ಬೆಂಗಳೂರು:ಹನಿಟ್ರ್ಯಾಪ್ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದರು.
ಹನಿಟ್ರ್ಯಾಪ್ ತನಿಖೆಗೆ ಪ್ರತಿಪಕ್ಷ ಸದಸ್ಯರು ಒತ್ತಾಯಿಸಿದಾಗ ಉತ್ತರಿಸಿದ ಮುಖ್ಯಮಂತ್ರಿ, ಸಚಿವ ಕೆ.ಎನ್.ರಾಜಣ್ಣ ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ, ಪ್ರಕರಣದಲ್ಲಿ ಯಾರೇ ಸಿಲುಕಿದ್ದರೂ ರಕ್ಷಣೆ ಕೊಡುವುದು ಸರ್ಕಾರದ ಜವಾಬ್ದಾರಿ ಎಂದರು.
ಶಿಕ್ಷೆಯಾಗಲೇಬೇಕು
ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು, ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವರು ಉತ್ತರಿಸಿದ ಮೇಲೆ ಪುನಃ ವಿಷಯ ಪ್ರಸ್ತಾಪಿಸುವುದು ಸರಿಯಲ್ಲ.
ಹನಿಟ್ರ್ಯಾಪ್ ಯಾರೇ ಮಾಡಿಸಿದ್ದರೂ, ಅದು ತಪ್ಪು, ಎತ್ತು ಈಯಿತು ಎಂದಾಕ್ಷಣ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ, ರಾಜಣ್ಣ ಯಾರ ಹೆಸರನ್ನೂ ಹೇಳಿಲ್ಲ, ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು.
ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದರು.