Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಮಾಜಿಕ-ಶೈಕ್ಷಣಿಕ ವರದಿ: ಇಕ್ಕಟ್ಟಿನಲ್ಲಿ ಸಿದ್ದರಾಮಯ್ಯ

by admin January 15, 2025
written by admin January 15, 2025 0 comments 2 minutes read
0FacebookTwitterPinterestEmail
180

ನವದೆಹಲಿ:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಗುರುವಾರ ನಡೆಯುವ ಮಂತ್ರಿಮಂಡಲದಲ್ಲಿ ಮಂಡಿಸದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೇ ಗಳಿಗೆಯಲ್ಲಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.

ಗುರುವಾರ ಬೆಳಗ್ಗೆ ನಡೆಯಲಿರುವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಮಂಡಿಸುವ ವಿಷಯ ಕಲಾಪ ಪಟ್ಟಿಯಲ್ಲಿ ಸೇರ್ಪಡೆಗೊಂಡಿತ್ತು.

ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ಸಲಹೆಯಂತೆ ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆ.

ಸಮುದಾಯಗಳ ವಿರೋಧ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ಒಕ್ಕಲಿಗ ಮತ್ತು ಲಿಂಗಾಯತ ಸೇರಿದಂತೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.

ವರದಿ ಅನುಷ್ಟಾನಗೊಂಡರೆ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಮೇಲ್ಜಾತಿಯವರನ್ನು ಪೂರ್ಣವಾಗಿ ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದರು.

ಕಾಂಗ್ರೆಸ್ ನೂತನ ಭವನ ಉದ್ಘಾಟನೆಗೆಂದು ದೆಹಲಿಯಲ್ಲೇ ಬಿಡಾರ ಹೂಡಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಪ್ರತ್ಯೇಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಬದಲಾವಣೆಗೆ ಒತ್ತಡ
ಪರ-ವಿರೋಧ ನಿಲುವು

ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರದೇಶ ಕಾಂಗ್ರೆಸ್ ಮತ್ತು ಸರ್ಕಾರದಲ್ಲಿ ಪರ-ವಿರೋಧ ನಿಲುವುಗಳು, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲ ವರಿಷ್ಠರಿಗೆ ವರದಿ ಸಲ್ಲಿಸಿದ್ದಾರೆ.

ಇದರ ಬೆನ್ನಲ್ಲೇ ಶಿವಕುಮಾರ್ ನಿನ್ನೆ ರಾತ್ರಿ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಗಾದಿ ಸಂಬಂಧದ ವಿವಾದ ಹಾಗೂ ಔತಣಕೂಟ ಸಭೆಗಳು ಹಾಗೂ ಸಿದ್ದರಾಮಯ್ಯ ಗುರುವಾರ ಸಂಪುಟ ಸಭೆಯಲ್ಲೇ ಶೈಕ್ಷಣಿಕ ವರದಿ ಮಂಡನೆಗೆ ಮುಂದಾಗಿರುವುದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂಬ ಮಾಹಿತಿಯನ್ನು ವಿವರಿಸಿದ್ದರು.

ವರದಿ ಅನುಷ್ಟಾನದಿಂದ ಪಕ್ಷದ ಮೇಲೆ ಪರಿಣಾಮ ಬೀರಲಿದೆ, ಅದರಲ್ಲಿ ಕೆಲವು ಬದಲಾವಣೆ ಮಾಡಿ ನಂತರ ಅನುಷ್ಟಾನಗೊಳಿಸಲಿ, ಆದರೆ, ತರಾತುರಿ ಬೇಡ, ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಸಲಹೆ ನೀಡುವಂತೆ ಖರ್ಗೆ ಅವರಿಗೆ ಮನವಿ ಮಾಡಿಕೊಂಡಿದ್ದರು.

ಮಧ್ಯೆಪ್ರವೇಶಿಸಲು ಮನವಿ

ತದನಂತರ ಸೋನಿಯಾ ಗಾಂಧಿ ಭೇಟಿ ಸಂದರ್ಭದಲ್ಲೂ ಶಿವಕುಮಾರ್, ಇದೇ ವಿಷಯದ ಬಗ್ಗೆ ಮಾಹಿತಿ ನೀಡಿ, ಮಧ್ಯೆಪ್ರವೇಶಿಸುವಂತೆ ಕೋರಿದ್ದರು.

ಈ ಬೆಳವಣಿಗೆ ನಂತರ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡ ಉಭಯ ನಾಯಕರು ಶೈಕ್ಷಣಿಕ ವರದಿ ಮಂಡನೆ ಮುಂದೂಡುವಂತೆ ಸಲಹೆ ಮಾಡಿದರು.

ವರಿಷ್ಠರ ಸಲಹೆಗೆ ತಲೆಬಾಗಿದ ಮುಖ್ಯಮಂತ್ರಿ ಅವರು, ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಲ್ಲದೆ, ಮಾಧ್ಯಮದ ಬಳಿಯೂ, ನಾಳಿನ ಮಂತ್ರಿಮಂಡಲ ಸಭೆಯಲ್ಲಿ, ಶೈಕ್ಷಣಿಕ ವರದಿ ಬರುತ್ತಿಲ್ಲ, ಒಂದು ವಾರದ ನಂತರ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಕುರ್ಚಿಗಾಗಿ ಸಿದ್ದರಾಮಯ್ಯ ಜಾತಿ ಜನಗಣತಿ ಜಪ
ಡಾ.ಜಿ.ಪರಮೇಶ್ವರ್

ಇದರ ನಡುವೆ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ ಎಂದಿದ್ದರು.

ವರದಿ ಕುರಿತು ಯಾವುದೇ ನಿರ್ಧಾರ ಸರ್ಕಾರದ ವಿಶೇಷಾಧಿಕಾರವಾಗಿದ್ದು, ವಿಶ್ಲೇಷಣೆ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ, ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್‌ನ ಕೆಲವರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವರದಿ ಅನುಷ್ಠಾನ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು, ವರದಿಯಲ್ಲಿ ಏನಿದೆ ಎಂಬುದನ್ನು ಸಾರ್ವಜನಿಕಗೊಳಿಸಬೇಕೆಂಬ ಬೇಡಿಕೆ ಇದೆ, ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯ ಸಮೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, “ಅವೈಜ್ಞಾನಿಕ” ಎಂದು ಟೀಕಿಸಿರುವುದಲ್ಲದೆ, ಹೊಸದಾಗಿ ಸಮೀಕ್ಷೆಗೆ ಒತ್ತಾಯಿಸಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censuscm siddaramaiah in dilemmacongres high command
0 FacebookTwitterPinterestEmail
admin

previous post
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಬದಲಾವಣೆಗೆ ಒತ್ತಡ
next post
ಕೆಪಿಸಿಸಿ ಅಧ್ಯಕ್ಷ ಹುದ್ದೆ ಅಂಗಡಿಯಲ್ಲಿ ಮಾರಾಟಕ್ಕಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ