Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ಬಂಡಾಯವೂ ಇಲ್ಲ

by admin January 20, 2025
written by admin January 20, 2025 0 comments 2 minutes read
Share 0FacebookTwitterPinterestEmail
30

ಬೆಳಗಾವಿ:ಕಾಂಗ್ರೆಸ್‌ನಲ್ಲಿ ಯಾವ ಬಂಡಾಯವೂ ಇಲ್ಲ, ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಪಕ್ಷ ಉಳಿಸುವುದು, ಸರ್ಕಾರ ಭದ್ರವಾಗಿಡುವುದೇ ನನ್ನ ಕರ್ತವ್ಯ, ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ, ಕಾರ್ಯಕರ್ತರ ರಕ್ಷಣೆ ನನ್ನ ಮೊದಲ ಕರ್ತವ್ಯ, ನಾನು ನನ್ನ ಕೆಲಸ ಮಾಡುತ್ತಿದ್ದೇನೆ, ಯಾರೋ ಹೇಳಿದ ಸುಳ್ಳನ್ನು ಮಾಧ್ಯಮದವರು ನಂಬಬಾರದು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ.

ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ, ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ.

ಸುರ್ಜೇವಾಲಾ ಬದಲಾವಣೆ ಸುಳ್ಳು ಮಾಹಿತಿ

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬದಲಾವಣೆಗೆ ಕೆಲವು ಸಚಿವರು ಅಧಿನಾಯಕ ರಾಹುಲ್ ಗಾಂಧಿಗೆ ದೂರು ನೀಡುತ್ತಿದ್ದಾರೆಂಬುದು ಸುಳ್ಳು ಮಾಹಿತಿ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ ಮಾಡಿದ್ದೇನೆ, ಪಕ್ಷಕ್ಕಾಗಿ ಹಲವು ತ್ಯಾಗ ಮಾಡಿದ್ದೇನೆ, ಧರಂಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ, ನನಗೆ ಪಕ್ಷವೇ ಮುಖ್ಯ, ನಾನು ಪಕ್ಷದಿಂದ ಬೆಳೆದವನು, ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು.

ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ, ನನಗೆ ಫಲದ ಅವಶ್ಯಕತೆಯೇ ಇಲ್ಲ, ಜನಕ್ಕೆ ಒಳ್ಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ಎಂದರು.

ಕೆಪಿಸಿಸಿ ಅಧ್ಯಕ್ಷ ಗಾದಿ ತ್ಯಜಿಸಲು ಶಿವಕುಮಾರ್ ನಿರ್ಧಾರ !
ಪ್ಲಾಂಟ್ ಮಾಡಿದ ಸ್ಟೋರಿ

ಫಿರೋಜ್ ಸೇಠ್ ಪಕ್ಷದ ಹಿರಿಯ ನಾಯಕರು, ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ, ಬೆಳಗಾವಿ ಸಮಾವೇಶ ಸಮಿತಿ ಸದಸ್ಯರಾದ ಅವರನ್ನು ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಭೇಟಿ ಮಾಡಿದ್ದೆ, ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್‌ಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಕಾರಣ ಎಂಬ ವಿಚಾರ ಗೊತ್ತಿಲ್ಲ, ನನಗೆ ಎಲ್ಲರೂ ಒಂದೇ, ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ, ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ, ನನಗೆ ಪಕ್ಷವೇ ಮುಖ್ಯ, ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ.

ಕಾಂಗ್ರೆಸ್‌ನ 60 ಶಾಸಕರು ಬಿಜೆಪಿಗೆ ಬರುತ್ತಾರೆಂಬ ಯತ್ನಾಳ್ ಹೇಳಿಕೆ ನೀಚ ರಾಜಕಾರಣ, ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ, ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ ಎಂದರು.

ಸಾಮಾಜಿಕ ನ್ಯಾಯ ಮೂಲ ಮಂತ್ರ

ಮಹಾತ್ಮ ಗಾಂಧಿ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ದೇಶ, ಸಾಮಾಜಿಕ ನ್ಯಾಯ ಉಳಿಸುವುದೇ ನಮ್ಮ ಮೂಲ ಮಂತ್ರ, ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರೆಸಲಾಗುವುದು.

ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ, ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ.

ದೆಹಲಿ ವಿಧಾನಸಭಾ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂ. ನೀಡುವ ’ಪ್ಯಾರಿ ದೀದಿ’ ಯೋಜನೆ ಪ್ರಕಟಣೆ ಮಾಡಿದ್ದೆ.

ಸಿದ್ದರಾಮಯ್ಯ ರಾಜ್ಯ ಬಜೆಟ್ ತಯಾರಿಯಲ್ಲಿದ್ದಾರೆ, ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ, ಈ ಹಿನ್ನೆಲೆಯಲ್ಲಿ ದೆಹಲಿ ಚುನಾವಣಾ ಪ್ರಚಾರದಿಂದ ಅವರಿಗೆ ಎಐಸಿಸಿ ಸಮಯ ನೀಡಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
belagavi aicc sessiondcm and kpcc president d k shiavkumarno fractions in state congres
Share 0 FacebookTwitterPinterestEmail
admin

previous post
ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ
next post
ಕೆಪಿಸಿಸಿ ಅಧ್ಯಕ್ಷ ಗಾದಿ ತ್ಯಜಿಸಲು ಶಿವಕುಮಾರ್ ನಿರ್ಧಾರ !

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ