Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಮೀನು ಸರ್ವೆ ರಾಜಕೀಯ ಸೇಡಿನ ಭಾಗ : ಕುಮಾರಸ್ವಾಮಿ

by KM Shivaraju February 19, 2025
written by KM Shivaraju February 19, 2025 0 comments 2 minutes read
Share 0FacebookTwitterPinterestEmail
58

ರಾಜಕೀಯವಾಗಿ ಎದುರಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ಬಿಡದಿ ಬಳಿ ಕೇತಿಗಾನಹಳ್ಳಿಯಲ್ಲಿನ ತಮ್ಮ ಜಮೀನು ಸರ್ವೆ ರಾಜಕೀಯ ಸೇಡಿನ ಭಾಗ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡುತ್ತಿದ್ದವರು ಈಗ ಐಎಎಸ್ ಅಧಿಕಾರಿಗಳ ಎಸ್‌ಐಟಿ ರಚನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭೂಮಿ ಖರೀದಿಸಿ ೪೦ ವರ್ಷಗಳಾಗಿವೆ, ಈಗ ಇದನ್ನು ಕೆದಕುವ ಮೂಲಕ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.

ಭೂಮಿಯನ್ನು ೧೯೮೪ರಲ್ಲಿ ಖರೀದಿ ಮಾಡಿದ್ದು, ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ಖರೀದಿಸಿದ್ದೇನೆ, ಅಂದಿನಿಂದಲೂ ಜಮೀನಿನ ಮೇಲೆ ಕೆಲವರ ಕಣ್ಣು ಬಿದ್ದಿದೆ, ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ.

ನನ್ನ ವಿರುದ್ಧ ೨೦೧೨ರಿಂದಲೂ ತನಿಖೆ ಮಾಡುತ್ತಿದ್ದು, ಇದುವರೆಗೆ ಏನು ಸಿಕ್ಕಿಲ್ಲ, ಸಿದ್ದರಾಮಯ್ಯ ರೀತಿ ನಾನು ಸರ್ಕಾರಿ ಜಮೀನು ಲೂಟಿ ಮಾಡಿಲ್ಲ, ಇದುವರೆಗಿನ ತನಿಖೆಗಳು ಸಾಕಾಗುವುದಿಲ್ಲವೆಂದು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಮಾಡಿಸುತ್ತಿದ್ದಾರೆ, ಯಾವುದೇ ತನಿಖೆ ಮಾಡಲಿ, ದೋಷ ಮುಕ್ತವಾಗಿದ್ದೇನೆ.

ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮತ್ತು ಜಿಲ್ಲಾ ಪಂಚಾಯತ್ ಸದಸ್ಯ ರಾಮಚಂದ್ರ ೧೯೮೬ರಲ್ಲಿ ಇದೇ ಜಮೀನು ವಿಷಯದಲ್ಲಿ ಅಂದಿನ ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗೆ ಪತ್ರ ಬರೆದಿದ್ದರು.

ತಮ್ಮ ದೂರಿನಲ್ಲಿ ಕುಮಾರಸ್ವಾಮಿ ಜಮೀನು ಖರೀದಿಸಿದ್ದಾರೆ ಎಂದಿದ್ದರೇ ಹೊರತು ಕಬಳಿಸಿದ್ದಾರೆ ಎಂಬ ಆರೋಪ ಮಾಡಿರಲಿಲ್ಲ, ನಾನು ಖರೀದಿ ಮಾಡಿದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದೇನೆ, ಯಾವುದೇ ಅಕ್ರಮ ಚಟುವಟಿಕೆ ನಡೆಸಿಲ್ಲ, ಎಲ್ಲಾ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ.

ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ನನ್ನ ಜಮೀನು ವಿಷಯದ ಕುರಿತು ಆರೋಪ ಮಾಡಿದ್ದಾರೆ, ಆದರೆ, ರಾಜ್ಯ ಹೈಕೋರ್ಟ್‌ನಿಂದ ಯಾವುದೇ ನೋಟಿಸ್ ಬಂದಿಲ್ಲ.

ರಾಜ್ಯ ಸರ್ಕಾರ ಕೆಲವರನ್ನು ಬಳಸಿಕೊಂಡು ನನ್ನ ಮೇಲೆ ಆರೋಪ ಮಾಡಿಸುತ್ತಿದೆ, ಇವರೆಲ್ಲ ಈಗ ಎಲ್ಲಿಂದ ಉದ್ಭವ ಆದರು ಎಂಬುದು ಗೊತ್ತಿಲ್ಲ, ೪೦ ವರ್ಷಗಳ ಹಿಂದೆ ಖರೀದಿಸಿದ ಭೂಮಿಯನ್ನು ಅನೇಕ ಬಾರಿ ಸರ್ವೇ ಮಾಡಿಸಿದ್ದಾರೆ.

ಪ್ರತೀ ಬಾರಿ ಸರ್ವೇ ನಡೆಯುವಾಗ ಕಾಂಗ್ರೆಸ್ ಪುಡಾರಿಗಳು ಕೆಲವರನ್ನು ಕರೆತಂದು ಮಾಧ್ಯಮಗಳಿಗೆ ಹೇಳಿಕೆ ಕೊಡಿಸಿದ್ದಾರೆ, ೪೦ ವರ್ಷಗಳಿಂದ ನನ್ನ ಬಳಿ ಯಾರೂ ಬಂದಿರಲಿಲ್ಲ, ದೂರುದಾರರು ಈಗ ಎಲ್ಲಿಂದ ಬಂದರು ಎಂದು ಪ್ರಶ್ನಿಸಿದರು.

ಎಸ್‌ಐಟಿ ಯಾವುದೇ ನೊಟೀಸ್ ನೀಡದೇ ಸರ್ವೇ ಮಾಡಲು ಹೊರಟಿತ್ತು, ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಕರೆ ಮಾಡಿ ಮಾತನಾಡಿ, ನೋಟಿಸ್ ಕೊಟ್ಟು ಸರ್ವೇ ಮಾಡಿ ಎಂದಿದ್ದೆ.

ಭೂಮಿ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ರಾಜ್ಯದಲ್ಲಿ ಯಾರು ಏನೇನು ಮಾಡಿದ್ದಾರೆ, ಎಷ್ಟೆಷ್ಟು ಭೂಮಿ ಲೂಟಿ ಹೊಡೆದಿದ್ದಾರೆ ಎಂಬುದಕ್ಕೆ ದೊಡ್ಡ ಇತಿಹಾಸವೇ ಇದೆ, ಸಂವಿಧಾನಿಕ ಸಂಸ್ಥೆ, ತನಿಖಾ ವ್ಯವಸ್ಥೆಯನ್ನು ಮನಬಂದಂತೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವುದೂ ಗೊತ್ತಿದೆ, ಅವರ ದಾಖಲೆಗಳು ನನ್ನ ಬಳಿ ಇವೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಚಿಯರ್ ಲೀಡರ್ ದೇವೇಗೌಡ ಎಂಬುದಾಗಿ ಹೇಳಿಕೆ ನೀಡುವ ಮುನ್ನ ಸಿದ್ದರಾಮಯ್ಯ ತಮ್ಮ ಯೋಗ್ಯತೆ ಅರಿತುಕೊಳ್ಳುವುದು ಉತ್ತಮ.

ನೀರಾವರಿಗೆ ದೇವೇಗೌಡರು ಏನು ಮಾಡಿದ್ದಾರೆ ಎಂಬುದು ಇಡೀ ದೇಶಕ್ಕೇ ಗೊತ್ತಿದೆ, ಸಿದ್ದರಾಮಯ್ಯ ಏನು ಮಾಡಿದ್ದಾರೆ ಎನ್ನುವುದು ಜನರಿಗೂ ಗೊತ್ತಿದೆ.

ನೀರಾವರಿ, ರಾಜ್ಯದ ಜನತೆ ರಕ್ಷಣೆ ಕುರಿತು ಇವರಿಂದ ಹೇಳಿಸಿಕೊಳ್ಳಬೇಕಿಲ್ಲ, ರಾಜ್ಯದ ನೆಲ, ಜಲ, ಭಾಷೆ, ನೀರಾವರಿ ವಿಚಾರದಲ್ಲಿ ಸಿದ್ದರಾಮಯ್ಯ ಕೊಡುಗೆ ಏನು.

ಒಂದು ದಿನವಾದರೂ ನೀರಿನ ಬಗ್ಗೆ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾತಾಡಿದ್ದಾರಾ, ಎಲ್ಲಿಯಾದರೂ ಹೋರಾಟ ಮಾಡಿದ್ದಾರಾ, ೧೦೨ ಡಿಗ್ರಿ ಜ್ವರ ಇದ್ದರೂ, ಕೈಯ್ಯಲ್ಲಿ ಐವಿ ಇದ್ದರೂ ರಾಜ್ಯಸಭೆಯಲ್ಲಿ ಗೋದಾವರಿ-ಕೃಷ್ಣ-ಕಾವೇರಿ ನದಿಗಳ ಜೋಡಣೆ ಯೋಜನೆ ಕುರಿತು ದೇವೇಗೌಡರು ಮಾತನಾಡಿದರು, ನೀರಾವರಿ ಬಗ್ಗೆ ಇವರಿಂದ ಹೇಳಿಸಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

ತಮ್ಮ ಕೊಡುಗೆ ಬಗ್ಗೆ ಕೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ದುಡ್ಡು ಹೊಡೆದಿರುವುದೇ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ, ಇನ್ನೊಂದು ವಾರ ಸರ್ಕಾರದ ನಡೆ ನೋಡೊಕೊಂಡು ಆಮೇಲೆ ಮಾತನಾಡುತ್ತೇನೆ ಎಂದರು.

Share this:

  • WhatsApp
  • Post
  • Tweet
  • Print
  • Email
40 yearsallegesbehindCommentsDeve GowdahdkumaraswamyIAS SITIPS SITLand SurveyMocks Changespolitical vendettaSiddaramaiahtargeteunion minister
Share 0 FacebookTwitterPinterestEmail
KM Shivaraju

previous post
170 ರೂ. ಬದಲು ಫೆಬ್ರವರಿಯಿಂದಲೇ ಅನ್ನಭಾಗ್ಯ ಅಕ್ಕಿ
next post
ಗುತ್ತಿಗೆದಾರರ 64,000 ಕೋಟಿ ರೂ. ಬಿಲ್ ಬಾಕಿ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ