಎಂದರು.

ಸುಧಾರಣೆಗಳ ಹರಿಕಾರ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸಂದೇಶದಲ್ಲಿ, ಆರ್ಥಿಕ ಸಂಕಷ್ಟ ಕಾಲದಲ್ಲಿ ದೇಶವನ್ನು ಮುನ್ನಡೆಸಿದ್ದ ಮೇಧಾವಿ, ಪ್ರಖ್ಯಾತ ವಿತ್ತತಜ್ಞ, ಆರ್ಥಿಕ ಸುಧಾರಣೆಗಳ ಹರಿಕಾರ, ದೂರದೃಷ್ಟಿ, ಸಂಯಮ ಮತ್ತು ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ಸಶಕ್ತವಾಗಿ ಮುನ್ನಡೆಸಿದ ಅವರ ಕೊಡುಗೆ ಅಪಾರ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿ, ಭಾರತೀಯ ಅರ್ಥಶಾಸ್ತ್ರಜ್ಞ, ಹಿರಿಯ ರಾಜಕಾರಣಿ ಡಾ.ಮನಮೋಹನ್ ಸಿಂಗ್ 2004 ರಿಂದ 2014 ರವರೆಗೆ ಪ್ರಧಾನ ಮಂತ್ರಿಯಾಗಿ, 1970ರ ದಶಕದಲ್ಲಿ ಆರ್ಥಿಕ ಸಲಹೆಗಾರರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಮತ್ತು ಗವರ್ನರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು ಎಂದು ಸ್ಮರಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ ಮತ್ತಿತರರು ಕಂಬನಿ ಮಿಡಿದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendradr.manmohan singh demiseh d devegowdah d kumara swamyobituary
0 FacebookTwitterPinterestEmail
admin

previous post
ಲಂಚ ದರ ಪ್ರಕಟಿಸಿ: ಸಚಿವ ಕೃಷ್ಣಬೈರೇಗೌಡ ತರಾಟೆ
next post
ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಶಿಫಾರಸು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ