Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರದ ಧೋರಣೆಯೇ ಪುಂಡರಿಗೆ ಕುಮ್ಮಕ್ಕು

by admin February 11, 2025
written by admin February 11, 2025 0 comments 2 minutes read
0FacebookTwitterPinterestEmail
151

ಬೆಂಗಳೂರು:ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ, ರಾಜ್ಯದ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ ವಿಧ್ವಂಸಕ ಶಕ್ತಿಗಳ ಪ್ರದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಧೋರಣೆ ಮತೀಯವಾದಿ ಪುಂಡ-ಪೋಕರಿಗಳಿಗೆ ರಹದಾರಿ ಕೊಟ್ಟಂತಾಗಿದೆ.

ಕೋಮುವಾದಿ ರಕ್ಕಸ ವರ್ತನೆ ಸಮರ್ಥಿಸುವ ರೀತಿಯಲ್ಲಿ ಸಚಿವ ಕೆ.ಎನ್.ರಾಜಣ್ಣ, ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ರೀತಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ನಿರಂತರ ಕ್ರೌರ್ಯ

ಎನ್.ಆರ್.ಕ್ಷೇತ್ರದ ಉದಯಗಿರಿ ಠಾಣಾ ವ್ಯಾಪ್ತಿ ಹಿಂದಿನಿಂದಲೂ ಮುಸ್ಲಿಂ ಸಮುದಾಯ ಬಾಹುಳ್ಯ ಪ್ರದೇಶವಾಗಿದ್ದು, ಮತೀಯ ದುಷ್ಕರ್ಮಿಗಳು ನಿರಂತರವಾಗಿ ಕ್ರೌರ್ಯ ಮೆರೆಯುತ್ತಿದ್ದಾರೆ, ಪೊಲೀಸರ ಮೇಲೆ ಹಲ್ಲೆ ನಡೆಸುವಷ್ಟು ಬಲಿಷ್ಠರಾಗಿದ್ದಾರೆ, ಅಲ್ಲದೆ, ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳೂ ಈ ವ್ಯಾಪ್ತಿಯಲ್ಲಿ ಹಿಂದೆ ನಡೆದಿವೆ ಎಂದಿದ್ದಾರೆ.

ಇಷ್ಟಾಗಿಯೂ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಯಾವ ಕ್ರಮವನ್ನೂ ಕಾಂಗ್ರೆಸ್ ಸರ್ಕಾರ ಕೈಗೊಂಡಿಲ್ಲ, ಬದಲಾಗಿ ವಿಧ್ವಂಸಕ ಚಟುವಟಿಕೆ ತಾಣವಾಗಿ ಪೋಷಿಸುತ್ತಿದೆ, ಇದರ ಪರಿಣಾಮ ಕ್ಷುಲ್ಲಕ ಕಾರಣಕ್ಕೂ ಕಿಡೆಗೇಡಿಗಳೆಲ್ಲ ಒಟ್ಟುಗೂಡಿ ದಂಗೆ ಎದ್ದು ಪೊಲೀಸರಿಗೆ ಸವಾಲೆಸೆದಿದ್ದಾರೆ.

ಈ ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಮು ಪಕ್ಷಪಾತ ಧೋರಣೆ ಬದಿಗಿಟ್ಟು ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಶಾಂತಿ, ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ.

ಪ್ರಕರಣಗಳ ವಾಪಸ್ ಕಾರಣ

ಈ ಸಂಬಂಧ ಟ್ವೀಟ್ ಮಾಡಿರುವ ಅವರುಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯದ ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆದಿರುವುದು, ಗಲಭೆಕೋರರಿಗೆ ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಬಂದಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ, ಹುಬ್ಬಳ್ಳಿಯಂತೆ ಮೈಸೂರಿನಲ್ಲೂ ಪೊಲೀಸರ ಮೇಲೆ ಹಲ್ಲೆ ನಡೆದಿದೆ, ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್, ಅಖಿಲೇಶ್ ಯಾದವ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರತಿಭಟಿಸಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಹಿಂದೂ ಸಮುದಾಯದವರಿಗೆ ಬೆದರಿಕೆ ಹಾಕಲಾಗಿದ್ದು, ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಠಾಣೆ ಧ್ವಂಸ ಮಾಡುವ ಧೈರ್ಯ

ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಪ್ರಕರಣಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ಪಡೆದಿರುವುದು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ಇದು ಅಲ್ಪಸಂಖ್ಯಾತರ ಸರ್ಕಾರ ಎಂಬಂತಹ ಹೇಳಿಕೆಗಳು ಗಲಭೆಕೋರರಲ್ಲಿ ಪೊಲೀಸ್ ಠಾಣೆಯನ್ನೂ ಧ್ವಂಸ ಮಾಡಬಹುದೆಂಬ ಧೈರ್ಯ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಒಂದಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗಲಭೆ ಎಸಗುವವರ ವಿರುದ್ಧ ಪ್ರಕರಣ ದಾಖಲಿಸಿದರೂ, ವ್ಯರ್ಥ ಎಂಬುದು ಪೊಲೀಸರಿಗೂ ಮನವರಿಕೆ ಆದಂತಿದೆ.

ಗಲಭೆಕೋರರಿಗೆ ಪೊಲೀಸರ ಭಯವೇ ಇಲ್ಲವೆಂದರೆ ರಾಜ್ಯದಲ್ಲಿ ಕಾನೂನು ಸತ್ತಿದೆ ಎಂದರ್ಥ, ಮತಬ್ಯಾಂಕ್‌ಗಾಗಿ ಇಡೀ ವ್ಯವಸ್ಥೆ ಹಾಳು ಮಾಡಲಾಗುತ್ತಿದೆ.

ಮೈಸೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮ
ನಮ್ಮೆಲ್ಲರ ಜವಾಬ್ದಾರಿ

ಮೈಸೂರಿನ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಮಾತನಾಡಿದ್ದು, ಗಲಭೆಕೋರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಕೈಚೆಲ್ಲಿ ಕುಳಿತಿರುವುದರಿಂದ ನಾವೇ ಶಾಂತಿ ಕಾಪಾಡಬೇಕಿದೆ.

ಕೆಎಫ್‌ಡಿ, ಪಾಪ್ಯುಲರ್ ಫ್ರಂಟ್ ಮೊದಲಾದ ಸಂಘಟನೆಗಳು ಮೈಸೂರಿನಲ್ಲಿ ಸಕ್ರಿಯವಾಗಿವೆ, ಕೇರಳದಿಂದ ಬಂದು ಕೊಲೆ, ಅಪಹರಣ ಮಾಡಿ ಹೋಗಿರುವ ಘಟನೆಗಳು ನಡೆದಿವೆ ಎಂದರು.

ಕಾಂಗ್ರೆಸ್ ಶಾಸಕರಿಗೆ ಬೇರೆ ಆದಾಯವಿಲ್ಲದೆ ವರ್ಗಾವಣೆ, ಮರಳು ಮಾಫಿಯಾ ಮೂಲಕ ಹಣ ಸಂಪಾದನೆಯಲ್ಲಿ ತೊಡಗಿದ್ದಾರೆ, ಭದ್ರಾವತಿಯಲ್ಲೂ ಇಂಥದ್ದೇ ಘಟನೆ ನಡೆದಿದೆ, ಬೇರೆ ಜಿಲ್ಲೆಗಳಲ್ಲೂ ಅಧಿಕಾರಿಗಳಿಗೆ ಆಡಳಿತಾರೂಢ ಶಾಸಕರಿಂದ ಬೆದರಿಕೆ ಇದೆ, ಮಂಡ್ಯ, ಬೀದರ್, ಯಾದಗಿರಿ ಮೊದಲಾದೆಡೆ ಮರಳು ಮಾಫಿಯಾ ನಡೆಯುತ್ತಿದೆ, ಭದ್ರಾವತಿಯ ಮಹಿಳಾ ಅಧಿಕಾರಿ ಘಟನೆ ದಾಖಲಿಸಿಕೊಂಡು ಧೈರ್ಯವಾಗಿ ಮಾತನಾಡಿದ್ದಾರೆ, ಇತರೆ ಜಿಲ್ಲೆಗಳ ಅಧಿಕಾರಿಗಳು ವರ್ಗಾವಣೆ ಭಯದಿಂದ ಮಾತನಾಡುತ್ತಿಲ್ಲ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತು ಉಲ್ಲಂಘಿಸಿ ಕುಂಭಮೇಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ್ದು, ಯಾರನ್ನು ಅನುಸರಿಸಬೇಕು ಎಂಬ ಗೊಂದಲ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendraBJP leadersmysuru riotsr.ashokstate congres govt. responsible
0 FacebookTwitterPinterestEmail
admin

previous post
ಶಿವಕುಮಾರ್‌ಗೆ ಸಿಎಂ ಪಟ್ಟ ತಪ್ಪಿಸಲು ಮತ್ತೆ ಹುನ್ನಾರ !
next post
ಮೈಸೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ