Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಪತ್ನಿ ಮತ್ತು ಭೈರತಿ ಸುರೇಶ್‌ಗೆ ಇ.ಡಿ. ನೋಟಿಸ್

by admin January 27, 2025
written by admin January 27, 2025 0 comments 2 minutes read
0FacebookTwitterPinterestEmail
403

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬಿಡಿ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಬ್ಬರಿಗೂ ನೋಟಿಸ್ ನೀಡುವುದಲ್ಲದೆ, ಇದೇ 28ರ ಮಧ್ಯಾನ್ಹ 3 ಗಂಟೆಗೆ ಖುದ್ದು ಹಾಜರಾಗುವಂತೆ ಇ.ಡಿ. ಸೂಚಿಸಿದೆ.

ಪ್ರಕರಣದ ತನಿಖಾಧಿಕಾರಿ ಮುರಳಿಕೃಷ್ಣ ಅವರು ಜನವರಿ 24ರಂದು ಪಾರ್ವತಿ ಹಾಗೂ ಸುರೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.

ಆರೋಪಿಗಳು ಕೋರ್ಟ್ ಮೆಟ್ಟಿಲು

ನೋಟಿಸ್ ಪ್ರಶ್ನಿಸಿ ಇಬ್ಬರು ಆರೋಪಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಪಾರ್ವತಿ ಅವರಿಗೆ ಜನವರಿ 3ರಂದು ಇ.ಡಿ. ನೋಟಿಸ್ ನೀಡಿ, ಜನವರಿ 9ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಇದಕ್ಕೆ ತಮ್ಮ ವಕೀಲರ ಮೂಲಕ ಉತ್ತರ ನೀಡಲು 15 ದಿನಗಳ ಕಾಲಾವಕಾಶ ಕೋರಿದ್ದರು.

ಹದಿನೈದು ದಿನಗಳ ಕಾಲಾವಕಾಶ ಮುಗಿಯುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮನವಿ ಸಲ್ಲಿಸಿ, ತಮಗೆ ವಯಸ್ಸಾಗಿದ್ದು, ತಾವು ನಮ್ಮ ಮನಗೇ ಬಂದು ವಿಚಾರಣೆ ನಡೆಸಬಹುದು ಎಂದು ಕೋರಿದ್ದರು.

ಮುಡಾ ಪ್ರಕರಣ: ಇ.ಡಿ. ನೋಟಿಸ್ ರಾಜಕೀಯ ಪಿತೂರಿ
24ರಂದು ಖುದ್ದು ಹಾಜರಿಗೆ ಆದೇಶ

ಮನವಿಗೆ ಸ್ಪಂದಿಸದ ಇ.ಡಿ. 24ರಂದು ನೋಟಿಸ್ ನೀಡಿ ಖುದ್ದು ಹಾಜರಾಗುವಂತೆ ಆದೇಶ ಮಾಡಿತು.

ಸಚಿವ ಭೈರತಿ ಸುರೇಶ್ ಸವರಿಗೂ ಇದು ಎರಡನೇ ನೋಟಿಸ್ ಆಗಿದೆ.

ನಿಯಮಾವಳಿಗಳನ್ನು ಗಾಳಿಗೆ 50:50ರ ಅನುಪಾತದಲ್ಲಿ ಪ್ರಾಧಿಕಾರ ನಿವೇಶನಗಳನ್ನು ಪಾರ್ವತಿ ಅವರಿಗೆ ಹಂಚಿಕೆ ಮಾಡಿತ್ತು ಎಂದು ಆರೋಪಿಸಲಾಗಿದೆ.

ಈ 14 ನಿವೇಶನಗಳನ್ನು ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪಡೆದುಕೊಂಡಿದ್ದರು, ಇದರಿಂದ ಪ್ರಾಧಿಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟು ಮಾಡಿದೆ.

ಒತ್ತಡಕ್ಕೆ ಮಣಿದು ಬಿಡಿ ನಿವೇಶನ

ಅಧಿಕಾರಿಗಳು, ಕಾಣದ ಕೈಗಳ ಒತ್ತಡಕ್ಕೆ ಮಣಿದು ಬಿಡಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರಿಂದ 58 ಕೋಟಿ ರೂ.ನಷ್ಟು ನಷ್ಟ ಆಗಿದೆ.

ಈ ಪ್ರಕರಣವನ್ನೇ ಮುಂದಿಟ್ಟುಕೊಂಡು ಪ್ರಾಧಿಕಾರ ಸಾವಿರಾರು ಬಿಡಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿದೆ.

ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಇ.ಡಿ. ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಇದುವರೆಗೆ ಮುಡಾದ ಹಿಂದಿನ ಇಬ್ಬರು ಆಯುಕ್ತರು ಹಾಗೂ ಅಧಿಕಾರಿಗಳು ಅಲ್ಲದೆ, ಡೆವಲಪರ‍್ಸ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿತ್ತು.

ಪ್ರಕರಣಕ್ಕೆ ಸಂಬಂಧಸಿದಂತೆ 80ಕ್ಕೂ ಹೆಚ್ಚು ಅಧಿಕಾರಿಗಳು, ಡೆವಲಪರ‍್ಸ್ ಮತ್ತು ಮಧ್ಯವರ್ತಿಗಳನ್ನು ಇ.ಡಿ. ವಿಚಾರಣೆಗೆ ಒಳಪಡಿಸಿ, ಇದರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತಕ್ಕೂ ಮಾಹಿತಿ ನೀಡಿತ್ತು.

ಸಿದ್ದರಾಮಯ್ಯರಿಂದ ಶಿವರಾಜ್ ಕುಮಾರ್ ಭೇಟಿ
ಜಾಲತಾಣದಲ್ಲಿ ವಿಷಯ ಬಹಿರಂಗ

ಇತ್ತೀಚೆಗೆ ತನ್ನ ಜಾಲತಾಣ ಖಾತೆಯಲ್ಲಿ ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ಹಾಗೂ ಪಾಲುದಾರರ ಕುರಿತು ವಿಷಯ ಬಹಿರಂಗ ಪಡಿಸಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ವೇಳೆಯಲ್ಲೇ ಮುಡಾದಲ್ಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಇ.ಡಿ. ಪದೇ ಪದೇ ಮಾಹಿತಿ ಬಹಿರಂಗ ಪಡಿಸಿತ್ತು.

ಇದರ ಬೆನ್ನಲ್ಲೇ ಪ್ರಮುಖ ಆರೋಪಿಗಳಾದ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
asked to attende d notice to cm wife and minister byrati sureshmuda scam
0 FacebookTwitterPinterestEmail
admin

previous post
ಸಿದ್ದರಾಮಯ್ಯರಿಂದ ಶಿವರಾಜ್ ಕುಮಾರ್ ಭೇಟಿ
next post
ಮುಡಾ ಪ್ರಕರಣ: ಸಿಬಿಐ ತನಿಖೆ ಆತಂಕ ಇಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ