Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಜಾತಿ ಗಣತಿ ವರದಿಗೆ ಸಚಿವ ಸಂಪುಟದಲ್ಲೂ ಒಡಕು !

by admin April 15, 2025
written by admin April 15, 2025 0 comments 1 minutes read
1FacebookTwitterPinterestEmail
211

ಬೆಂಗಳೂರು:ಜಾತಿ ಗಣತಿ ಸಮೀಕ್ಷಾ ವರದಿಗೆ ಹಲವು ಸಮುದಾಯಗಳ ವಿರೋಧದ ನಡುವೆಯೇ ಸಂಪುಟದ ಸಚಿವರಲ್ಲೂ ಬಣಗಳ ರೂಪ ಪಡೆದಿದೆ.

ವರದಿ ಅಂಕಿ-ಅಂಶ ಬಹಿರಂಗಗೊಳ್ಳುತ್ತಿದ್ದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಲು ಹೂಡಿದ ಷಡ್ಯಂತ್ರ ಎಂದು ಟೀಕಿಸಿದ್ದಾರೆ.

ಮರೆಮಾಚಿದ ವಾಸ್ತವ ಅಂಕಿ-ಅಂಶ

ವಾಸ್ತವ ಅಂಕಿ-ಅಂಶಗಳನ್ನು ಮರೆಮಾಚಿ ಒಕ್ಕಲಿಗ ಮತ್ತು ವೀರಶೈವ/ಲಿಂಗಾಯತ ಸಮುದಾಯದ ಜನಸಂಖ್ಯೆಯನ್ನು ಕಡಿತಗೊಳಿಸಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದೆ.

ವರದಿ ಅನುಷ್ಟಾನಕ್ಕೆ ಅವಕಾಶ ನೀಡುವುದಿಲ್ಲ, ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಒಕ್ಕಲಿಗ ಸಮುದಾಯದ ಮುಖಂಡರು ಬಹಿರಂಗವಾಗಿ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಿದ್ದಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪಕ್ಷಾತೀತವಾಗಿ ತಮ್ಮ ಸಮಾಜದ ಜನಪ್ರತಿನಿಧಿಗಳು ಮತ್ತು ಮುಖಂಡರ ಸಭೆ ಕರೆದಿದ್ದಾರೆ.

ಒಕ್ಕಲಿಗರ ಸಂಘ ಒಪ್ಪುವುದಿಲ್ಲ

ಇದರ ನಡುವೆ ರಾಜ್ಯ ಒಕ್ಕಲಿಗರ ಸಂಘ ಕಾಂತರಾಜ್ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಸುಳ್ಳು ಅಂಕಿ-ಅಂಶಗಳ ಮೂಲಕ ಸಮಯದಾಯವನ್ನು ಒಡೆಯುವ ಮತ್ತು ಕುಗ್ಗಿಸುವ ಕೆಲಸ ಸರ್ಕಾರದಿಂದ ನಡೆದಿದೆ ಎಂದು ಆರೋಪಿಸಿರುವುದಲ್ಲದೆ, ವರದಿ ಅನುಷ್ಟಾನಕ್ಕೆ ಮುಂದಾದರೆ, ಎಲ್ಲಾ ಅನಾಹುತಗಳಿಗೂ ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಸಿದೆ.

ಕುಮಾರಸ್ವಾಮಿ, ಸದಾನಂದಗೌಡ ಹಾಗೂ ಅಶೋಕ್ ನೀಡಿರುವ ಹೇಳಿಕೆಯಲ್ಲಿ, ನಾವು ಮೀಸಲಾತಿ ವಿರೋಧಿಗಳಲ್ಲ, ಅಂಕಿ-ಅಂಶಗಳ ಲೆಕ್ಕ ತಪ್ಪಾಗಿದೆ, ಒಕ್ಕಲಿಗ, ಲಿಂಗಾಯತ ಸಂಖ್ಯೆ ಕಡಿಮೆ ಮಾಡಿ, ಮತ್ತೊಂದು ಸಮುದಾಯದ ವಾಸ್ತವಿಕ ಸಂಖ್ಯೆಯನ್ನು ತಪ್ಪಾಗಿ ಹಿಗ್ಗಿಸುವ ತಂತ್ರ ನಡೆದಿದೆ.

ಇದು ಜಾತಿ ಗಣತಿಯೋ.. ಜಾತಿ ದ್ವೇಷ ಗಣತಿಯೋ
ಸಿದ್ದರಾಮಯ್ಯ ಕಿವುಡುತನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಪ್ರಯತ್ನಗಳನ್ನು ನಮ್ಮ ಸಮುದಾಯ ಒಪ್ಪುವುದಿಲ್ಲ, ಮೊದಲಿನಿಂದಲೂ ಇದು ಅವೈಜ್ಞಾನಿಕ ವರದಿ ಎಂಬುದಾಗಿ ಹೇಳುತ್ತಾ ಬಂದಿದ್ದರೂ, ಅವರು ಕಿವುಡಾಗಿ ವರ್ತಿಸುತ್ತಾ ಬಂದಿದ್ದಾರೆ.

ಸಿದ್ದರಾಮಯ್ಯ ಹೀಗೇ ಮುಂದುವರೆದರೆ, ಅವರ ಅಧಿಕಾರದ ಕೊನೆ ದಿನಗಳನ್ನು ಎಣಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈಗ ತಮ್ಮ ಪಕ್ಷದಲ್ಲಿ ತಮಗೊಬ್ಬ ಸ್ಫರ್ಧಿ ಇದ್ದಾರೆ ಎಂಬ ಕಾರಣಕ್ಕೆ, ನಿಮ್ಮ ವೈಯಕ್ತಿಕ ಪ್ರತಿಷ್ಠೆಗೆ ಇಡೀ ಸಮಾಜವನ್ನು ಏಕೆ ಬಲಿ ಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ದುರಹಂಕಾರ ಪ್ರವೃತ್ತಿ

ಸಿದ್ದರಾಮಯ್ಯ ಅವರ ದುರಹಂಕಾರ ಪ್ರವೃತ್ತಿ ಒಂದು ಸಮಾಜದ ಮೇಲಿನ ಗದಾ ಪ್ರಹಾರವಾಗಿದ್ದು, ಇದನ್ನು ಎಂದಿಗೂ ಸಹಿಸುವುದಿಲ್ಲ ಎಂದಿದ್ದಾರೆ.

ಕಾಂತರಾಜ್ ಹಾಗೂ ಜಯಪ್ರಕಾಶ್ ವರದಿ ವಿರೋಧಿಸಿ ಜನಸಮುದಾಯದಲ್ಲಿ ಬೇಗುದಿ ಹೆಚ್ಚುತ್ತಿದ್ದಂತೆ ಒಕ್ಕಲಿಗ ಹಾಗೂ ವೀರಶೈವ/ಲಿಂಗಾಯತ ಶಾಸಕರು ಪ್ರತ್ಯೇಕವಾಗಿ ಸಭೆಗಳನ್ನು ಮಾಡಿದ್ದಾರೆ.

ಇದರ ನಡುವೆ ವರದಿ ಬಗ್ಗೆ ಚರ್ಚಿಸಿ, ಮುಂದಿನ ತೀರ್ಮಾನ ಕೈಗೊಳ್ಳಲು, ಮುಖ್ಯಮಂತ್ರಿ, ಗುರುವಾರ ಸಂಜೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censuscentral minister h d kumara swamycm siddaramaiahd v sadananda gowdadcm d k shivakumarr.ashok
1 FacebookTwitterPinterestEmail
admin

previous post
ಇದು ಜಾತಿ ಗಣತಿಯೋ.. ಜಾತಿ ದ್ವೇಷ ಗಣತಿಯೋ
next post
ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ