Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

by admin May 22, 2025
written by admin May 22, 2025 0 comments 1 minutes read
0FacebookTwitterPinterestEmail
158

ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಗೆ ಮುನ್ನ ರಾಜ್ಯ ಸಾರಿಗೆ ಸಂಸ್ಥೆ ತಮ್ಮ ಬಸ್ ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರ, ಡಿಪೋಗಳ ಮೇಲ್ದರ್ಜೆ, ಅಗತ್ಯ ಬಿದ್ದಲ್ಲಿ ಹೊಸ ಡಿಪೋಗಳ ಸ್ಥಾಪನೆ ಸೇರಿದಂತೆ ಮೂಲಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಕೇಂದ್ರ ಸಚಿವರು ಸೂಚಿಸಿದರು.

ಮಾಲಿನ್ಯರಹಿತ ಸಮೂಹ ಸಾರಿಗೆ

ಮಾಲಿನ್ಯರಹಿತ ಸಮೂಹ ಸಾರಿಗೆ ವ್ಯವಸ್ಥೆ ಬಲಪಡಿಸುವುದು ರಾಷ್ಟ್ರೀಯ ಅಗತ್ಯವಾಗಿದೆ, ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್‌ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದರು.

ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ ಸಂಬಂಧ ಕೇಂದ್ರ ಸಚಿವರ ಸಭೆಯಲ್ಲಿ ಕರ್ನಾಟಕ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಪಾಲ್ಗೊಂಡು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 7,000 ಎಲೆಕ್ಟ್ರಿಕ್ ಬಸ್‌ಗಳ ಬೇಡಿಕೆ ಸಲ್ಲಿಸಿದರು.

ಕಳೆದ ಕೆಲವು ದಿನಗಳ ಹಿಂದೆ ನವದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಎಲೆಕ್ಟ್ರಿಕ್ ಬಸ್‌ಗಳಿಗೆ ಬೇಡಿಕೆ ಇಟ್ಟಿದ್ದರು.

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ
ಅತ್ಯಧಿಕ ಬಸ್‌ಗಳ ಹಂಚಿಕೆ

ಮೊದಲ ಹಂತದಲ್ಲಿಯೇ ಬೆಂಗಳೂರಿಗೆ ಅತ್ಯಧಿಕ ಬಸ್‌ಗಳ ಹಂಚಿಕೆ ಭರವಸೆಯನ್ನೂ ಕೇಂದ್ರ ಸಚಿವರು ನೀಡಿದ್ದಾರೆ.

ಒಟ್ಟಾರೆ ದೆಹಲಿ ಸೇರಿದಂತೆ ದೇಶದ ಐದು ಪ್ರಮುಖ ನಗರಗಳಿಂದ 14,200 ಬಸ್‌ಗಳಿಗೆ ಬೇಡಿಕೆ ಇದ್ದು, ಈ ಪೈಕಿ 10,900 ಬಸ್‌ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ.

ಮೊದಲ ಹಂತದಲ್ಲಿ ಉದ್ಯಾನ ನಗರಿ ಬೆಂಗಳೂರಿಗೆ ಸಿಂಹಪಾಲು ದೊರೆಯಲಿದೆ, ಸುಮಾರು 800ಕಿ.ಮೀ. ವ್ಯಾಪ್ತಿಯಲ್ಲಿ ಬಿಎಂಟಿಸಿ ಕಾರ್ಯಾಚರಣೆ ನಡೆಸುತ್ತಿರುವ ಅಂಶವನ್ನು ಸಭೆಯಲ್ಲಿ ಪರಿಗಣಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4500 in first stagecentral minister h d kumara swamyelectric buses to karnatakapm e-drive plan
0 FacebookTwitterPinterestEmail
admin

previous post
ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ
next post
ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ