Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಸೆರೆವಾಸ ಶಿಕ್ಷೆ

by admin August 2, 2025
written by admin August 2, 2025 0 comments 2 minutes read
0FacebookTwitterPinterestEmail
62

ಬೆಂಗಳೂರು:ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಸೆರೆವಾಸ ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 10 ಲಕ್ಷ ರೂ. ದಂಡ ಹಾಕಿ ಮಹತ್ವದ ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಪ್ರಜ್ವಲ್ ದೋಷಿ ಎಂದಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದರು.

ಸಂತ್ರಸ್ತೆಗೆ 7 ಲಕ್ಷ ರೂ.

ಅಪರಾಧಿ ಮತ್ತು ಅವರ ಪರ ವಕೀಲರು ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮಾಡಿಕೊಂಡ ಮನವಿ ಪರಿಗಣಿಸದ ನ್ಯಾಯಾಲಯ ಜೀವನಪರ್ಯಂತ ಸೆರೆವಾಸ ಜೊತೆಗೆ ಎರಡು ವಿಧಿಗಳಡಿ ದಂಡವನ್ನೂ ವಿಧಿಸಿತು. ದಂಡದ ಮೊತ್ತದಲ್ಲಿ 7 ಲಕ್ಷ ರೂ.ಗಳನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಿದೆ.

ಐಪಿಸಿ ಸೆಕ್ಷನ್ 376 (2) (ಕೆ) ಹಾಗೂ 376 (2) (ಎನ್) ಅಡಿ ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.

ಶಿಕ್ಷೆ ಪ್ರಮಾಣವನ್ನು ಕಿಕ್ಕಿರಿದ ನ್ಯಾಯಾಲಯದಲ್ಲಿ ಮಧ್ಯಾನ್ಹ ಪ್ರಕಟಿಸಲಾಯಿತು.

ಶಿಕ್ಷೆ ಪ್ರಮಾಣ ವಾದ-ಪ್ರತಿವಾದ

ಇದಕ್ಕೂ ಮುನ್ನ ಬೆಳಗ್ಗೆ ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮತ್ತು ಪ್ರಜ್ವಲ್ ಪರ ವಕೀಲರ ವಾದವನ್ನು ವಿಶೇಷ ನ್ಯಾಯಾಲಯದ ಜಡ್ಜ್ ಆಲಿಸಿದರು.

ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ವಾದ ಮಂಡಿಸಿ, ಅಪರಾಧಿ ಪ್ರಜ್ವಲ್ ಜೀವಕ್ಕಿಂತ ಹೆಚ್ಚಿನ ಹಾನಿ ಸಂತ್ರಸ್ತ ಮಹಿಳೆಗೆ ಆಗಿದೆ, ಒಪ್ಪಿಗೆ ಇಲ್ಲದೇ ಲೈಂಗಿಕ ಕ್ರಿಯೆ ಚಿತ್ರೀಕರಿಸಿ, ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ನಡೆಸಲಾಗಿದೆ.

ಅತ್ಯಾಚಾರ ನಡೆಸಿದ ರೀತಿ ಅಪರಾಧಿಯ ವಕ್ರ ಮನಃಸ್ಥಿತಿ ತೋರಿಸುತ್ತದೆ, ಸಂಸದನಾಗಿ, ಕಾನೂನು ತಿಳಿದೂ ನೀಚ ಕೃತ್ಯ ಎಸಗಿರುವುದು ಗಂಭೀರ ಅಪರಾಧ, ಈತನ ವಿರುದ್ಧ ಇನ್ನಷ್ಟು ಅತ್ಯಾಚಾರ ಮೊಕದ್ದಮೆಗಳಿವೆ, ಬಹಳಷ್ಟು ಮಹಿಳೆಯರ ಅಶ್ಲೀಲ ವಿಡಿಯೋ ಮಾಡಲಾಗಿದೆ.

ತಪ್ಪಿಗೆ ಪಶ್ಚಾತ್ತಾಪವೇ ಕಾಣುತ್ತಿಲ್ಲ

ಸಾಕ್ಷ್ಯಾಧಾರ ನಾಶಪಡಿಸಲು ಯತ್ನಿಸಿರುವುದೂ ಗಂಭೀರ ಅಪರಾಧ, ಮಾಡಿದ ತಪ್ಪಿಗೆ ಪಶ್ಚಾತ್ತಾಪವೇ ಕಾಣುತ್ತಿಲ್ಲ, ಅಪರಾಧಿಗೆ ಜೀವನಪರ್ಯಂತ ಸೆರೆವಾಸ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸಂದೇಶ ನೀಡಬೇಕು, ಹಣ, ಅಧಿಕಾರ ಬಲ ಇರುವವರಿಗೆ ಕಡಿಮೆ ಶಿಕ್ಷೆಯಾಗಬಾರದು ಎಂದರು.

ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಸಂಸದರಾದವರೇ ನೀಚ ಕೃತ್ಯ ಎಸಗಿದ್ದು, ಕಿರಿಯ ವಯಸ್ಸಿನ ರಾಜಕಾರಣಿಯನ್ನು ಜನ ಆಯ್ಕೆ ಮಾಡಿರುವುದು ಏಕೆ, ಈತ ಮಾಡಿದ್ದೇನು ಎಂಬುದನ್ನು ಗಮನಿಸಬೇಕು, ಜೀವಾವಧಿ ಶಿಕ್ಷೆ, ಜೊತೆಗೆ ಅತಿ ಹೆಚ್ಚು ದಂಡ ವಿಧಿಸಬೇಕು.

ಮೊಕದ್ದಮೆಯೊಂದರಲ್ಲಿ ಅಪರಾಧಿಗೆ 25 ಲಕ್ಷ ರೂ.ವರೆಗೆ ದಂಡ ವಿಧಿಸಿದ ಉದಾಹರಣೆ ಇದೆ, ಪ್ರಜ್ವಲ್ ಬಡವನಲ್ಲ, ಕರೋಡ್‌ಪತಿ, ಹೆಚ್ಚಿನ ದಂಡ ವಿಧಿಸಿ ಅದರ ದೊಡ್ಡ ಭಾಗವನ್ನು ಸಂತ್ರಸ್ತೆಗೆ ನೀಡಬೇಕು, ಸಂತ್ರಸ್ತೆ ವಿಡಿಯೋ ವೈರಲ್ ಆಗಿರುವುದರಿಂದ ದುಡಿಯಲು ಎಲ್ಲೂ ಹೋಗದಂತಾಗಿದೆ, ಆಕೆಗೂ ಪರಿಹಾರದ ಅಗತ್ಯವಿದೆ ಎಂದರು.

ಚುನಾವಣೆ ವೇಳೆ ಏಕೆ ವಿಡಿಯೊ ವೈರಲ್

ಪ್ರಜ್ವಲ್ ರೇವಣ್ಣ ಪರ ವಕೀಲರಾದ ನಳಿನಾ ಮಾಯೇಗೌಡ ವಾದ ಮಂಡಿಸಿ, ಸರ್ಕಾರಿ ವಕೀಲರುಗಳು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸಂದೇಶ ನೀಡಬೇಕೆಂಬ ವಾದ ಮಂಡಿಸಿದ್ದಾರೆ, ಯುವ ಸಂಸದನಾಗಿ ಜನಸೇವೆ ಮಾಡಿದ್ದು, ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ, 2024ರ ಲೋಕಸಭಾ ಚುನಾವಣೆ ವೇಳೆಯೇ ವಿಡಿಯೋಗಳನ್ನು ಏಕೆ ವೈರಲ್ ಮಾಡಲಾಯಿತು.

ಮೊಕದ್ದಮೆ ಪ್ರಜ್ವಲ್ ವಿರುದ್ಧ ರಾಜಕೀಯ ಪ್ರೇರಿತವಾಗಿದೆ, ಆರೋಪಿಯ ರಾಜಕೀಯ ಸ್ಥಾನಮಾನ ಶಿಕ್ಷೆಗೆ ಕಾರಣವಾಗಬಾರದು, ಹಾಗಾದರೆ, ಇಷ್ಟು ದಿನದ ಒಳ್ಳೆ ಹೆಸರು ಏನಾಗಬೇಕು.

ಪ್ರಜ್ವಲ್‌ಗೆ 34 ವರ್ಷ, ಆತನ ಭವಿಷ್ಯವನ್ನೂ ಗಮನದಲ್ಲಿಡಬೇಕು, ಮಾಧ್ಯಮಗಳಲ್ಲಿ ಆತನ ತೇಜೋವಧೆಯಾಗಿದೆ, ಬಂಧನವಾದ ದಿನದಿಂದಲೂ ಜೈಲಿನಲ್ಲಿದ್ದಾನೆ, ವಯಸ್ಸಾದ ತಂದೆ ತಾಯಿ ಇದ್ದಾರೆ, ತಾತ ಮಾಜಿ ಪ್ರಧಾನಿ.

ಅಪರಾಧಿಗೇ ಹೆಚ್ಚಿನ ಹಾನಿ

ಸಂತ್ರಸ್ತೆ ಸಮಾಜದಿಂದ ತಿರಸ್ಕೃತಗೊಂಡಿಲ್ಲ, ತನ್ನ ಸಂಸಾರದೊಂದಿಗೆ ಜೀವನ ಸಾಗಿಸುತ್ತಿದ್ದಾರೆ, ವಿವಾಹವಾಗಿ ಮಕ್ಕಳಿವೆ, ಜೀವನ ನಡೆಯುತ್ತಿದೆ, ಸಂತ್ರಸ್ತೆಗಿಂತ ಅಪರಾಧಿಗೇ ಹೆಚ್ಚಿನ ಹಾನಿಯಾಗಿದೆ ಎಂದು ವಾದಿಸಿದರು.

ಅಪರಾಧಿ ಪರ ವಕೀಲರ ವಾದಕ್ಕೆ ಪ್ರಾಸಿಕ್ಯೂಷನ್ ಪರ ವಕೀಲ ಬಿ.ಎನ್.ಜಗದೀಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
life long jailprajval revannarape casespecial court judgement
0 FacebookTwitterPinterestEmail
admin

previous post
ಮಹಿಳೆ ಅತ್ಯಾಚಾರ ಪ್ರಕರಣ ದೋಷಿ ಪ್ರಜ್ವಲ್ ರೇವಣ್ಣ
next post
ಮಧ್ಯರಾತ್ರಿಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಬಂದ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ