Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

by KM Shivaraju May 8, 2025
written by KM Shivaraju May 8, 2025 0 comments 1 minutes read
0FacebookTwitterPinterestEmail
402

ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಚರ್ಚೆ

ಬೆಂಗಳೂರು: ಕೇಂದ್ರ ಸರ್ಕಾರ ಜಾತಿಗಣತಿ ನಡೆಸುವುದಾಗಿ ಪ್ರಕಟ ಮಾಡಿದ ನಂತರವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವೂ ಸಲ್ಲಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದಾರೆ.

ಮೇ 9ರಂದು ನಡೆಯುವ ಮಂತ್ರಿ ಮಂಡಲ ಸಭೆಯಲ್ಲಿ ವರದಿಯ ಶಿಫಾರಸ್ಸುಗಳ ಬಗ್ಗೆ ಚರ್ಚೆ ಮಾಡಲು ಮಂಡನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಬಹಳ ಹಿಂದೆ ವರದಿಯನ್ನು ಸಿದ್ದಪಡಿಸಿದೆ. ಕೇಂದ್ರ ಸರ್ಕಾರ ಈಗಷ್ಟೇ ಪ್ರಕಟ ಮಾಡಿದೆ ಜಾತಿ ಗಣತಿ ನಡೆಸಿ ವರದಿ ಬರಲು ಬಹಳ ಸಮಯವಿಡಿಯುತ್ತದೆ.

ನಮ್ಮ ವರದಿಯನ್ನು ಅನುಷ್ಟಾನಕ್ಕೆ ತರೋಣ. ತರುವುದಕ್ಕೂ ಮುನ್ನ ಸಾರ್ವಜನಿಕರ ಚರ್ಚೆಗೆ ಬಿಡೋಣ. ಅವರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳೋಣ ಎಂಬ ನಿಲುವಿಗೆ ಮುಖ್ಯಮಂತ್ರಿ ಅವರು ಅಂಟಿಕೊಂಡಿದ್ದಾರೆ.

ಮುಖ್ಯಮಂತ್ರಿ ನಿಲುವಿಗೆ ನಾಲ್ಕೈದು ಸಚಿವರು ಬೆನ್ನಿಗೆ ನಿಂತಿದ್ದಾರೆ. ಆದರೆ ಒಕ್ಕಲಿಗ ಮತ್ತು ಲಿಂಗಾಯಿತ ಸಚಿವರು ಏಕಾಏಕಿಯಾಗಿ ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಜಾತಿಗಣತಿ ನಡೆಸುವುದಾಗಿ ಪ್ರಕಟ ಮಾಡುವುದರಿಂದ ನಮ್ಮ ವರದಿ ಅನುಷ್ಠಾನದಿಂದ ಪ್ರಯೋಜವಿಲ್ಲ. ಸ್ವಲ್ಪ ದಿನ ಕಾದು ನೋಡೋಣ ಎಂಬ ನಿಲುವಿಗೆ ಈ ಸಮಾಜದ ಸಚಿವರುಗಳು ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.

ವರದಿಯ ಅಂಕಿ-ಅಂಶಗಳ ಬಗ್ಗೆ ಬಿನ್ನಾಭಿಪ್ರಾಯಗಳಿವೆ. ಅದನ್ನು ಸರಿಪಡಿಸಿ ನಂತರ ತೀರ್ಮಾನ ಕೈಗೊಳ್ಳೊಣ, ಈಗ ದುಡುಕುವುದು ಬೇಡ. ಮುಂದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಅನುಷ್ಠಾನದ ತರಾತುರಿ ಬೇಡ. ಈಗಾಗಲೇ ಕೆಲವು ಸಮಾಜಗಳು ವರದಿಯ ಅಂಕಿ-ಅಂಶಗಳನ್ನು ವಿರೋಧಿಸಿವೆ. ಆ ಸಮಾಜಗಳನ್ನು ವಿರೋಧ ಮಾಡಿಕೊಂಡು ನಾವು ಅನುಷ್ಠಾನಗೊಳಿಸುವುದರಿಂದ ಪ್ರಯೋಜನವೇನು ಎಂಬುದನ್ನು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಲು ಮುಂದಾಗಿದ್ದಾರೆ.

ಸಂಪುಟದಲ್ಲಿ ವಿರೋಧ ವ್ಯಕ್ತವಾಗುತ್ತದೆ ಎಂಬುದನ್ನು ಅರಿತಿದ್ದರೂ ಮುಖ್ಯಮಂತ್ರಿ ಅವರು ನಾಳಿನ ಸಂಪುಟ ಸಭೆಯಲ್ಲಿ ಮುಖ್ಯ ವಿಷಯವಾಗಿ ತೆಗೆದುಕೊಂಡಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗ 2024ರಲ್ಲಿ ನೀಡಿದ ವರದಿಯನ್ನು ಬೆಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿತ್ತು.
ಅಂದಿನ ಸಭೆಯಲ್ಲಿ ಬಹುತೇಕ ಸಚಿವರು ವರದಿಯ ಅಂಕಿ-ಅಂಶಗಳ ಬಗ್ಗೆ ಅಪಸ್ವರ ಎತ್ತಿದ್ದರಿಂದ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿರಲಿಲ್ಲ. ನಿಮ್ಮ ಅಭಿಪ್ರಾಯಗಳನ್ನು ಟಿಪ್ಪಣಿ ಮಾಡಿ ಮಂಡಿಸಿ ಎಂದು ಅಂದು ಮುಖ್ಯಮಂತ್ರಿ ಅವರು ಎಲ್ಲಾ ಸಚಿವರಿಗೂ ಸೂಚಿಸಿದ್ದರು.

ಮುಖ್ಯಮಂತ್ರಿ ಅವರ ಸೂಚನೆಯಂತೆ ಸಚಿವರುಗಳು ವರದಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳನ್ನು ಸಿದ್ದಪಡಿಸಿಕೊಂಡಿದ್ದು, ನಾಳೆ ಮಂತ್ರಿ ಮಂಡಲದಲ್ಲಿ ಮಂಡಿಸಲಿದ್ದಾರೆ. ವರದಿಗೆ ಅನುಷ್ಠಾನಕ್ಕೆ ಒಮ್ಮತದ ಅಭಿಪ್ರಾಯ ಮೂಡಿಬರುವ ಲಕ್ಷಣಗಳು ಕಂಡುಬಂದಿಲ್ಲ. ಆದರೆ ಮುಖ್ಯಮಂತ್ರಿ ಅವರು ವರದಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಿ ಸರ್ಕಾರಿ ದಾಖಲೆಗಳಲ್ಲೂ ದಾಖಲಿಸಲು ಹೊರಟಿದ್ದಾರೆ.
ಆದರೆ ಸಂಪುಟ ಸಭೆಯಲ್ಲಿ ಯಾವ ತೀರ್ಮಾನ ಹೊರ ಬರುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Backward Classes Commissioncabinetcaste censuscmdiscussedimplementkarnatakameetingreportSiddaramaiahstate
0 FacebookTwitterPinterestEmail
KM Shivaraju

previous post
ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು
next post
ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ