Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರ

150 ಪುಂಡಾನೆಗಳ ಬಂಧನಕ್ಕೆ ಮಿನಿ ಖೆಡ್ಡಾ

by admin February 25, 2025
written by admin February 25, 2025 0 comments 1 minutes read
Share 1FacebookTwitterPinterestEmail
65

ಬೆಂಗಳೂರು:ಅರಣ್ಯ ತೊರೆದು ಜನ ವಸತಿ ಪ್ರದೇಶಕ್ಕೆ ನುಗ್ಗುತ್ತಿರುವ ಕೆಲವು ಪುಂಡಾನೆಗಳಿಗಾಗಿ ಭದ್ರಾ ಕಾನನದಲ್ಲಿ ಆನೆ ಧಾಮ ನಿರ್ಮಿಸುವುದಾಗಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 150ಕ್ಕೂ ಹೆಚ್ಚು ಆನೆಗಳು ಕಾಡಿನಿಂದ ಹೊರಬಂದು ಮಾನವ ಸಂಘರ್ಷಕ್ಕೆ ಕಾರಣವಾಗುತ್ತಿವೆ, ಅಂತಹ ಆನೆಗಳನ್ನು ಗುರುತಿಸಿದ್ದು ಮಿನಿ ಖೆಡ್ಡಾ ಮೂಲಕ ಬಂಧಿಸಿ ಆನೆ ಧಾಮಕ್ಕೆ ರವಾನಿಸಲಾಗುವುದು ಎಂದರು.

2,000 ಹೆಕ್ಟೇರ್‌ನಲ್ಲಿ ಆನೆಧಾಮ

ಭದ್ರಾ ಅರಣ್ಯ ಪ್ರದೇಶದ 2,000 ಹೆಕ್ಟೇರ್‌ನಲ್ಲಿ ಧಾಮ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ, ಇಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು.

ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಅರಣ್ಯ ಪ್ರದೇಶಗಳಿಂದ ಹೊರಬಂದು ಜನ ವಸತಿಗಳಿಗೆ ಲಗ್ಗೆ ಇಟ್ಟು ಮನುಷ್ಯರ ಪ್ರಾಣ ತೆಗೆಯುತ್ತಿವೆ.

ಕಳೆದ ಎರಡು ದಿನಗಳಲ್ಲಿ ಆನೆಗಳಿಗೆ ಮೂರು ಜನ ಬಲಿಯಾಗಿದ್ದಾರೆ, ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ.

ಹಲವು ಯೋಜನೆ

ಕಾಡಿನಿಂದ ಆನೆ ಬರದಂತೆ ಹಲವು ಯೋಜನೆಗಳನ್ನು ರೂಪಿಸಿದರೂ ಪೂರ್ಣ ಪ್ರಮಾಣದಲ್ಲಿ ತಡೆಯಲು ಸಾಧ್ಯವಾಗುತ್ತಿಲ್ಲ.

ಕಾಡಂಚಿನ ಜನರು ಅರಣ್ಯ ಇಲಾಖೆ ನೀಡುವ ಆನೆಗಳ ಚಲನವಲನದ ಬಗೆಗಿನ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು, ಎಲ್ಲ ದುರ್ಘಟನೆಗಳು ಬೆಳಗಿನ ಮತ್ತು ಸಂಜೆ ವೇಳೆ ಸಂಭವಿಸುತ್ತಿದ್ದು, ಜಾಗರೂಕರಾಗಿರಬೇಕು.

ಆನೆ-ಮಾನವ ಸಂಘರ್ಷ, ವನ್ಯಜೀವಿ-ಮಾನವ ಸಂಘರ್ಷ ಇಂದಿನ ಸಮಸ್ಯೆಯಲ್ಲ, ಸಾವಿರಾರು ವರ್ಷಗಳಿಂದಲೂ ಇದೆ, ಒಂದೆಡೆ ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ, ಮತ್ತೊಂದೆಡೆ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಮಸ್ಯೆ ಉಲ್ಬಣವಾಗಲು ಕಾರಣವಾಗಿದೆ.

ಟೆಂಟಕಲ್ ಫೆನ್ಸಿಂಗ್

ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ರೈಲ್ವೆ ಬ್ಯಾರಿಕೇಡ್‌ಗಳನ್ನೂ ಹಾಕಲಾಗುತ್ತಿದೆ.

2024-25ನೇ ಸಾಲಿನಲ್ಲಿ 78.917 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದೆ, 41.87 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ, ಇನ್ನೂ 103 ಕಿ.ಮೀ. ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಕೆಲಸ ಆರಂಭವಾಗಲಿದೆ.

ದೇಶದಲ್ಲಿಯೇ ಅತಿ ಹೆಚ್ಚು ಅಂದರೆ,6,395 ಆನೆಗಳು ಕರ್ನಾಟಕದಲ್ಲಿವೆ, ಪುಂಡಾನೆ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶವನ್ನೂ ನಡೆಸಲಾಗಿದೆ, ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸಲಾಗುತ್ತಿದೆ, ಆನೆ ಕಾರ್ಯಪಡೆಯನ್ನೂ ರಚಿಸಲಾಗಿದೆ.

ಫಸಲು, ನೀರಿಗೆ ಬರುತ್ತಿವೆ

ಕಾಡಂಚಿನಲ್ಲಿ ಕೃಷಿ ಚಟುವಟಿಕೆ, ಕೆರೆಗಳನ್ನು ತುಂಬಿಸುವ ಕಾರ್ಯಗಳಿಂದಾಗಿ ಬಾಳೆ, ಹಲಸು, ಭತ್ತ ಇತ್ಯಾದಿ ಫಸಲು ತಿನ್ನಲು ಮತ್ತು ನೀರು ಕುಡಿಯಲು ಆನೆಗಳು ಊರಿಗೆ ಬರುತ್ತಿವೆ ಎಂಬುದು ತಜ್ಞರ ಅಭಿಪ್ರಾಯ.

ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
fencing around forestminister eshwara khandreoperation elephant
Share 1 FacebookTwitterPinterestEmail
admin

previous post
ಬರಿದಾದ ಖಜಾನೆ ತುಂಬಲು ಅಕ್ರಮ-ಸಕ್ರಮ !
next post
ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಪ್ಲ್ಯಾಸ್ಟಿಕ್ ಬಳಕೆ ನಿಷೇಧ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ