Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by KM Shivaraju February 11, 2025
written by KM Shivaraju February 11, 2025 0 comments 1 minutes read
0FacebookTwitterPinterestEmail
201

ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು.

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರ್ಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ/ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲಿನಲ್ಲಿ ಕೂಡ ಸಿಗಲಿವೆ ಎಂದು ವಿವರಿಸಿದ್ದಾರೆ.

ಪ್ರಮಾಣಪತ್ರ ಆಧರಿತ ಅನುಮೋದನೆ

ಈ ಏಕಗವಾಕ್ಷಿ ವ್ಯವಸ್ಥೆಯಡಿ `ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು. ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟಲ್ಲಿನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ಅವರು ನುಡಿದಿದ್ದಾರೆ.

ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು `ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ

ಹೂಡಿಕೆಯ ವಿಚಾರದಲ್ಲಿ ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಕೈಗಾರಿಕಾ ಯೋಜನೆಗಳ ವಿಚಾರದಲ್ಲಿ ಉಳಿದ ಪ್ರಕ್ರಿಯೆಗಳು ಸುಲಭವೂ ತ್ವರಿತವೂ ಆಗಿರಲೇಬೇಕು. ಇಲ್ಲದಿದ್ದರೆ, ಅವಕಾಶಗಳು ಬೇರೆಯವರ ಪಾಲಾಗುತ್ತವೆ. ಏಕಗವಾಕ್ಷಿ ವ್ಯವಸ್ಥೆ ತರುತ್ತೇವೆಂದು ಮಾತು ಕೊಟ್ಟಿದ್ದೆವು. ಅದು ಈಗ ಈಡೇರಿದೆ. ಇದು ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ದಾಪುಗಾಲು ಎಂ. ಬಿ.ಪಾಟೀಲ ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
150 business services30 state departmentsChief MinisterGIMInvest Karnataka 25InvestorsKarnataka’sLaunchesRevampedSiddaramaiahSingle Window System
0 FacebookTwitterPinterestEmail
KM Shivaraju

previous post
ಮೈಸೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮ
next post
ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ ಡಿಸಿಎಂ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ