Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿಯಾಗಲು ನನಗೆ ಶಾಸಕರ ಬೆಂಬಲ ಬೇಡ

by admin January 11, 2025
written by admin January 11, 2025 0 comments 2 minutes read
Share 0FacebookTwitterPinterestEmail
79

ನನ್ನ ಪರವಾಗಿ ಕಾರ್ಯಕರ್ತರು ಕೂಗುವುದು ಬೇಡ

ಶೃಂಗೇರಿ:ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ, ನನಗೆ ಯಾರ ಬೆಂಬಲವೂ ಬೇಡ, ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ಕಾಗಿ ಹೇಳಿದ್ದಾರೆ.

ನಾನುಂಟು ಕಾಂಗ್ರೆಸ್ ಪಕ್ಷವುಂಟು, ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ, ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ, ನಾನು ನನ್ನ ಕರ್ತವ್ಯ ಮಾಡುತ್ತೇನೆ.

ಜನ ಆಶೀರ್ವಾದ ಮಾಡಿದ್ದಾರೆ

ನನ್ನ ರಾಜಕೀಯ ಜೀವನದ ತಿರುವುಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದು ಬೇಡ, ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ, ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ, ಐದು ವರ್ಷ ಸರ್ಕಾರ ಮಾಡುತ್ತೇವೆ, ಪಕ್ಷ ಹೇಳಿದಂತೆ ನಾನು ಹಾಗೂ ಮುಖ್ಯಮಂತ್ರಿ ಕೆಲಸ ಮಾಡುತ್ತೇವೆ, ಬೇರೆಯವರ ಮಾತುಗಳು ಗೌಣ ಎಂದರು.

ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗರೊಂದಿಗೆ ಮಾತನಾಡಿದ ಅವರು, “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ, ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದರು.

ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು, ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ, ಟೆಂಪಲ್ ರನ್ ಎಂಬುದಾಗಿ ವ್ಯಾಖ್ಯಾನ ಮಾಡುವುದಾದರೆ, ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ.

ಮುಖ್ಯಮಂತ್ರಿ ಗಾದಿಗೆ ಕಾಂಗ್ರೆಸ್ ಮಿಡ್‌ನೈಟ್ ಮೀಟಿಂಗ್!
ಕರ್ಮ ಹಲವು ನಿಷ್ಠೆ ಒಂದೇ

ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ, ಅವರವರ ವಿಚಾರ ಅವರವರ ನಂಬಿಕೆ, ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ, ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ.

ಇಂದು ಬಹಳ ಪವಿತ್ರವಾದ ದಿನ, ಭಾರತಿ ತೀರ್ಥ ಮಹಾಸ್ವಾಮಿಗಳು ಮಠದ ಜವಾಬ್ದಾರಿ ಸ್ವೀಕರಿಸಿ 50 ವರ್ಷಗಳು ಪೂರ್ಣಗೊಂಡಿವೆ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಶ್ಲೋಕ, ಧರ್ಮವನ್ನು ಯಾರು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ ಎಂಬ ಸಂದೇಶ ಸಾರುತ್ತದೆ, ಅದರಂತೆ ಮಹಾಸ್ವಾಮಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡದೆ ಕೇವಲ ಧರ್ಮ, ಸಂಸ್ಕೃತಿ, ಸಂಸ್ಕಾರ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ, ತಮ್ಮ ಕರ್ತವ್ಯ ನಿಭಾಯಿಸಿಕೊಂಡು ನಮಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ.

ನನಗೆ ಮಹಾಸ್ವಾಮಿಗಳ ಮೇಲೆ ವಿಶೇಷವಾದ ನಂಬಿಕೆ, ಭಕ್ತಿ ಇದೆ, ತಾಯಿ ಸರಸ್ವತಿ ಅವರಿಗೆ ಆಶೀರ್ವಾದ ಮಾಡಿದ್ದಾಳೆ, ಇಲ್ಲಿ ಸಂಸ್ಕೃತ ವಿದ್ಯಾಪೀಠ ಮಾಡಲು ರಾಜೀವ್ ಗಾಂಧಿ ತೀರ್ಮಾನಿಸಿದರು, ಮಠವು ಬೆಂಗಳೂರಿನಲ್ಲಿ ಮಕ್ಕಳಿಗೆ ಜ್ಞಾನದ ದೀಪ ಬೆಳಗುವ ಪ್ರಯತ್ನ ಮಾಡುತ್ತಿದೆ, ಇವರ ಶುಭ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ, ಸರ್ಕಾರ ಪರ ಹಾಗೂ ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.

’ನಮ್ಮ ತೆರಿಗೆ ನಮ್ಮ ಹಕ್ಕು’

ಪ್ರವಾಸಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿತ ಕಾಪಾಡಲು ಕೇಂದ್ರ ಸರ್ಕಾರದ ವಿರುದ್ಧ ’ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟ ಮಾಡಲೇಬೇಕಿದೆ ಎಂದರು.

ರಾಜ್ಯದ ತೆರಿಗೆ ಪಾಲಿನ ಅನ್ಯಾಯದ ವಿರುದ್ಧ ಕಾನೂನಾತ್ಮಕವಾಗಿ ಹೇಗೆ ಹೋರಾಟ ನಡೆಸಬೇಕೆಂಬ ಬಗ್ಗೆ ಮುಖ್ಯಮಂತ್ರಿಗಳು ಅಧ್ಯಯನ ಮಾಡುತ್ತಿದ್ದು, ರಾಜ್ಯ ಬಜೆಟ್ ಮಂಡನೆ ವೇಳೆ ಅಸಮಾನ ಹಂಚಿಕೆಗೆ ಉತ್ತರ ಕೊಡುತ್ತೇವೆ.

ನೀರಾವರಿ ಮತ್ತು ನಗರಾಭಿವೃದ್ಧಿಗೆ ನೀಡುವ ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ.

ಕರ್ನಾಟಕಕ್ಕೆ ಬರಬೇಕಿರುವ ತೆರಿಗೆ ಪಾಲು ಮತ್ತು ಅಭಿವೃದ್ಧಿ ಅನುದಾನ ಕೊಡಿಸುವಲ್ಲಿ ರಾಜ್ಯ ಬಿಜೆಪಿ ಸಂಸದರು ಏಕೆ ಮೌನವಾಗಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದರು.

Share this:

  • WhatsApp
  • Post
  • Tweet
  • Print
  • Email
dcm d k shivakumarfight against central govt.our tax our right
Share 0 FacebookTwitterPinterestEmail
admin

previous post
ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಹುದ್ದೆಗಳಿಗೆ ರೇಟ್‌ಕಾರ್ಡ್ !
next post
ಮುಖ್ಯಮಂತ್ರಿ ಗಾದಿಗೆ ಕಾಂಗ್ರೆಸ್ ಮಿಡ್‌ನೈಟ್ ಮೀಟಿಂಗ್!

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ