Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪ್ರಾಯೋಜಿತ ಮತಗಳ್ಳತನಕ್ಕೆ ರಾಹುಲ್ ಗಾಂಧಿ ಪುರಾವೆ

by KM Shivaraju August 7, 2025
written by KM Shivaraju August 7, 2025 0 comments 1 minutes read
0FacebookTwitterPinterestEmail
229

ಬೆಂಗಳೂರು:ಕೇಂದ್ರ ಚುನಾವಣಾ ಆಯೋಗ ಪ್ರಾಯೋಜಿತ ಮತಗಳ್ಳತನ ಅಕ್ರಮ ವಿರುದ್ಧ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ರಾಷ್ಟ್ರದ ಜನತೆಯ ಗಮನ ಸೆಳೆಯಲು ನಾಳೆ (ಶುಕ್ರವಾರ) ನಗರದಲ್ಲಿ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಗಣ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಮಾವೇಶದಲ್ಲಿ ಹಲವು ನಾಯಕರು

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಬೆಂಗಳೂರು ಸಮಾವೇಶದ ನಂತರ ಇಡೀ ರಾಷ್ಟ್ರಾದ್ಯಂತ ಸಭೆ, ಸಮಾರಂಭ ನಡೆಸಿ ಚುನಾವಣಾ ಆಯೋಗದ ಮತಗಳ್ಳತನವನ್ನು ಜನರ ಮುಂದಿಡಲು ಹೊರಟಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಮಾರಂಭದಲ್ಲೇ ಬಹಿರಂಗಪಡಿಸಿ, ನಂತರ ಕೆಲವು ಮುಖಂಡರೊಂದಿಗೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯ ಮುಖ್ಯಚುನಾಚವಣಾ ಆಯುಕ್ತರಿಗೆ ಸಲ್ಲಿಸಲಿದ್ದಾರೆ.

ಬೃಹತ್ ಸಮಾವೇಶ

ಮತಗಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಇದುವರೆಗೂ ಹೇಳಿಕೆಗಳನ್ನು ನೀಡುತ್ತಿದ್ದರಾದರೂ ಬೃಹತ್ ಸಮಾವೇಶ ನಡೆಸಿ, ದಾಖಲೆಗಳನ್ನು ಜನರ ಮುಂದಿಡುವ ಕೆಲಸ ಮೊದಲ ಬಾರಿಯಾಗಿದೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬುದಕ್ಕೆ ಕೆಲವು ಪುರಾವೆಗಳನ್ನು ಸಂಗ್ರಹಿಸಿರುವ ರಾಹುಲ್, ಅವುಗಳನ್ನು ಅದೇ ಕ್ಷೇತ್ರದ ವ್ಯಾಪ್ತಿಗೆ ಬರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜನರ ಮುಂದಿಡುತ್ತಿದ್ದಾರೆ.

ಸಮಾವೇಶ ಯಶಸ್ವಿಗಾಗಿ ಪಕ್ಷ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ, ಜೊತೆಗೆ ಹೆಚ್ಚಿನ ಬಿಗಿ ಬಂದೋಬಸ್ತ್‌ಗಾಗಿ ಸರ್ಕಾರ ಹೆಚ್ಚುವರಿ ಪೋಲಿಸರನ್ನು ನಿಯೋಜಿಸಿದೆ.

ಕಾರ್ಯಕ್ರಮ ಯಶಸ್ವಿಗೆ ಶ್ರಮ

ಕಾರ್ಯಕ್ರಮ ಯಶಸ್ವಿಗೊಳಿಸುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ತಮ್ಮ ಹೈದರಾಬಾದ್ ಪ್ರವಾಸ ರದ್ದುಪಡಿಸಿ ಪಕ್ಷದ ಕಚೇರಿಯಲ್ಲಿ ಕುಳಿತು ಸಮಾವೇಶ ವ್ಯವಸ್ಥೆ ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮತಗಳ್ಳತನ ವಿಚಾರವನ್ನು ನಮ್ಮ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು ಮತದಾರರ ಹಕ್ಕಿನ ರಕ್ಷಣೆಗಾಗಿ ಹೊರಟಿದ್ದಾರೆ.

ಆಯೋಗಕ್ಕೆ ಪುರಾವೆ ಸಲ್ಲಿಕೆ

ಆಗಸ್ಟ್ 8ರಂದು ಬೆಳಗ್ಗೆ 10-30ಕ್ಕೆ ಆಗಮಿಸುವ ರಾಹುಲ್, ನೇರವಾಗಿ ಸಮಾವೇಶ ಸ್ಥಳ ತಲುಪಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಪುರಾವೆಗಳ ಸಮೇತ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಿದ್ದಾರೆ ಎಂದರು.

ಈ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆ ವೇಳೆ ಎಲ್ಲ ಪೊಲೀಸ್ ಭದ್ರತೆ ಕೈಗೊಂಡಿದ್ದು, ಕೇಂದ್ರದಿಂದ ಎಸ್‌ಪಿಜಿ ಬಂದಿದೆ, ಅವರೊಂದಿಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ, ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರಿಗೂ ಭದ್ರತೆ ಒದಗಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru rallycongres rallyrahul gandhi proof to state chief election commissionervote theft
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿ ರಾಜ್ಯ ಭೇಟಿ ಬೆನ್ನಲ್ಲೇ ಡಿಕೆಶಿ ಅಲರ್ಟ್ !
next post
ಕುತೂಹಲ ಮೂಡಿಸಿದ ಅಶೋಕ್-ಅಮಿತ್ ಷಾ ಭೇಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ