Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

by admin May 22, 2025
written by admin May 22, 2025 0 comments 2 minutes read
Share 0FacebookTwitterPinterestEmail
14

ಬೆಂಗಳೂರು:ವೈದ್ಯಕೀಯ, ಸ್ನಾತಕೋತ್ತರ ವೈದ್ಯಕೀಯ ಸೀಟ್ ಬ್ಲಾಕಿಂಗ್ ಹಾಗೂ ಕಪ್ಪು ಹಣ ಚಲಾವಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಮೂಹ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಎರಡನೇ ದಿನವಾದ ಗುರುವಾರವೂ ದಾಳಿ ಮುಂದುವರಿಸಿದೆ.

ತುಮಕೂರು, ನೆಲಮಂಗಲದ ವೈದ್ಯಕೀಯ ಶಿಕ್ಷಣ ಕಾಲೇಜು ಮತ್ತು ಆಸ್ಪತ್ರೆ ಅಲ್ಲದೆ, ತುಮಕೂರಿನ ವಿವಿಧೆಡೆ ಇರುವ ಶಿಕ್ಷಣ ಸಂಸ್ಥೆಗಳ ಮೇಲೂ ದೆಹಲಿ ಮತ್ತು ಚೆನ್ನೈನಿಂದ ಬಂದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಠಾತ್ ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟದ ಪ್ರಭಾವೀ ಸಚಿವರೊಬ್ಬರ ಒಡೆತನದ ಸಂಸ್ಥೆಗಳ ಮೇಲೆ ಹಠಾತ್ ದಾಳಿ ನಡೆದಿರುವುದು ಮುಂದಿನ ರಾಜಕೀಯ ಸಂಚಲನಕ್ಕೆ ಮುನ್ನಡಿ ಎನ್ನಲಾಗುತ್ತಿದೆ.

ಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಭಾರೀ ಪ್ರಮಾಣದಲ್ಲಿ ಹಣ ಕೈ ಬದಲಾವಣೆ ಆಗಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಕಳೆದ ಏಳು ವರ್ಷಗಳ ಹಿಂದೆ ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡಿತ್ತು.

ತದನಂತರವೂ ಎರಡು-ಮೂರು ಬಾರಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಲ್ಲದೆ, ಸಮೂಹ ಸಂಸ್ಥೆಗಳ ಅಧ್ಯಕ್ಷರೂ ಆಗಿರುವ ಡಾ.ಪರಮೇಶ್ವರ್ ಅವರನ್ನು ವಿಚಾರಣೆಗೂ ಒಳಪಡಿಸಿತ್ತು.

60 ಕೋಟಿ ರೂ. ದಾನ

ಪ್ರತೀ ವರ್ಷ ವೈದ್ಯಕೀಯ ಸೀಟುಗಳ ಪ್ರವೇಶ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಿದ್ಧಾರ್ಥ ಸಂಸ್ಥೆ 50 ರಿಂದ 60 ಕೋಟಿ ರೂ. ದಾನದ ರೂಪದಲ್ಲಿ ನೀಡುತ್ತಿತ್ತು.

ಒಟ್ಟಾರೆ 500 ಕೋಟಿ ರೂ.ಗಳನ್ನು ಸಿದ್ಧಾರ್ಥ ಶಿಕ್ಷಣ ಸಂಸ್ಥೆ ವಿವಿಧ ಸಂಘಗಳಿಗೆ ನೀಡಿದೆ, ಈ ವಹಿವಾಟಿಗೆ ತಕರಾರು ಎತ್ತಿದ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ಹಸ್ತಾಂತರಿಸಿತ್ತು.

ಇ.ಡಿ. ಸಹಾ ತನಿಖೆ ನಡೆಸಿ, ಕೋಟಿ ಕೋಟಿ ರೂ. ವರ್ಗಾವಣೆ ಆಗಿರುವ ಬಗ್ಗೆ ದಾಖಲೆ ಸಂಗ್ರಹಿಸಿದೆ, ಇದೀಗ ಹಣದ ಮೂಲ ಹುಡುಕುತ್ತಿರುವ ಇ.ಡಿ. ಪ್ರತೀ ವರ್ಷ ವೈದ್ಯಕೀಯ ಸೀಟುಗಳ ಪ್ರವೇಶದಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯ ತಪಾಸಣೆ ನಡೆಸಿದೆ.

2019ರಲ್ಲಿ ಐ.ಟಿ. ದಾಳಿ

ಕಳೆದ 2019ರಲ್ಲಿ ಆದಾಯ ತೆರಿಗೆ (ಐ.ಟಿ.) ದಾಳಿ ಸಂದರ್ಭದಲ್ಲಿ ಡಾ.ಪರಮೇಶ್ವರ್ ಆಪ್ತ ಸಹಾಯಕರ ಕಚೇರಿ, ಮನೆಗಳ ಮೇಲೂ ದಾಳಿ ನಡೆಸಿ ವಿಚಾರಣೆ ಮಾಡಿತ್ತು.

ಐ.ಟಿ. ತನಿಖೆಗೆ ಹೆದರಿ ಡಾ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ತಮ್ಮ ನಿವಾಸಕ್ಕೆ ಹತ್ತಿರದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಸಂಶಯಗಳು ಎದುರಾಗಿದ್ದವು, ರಮೇಶ್ ಆತ್ಮಹತ್ಯೆ ನಂತರ ಐ.ಟಿ. ತನಿಖೆ ಮುಂದುವರಿಸಲು ಹೆದರಿ ಸ್ಥಗಿತಗೊಳಿಸಿತ್ತು.

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ
ಸಿದ್ದಾರ್ಥ ಆತ್ಮಹ್ಯತ್ಯೆ

ಇದಕ್ಕೂ ಮುನ್ನ ಕಾಫಿ-ಡೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರು ಆತ್ಮಹ್ಯತ್ಯೆಗೆ ಶರಣಾಗಿದ್ದರು.

ಸಿದ್ದಾರ್ಥ ಅವರ ಆತ್ಮಹತ್ಯೆಗೂ ಮುನ್ನ, ಚಲಾವಣೆಯಿಂದ ಸ್ಥಗಿತಗೊಂಡಿದ್ದ 2000 ರೂ. ಮೌಲ್ಯದ ನೋಟುಗಳ ಬದಲಾವಣೆ ಆರೋಪದ ಮೇಲೆ ಐ.ಟಿ. ಮತ್ತು ಇ.ಡಿ. ದಾಳಿ ಮಾಡಿದ್ದನ್ನು ಸ್ಮರಿಸಬಹುದು.

ದಾಳಿ ನಂತರ ಇಬ್ಬರು ವ್ಯಕ್ತಿಗಳ ಆತ್ಮಹತ್ಯೆ ವಿಷಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು, ಇದರಿಂದ ಸಿದ್ದಾರ್ಥ ಮೇಲಿನ ತನಿಖೆಯನ್ನು ಐ.ಟಿ. ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಇ.ಡಿ. ದಾಳಿಗೆ ಪ್ರತಿಕ್ರಿಯಿಸಿರುವ ಡಾ.ಪರಮೇಶ್ವರ್, ಕಾನೂನಿಗಿಂತ ಯಾರೂ ಮೇಲಲ್ಲ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೇಳಿದ ಲೆಕ್ಕ ವಿವರಗಳನ್ನು ನೀಡುವಂತೆ ಸಂಸ್ಥೆ ಸಿಬ್ಬಂದಿಗೆ ಸೂಚಿಸಿದ್ದು, ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

Share this:

  • WhatsApp
  • Post
  • Tweet
  • Print
  • Email
black moneydr.g.parameshwarED raidmedical seat blocking
Share 0 FacebookTwitterPinterestEmail
admin

previous post
ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ
next post
ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

You may also like

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (239)
  • ದಿನ ಭವಿಷ್ಯ (110)
  • ರಾಜಕೀಯ (1,585)
  • ರಾಜ್ಯ (1,874)
  • ರಾಷ್ಟ್ರ (1,846)
  • ವಿಶ್ಲೇಷಣೆ (183)
  • ಶಿಕ್ಷಣ (319)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

    May 22, 2025
  • ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ