Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಶಿಫಾರಸು

by admin December 28, 2024
written by admin December 28, 2024 0 comments 1 minutes read
Share 0FacebookTwitterPinterestEmail
143

ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡುವಂತೆ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

ನಿಗಮಗಳು ಕಳೆದ 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದೆ, ಭಾರೀ ನಷ್ಟಕ್ಕೆ ಗುರಿಯಾಗಿದೆ.

ವಾರ್ಷಿಕ 3,650 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದ್ದು, ಪ್ರಯಾಣ ದರ ಪರಿಷ್ಕರಣೆ ನಂತರ ನಷ್ಟದ ಪ್ರಮಾಣ 1,800 ಕೋಟಿ ರೂ.ಗಳಿಗೆ ಇಳಿಯುತ್ತದೆ.

ಪಾರ್ಸೆಲ್ ಸೇವೆ ಅನುಷ್ಟಾನ

ನಿಮಗಕ್ಕೆ ಆಗುತ್ತಿರುವ ನಷ್ಟವನ್ನು ಪ್ರತಿ ಬಾರಿಯೂ ಭರಿಸಲಾಗದು, ಸಂಪನ್ಮೂಲ ಕ್ರೋಡೀಕರಣಕ್ಕೆ ದರ ಹೆಚ್ಚಳ ಜೊತೆಗೆ ಪಾರ್ಸೆಲ್ ಸೇವೆಯನ್ನೂ ಅನುಷ್ಟಾನಗೊಳಿಸಿ, ನಿಗಮದ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕರಿಯಾಗಿ ತಿಳಿಸಿ, ಸಂಸ್ಥೆಯಲ್ಲಿರುವ 200 ಎಕರೆ ಭೂಮಿಯನ್ನು ಆದಾಯ ಕ್ರೋಡೀಕರಣಕ್ಕಾಗಿ ಕರ್ನಾಟಕ ಗೃಹ ಮಂಡಳಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

ಶಕ್ತಿ ಯೋಜನೆ ಜಾರಿ ನಂತರ ಪ್ರತಿನಿತ್ಯ ಪ್ರಯಾಣಿಕರ ಸಂಖ್ಯೆ 80 ಲಕ್ಷದಿಂದ 1.05 ಕೋಟಿಗೆ ಏರಿಕೆಯಾಗಿದೆ.

ಅದರಲ್ಲಿ 26 ಲಕ್ಷ ಮಹಿಳೆಯರು ಸೇರಿದ್ದಾರೆ, ಸರ್ಕಾರ ನೀಡುವ ಸಬ್ಸಿಡಿ ಜೊತೆಗೆ ನಿಗಮಗಳು ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚು ಒತ್ತು ನೀಡದಿದ್ದರೆ ಪ್ರಯಾಣಿಕರಿಗೆ ಮೂಲಸೌಕರ್ಯ ನೀಡಲು ಕಷ್ಟಕರವಾಗುತ್ತದೆ.

ವಿದ್ಯುತ್ ಚಾಲಿತ ಬಸ್

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ನೀಡುವ ವಿದ್ಯುತ್ ಚಾಲಿತ ಬಸ್‌ಗಳನ್ನು ಪಡೆಯಲು ಹೆಚ್ಚು ಆದ್ಯತೆ ಕೊಡಿ.

ವಾಹನಗಳಿಗೆ ಜಿಪಿಎಸ್ ಸಾಧನ ಅಳವಡಿಕೆ ಮತ್ತು ಇ-ಆಡಳಿತಕ್ಕೆ ಹೆಚ್ಚು ಒತ್ತು ಕೊಡುವಂತೆ ತಿಳಿಸಿರುವುದಲ್ಲದೆ, ನಿಗದಿತ ದಿನಗಳೊಳಗೆ ಕಾರ್ಯಕ್ರಮ ರೂಪಿಸಲು ಆದೇಶ ಮಾಡಿದೆ.

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಅವರಲ್ಲದೆ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ವಿವಿಧ ಸಾರಿಗೆ ನಿಗಮಗಳ ವ್ಯವಸ್ಥಾಪಕರಾದ ವಿ.ಅನ್ಬುಕುಮಾರ್, ಆರ್.ರಾಮಚಂದ್ರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಬಿಜೆಪಿ ಆಕ್ಷೇಪ

ಈ ಮಧ್ಯೆ, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿ, ಸಾರಿಗೆ ಇಲಾಖೆಯನ್ನು ಸಮಾದಿ ಮಾಡುವ ಮಟ್ಟಕ್ಕೆ ಈ ಸರ್ಕಾರ ತಂದು ನಿಲ್ಲಿಸಿದೆ ಎಂದಿದೆ.

ಸಾರಿಗೆ ಇಲಾಖೆ ನೌಕರರು ಡಿಸೆಂಬರ್ 31 ರಿಂದ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದು, ಅವರ ಬೆಂಬಲಕ್ಕೆ ಬಿಜೆಪಿ ನಿಲ್ಲಲಿದೆ.

ಪ್ರಾಮಾಣಿಕ ಅಧಿಕಾರಿಗಳು ಶೇಖರಿಸಿಟ್ಟ ನಿಗಮದ ಆಸ್ತಿಯನ್ನು ಮಾರಾಟ ಮಾಡಲು ಈ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದೆ.

7,401 ಕೋಟಿ ರೂ. ಬಾಕಿ

ಅಧಿಕಾರಿ, ಸಿಬ್ಬಂದಿಗೆ ವೇತನ ನೀಡಲು ಆಸ್ತಿ ಮಾರಾಟಕ್ಕೆ ಮುಂದಾಗಿದೆ, ಶಕ್ತಿ ಯೋಜನೆ ಜಾರಿ ನಂತರ ಸರ್ಕಾರ ಇದುವರೆಗೆ 7,401 ಕೋಟಿ ರೂ. ಕೊಡಬೇಕಿದೆ, ನಿಗಮದ ಮೇಲೆ 5,614 ಕೋಟಿ ರೂ. ಸಾಲದ ಹೊರೆ ಇದೆ.

ಇಂತಹ ಸಂದಿಗ್ಧಸ್ಥಿತಿಯಲ್ಲಿ ಸರ್ಕಾರ ಮಧ್ಯೆ ಪ್ರವೇಶ ಮಾಡಿ ನಿಗಮ ಮತ್ತು ನೌಕರರನ್ನು ಉಳಿಸುವ ಬದಲು ದಿನನಿತ್ಯ ಬಡಾಯಿ ಕೊಚ್ಚಿಕೊಂಡು ತಿರುಗುತ್ತಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

Share this:

  • WhatsApp
  • Post
  • Tweet
  • Print
  • Email
bjp supportbus fare to hike 15%ksrtc to go on strike from 31st december
Share 0 FacebookTwitterPinterestEmail
admin

previous post
ಮನಮೋಹನ್ ಸಿಂಗ್ ನಿಧನಕ್ಕೆ ದೇವೇಗೌಡರ ಕಂಬನಿ
next post
ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ