Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ದಲಿತ ಮುಖ್ಯಮಂತ್ರಿ ಹಕ್ಕೊತ್ತಾಯಕ್ಕೆ ಭಾರೀ ಸಿದ್ಧತೆ !

by KM Shivaraju August 20, 2025
written by KM Shivaraju August 20, 2025 0 comments 1 minutes read
0FacebookTwitterPinterestEmail
224

ಬೆಂಗಳೂರು:ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತವೆಂದಾದರೆ, ದಲಿತ ಸಮುದಾಯಕ್ಕೇ ದಕ್ಕಬೇಕು ಎಂಬ ಹೋರಾಟ ತೀವ್ರಗೊಳಿಸಲು ಸಮುದಾಯದ ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆದಿದೆ.

ದಲಿತರ ಒಳ ಮೀಸಲಾತಿ ವಿವಾದವನ್ನು ಸರ್ಕಾರ ಇತ್ಯರ್ಥಗೊಳಿಸಿದ ಬೆನ್ನಲ್ಲೇ ಎಡಗೈ-ಬಲಗೈ ಭಿನ್ನಾಭಿಪ್ರಾಯ ಮರೆತ ದಲಿತ ಸಮುದಾಯಗಳು ಒಗ್ಗೂಡಿ ದಾವಣಗೆರೆಯಲ್ಲಿ ಐತಿಹಾಸಿಕ ಸಮಾವೇಶ ನಡೆಸಲು ಸಜ್ಜಾಗಿವೆ.

30 ಲಕ್ಷ ದಲಿತರ ಸಮಾವೇಶ

ಅಕ್ಟೋಬರ್-ನವೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಉಂಟಾಗಲಿದೆ ಎಂಬ ಸುಳಿವಿನ ಹಿನ್ನೆಲೆಯಲ್ಲಿ 30 ಲಕ್ಷ ದಲಿತರನ್ನು ಸೇರಿಸಿ ಸಮಾವೇಶ ನಡೆಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲು ವರಿಷ್ಠರು ತೀರ್ಮಾನ ತೆಗೆದುಕೊಂಡರೆ, ಅಂತಹ ಸಮಯದಲ್ಲಿ ದಲಿತ ಸಮುದಾಯಕ್ಕೆ ಈ ಹುದ್ದೆ ನೀಡಬೇಕೆಂಬ ನಿರ್ಣಯವನ್ನು ಸಭೆ ಕೈಗೊಳ್ಳಲಿದೆ.

ಒಳ ಮೀಸಲಾತಿ ಹಂಚಿಕೆ ನಂತರ ಸಮುದಾಯದ ಎಲ್ಲ ಗುಂಪುಗಳು ಒಂದಾಗಿ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ.

ದಾವಣಗೆರೆ ಸಮಾವೇಶ

ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ವರಿಷ್ಠರನ್ನು ಒತ್ತಾಯಿಸುವ ಉದ್ದೇಶದಿಂದಲೇ ದಾವಣಗೆರೆ ಸಮಾವೇಶ ಆಯೋಜಿಸಲಾಗುತ್ತಿದೆ.

ಒಳ ಮೀಸಲಾತಿ ವಿವಾದ ಇತ್ಯರ್ಥ ಸಂಭ್ರಮದಲ್ಲಿ ನಡೆಯುವ ಈ ಸಮಾವೇಶದಲ್ಲಿ ಕರ್ನಾಟಕದಲ್ಲಿ ನಮ್ಮವರು ಮುಖ್ಯಮಂತ್ರಿ ಸ್ಥಾನಕ್ಕೇರಲು ಅನುವು ಮಾಡಿಕೊಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗುವುದು.

ಸ್ವಾತಂತ್ರ್ಯೋತ್ತರ ಕರ್ನಾಟಕದ ಇತಿಹಾಸಕ್ಕೆ ಎಂಟು ದಶಕಗಳು ಪೂರ್ಣಗೊಳ್ಳುತ್ತಿದ್ದು, ಇದುವರೆಗೆ ಒಬ್ಬ ದಲಿತ ನಾಯಕ ರಾಜ್ಯದ ಮುಖ್ಯಮಂತ್ರಿಯಾಗಿಲ್ಲ ಎಂಬುದು ಪ್ರತಿಪಾದನೆಯಾಗಿದೆ.

ಅಧಿಕಾರ ಹಂಚಿಕೆ ಒಪ್ಪಂದ

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಕೆಳಗಿಳಿಯಲಿದ್ದಾರೆ ಎಂಬ ಮಾತು ರಾಜ್ಯ ರಾಜಕೀಯ ವಲಯದಲ್ಲಿ ಇನ್ನೂ ಜೀವಂತವಾಗಿರುವುದೇ ದಲಿತ ಸಮಾವೇಶದ ಮೂಲ ಪ್ರೇರಣೆಯಾಗಿದೆ.

ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಅಧಿಕಾರ ಹಂಚಿಕೆ ಒಪ್ಪಂದ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಬ್ರೇಕ್ ಹಾಕಿದ್ದರಾದರೂ, ಅಧಿಕಾರ ಹಂಚಿಕೆ ಮಾತು ಬೂದಿ ಮುಚ್ಚಿದ ಕೆಂಡದಂತೆ ಇದ್ದೇ ಇದೆ.

ಸಮಾವೇಶದ ನಿರ್ಣಯಕ್ಕೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಒಪ್ಪಿಕೊಂಡರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ನಡೆಯುವ ನಾಯಕತ್ವ ಚುನಾವಣೆಯಲ್ಲಿ ದಲಿತ ನಾಯಕರೊಬ್ಬರು ಕಣಕ್ಕಿಳಿಯಲಿದ್ದಾರೆ.

ಕೊನೇ ಕ್ಷಣದಲ್ಲಿ ವಂಚಿತರು

ಈ ಹಿಂದೆ ಬಿ.ರಾಚಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಹುದ್ದೆಯ ಸನಿಹ ಬಂದಿದ್ದರೂ ಕೊನೇ ಕ್ಷಣದಲ್ಲಿ ವಂಚಿತರಾಗಿದ್ದರು.

ಆದರೆ, ಈ ಬಾರಿ ಸಿದ್ದರಾಮಯ್ಯ ಕೆಳಗಿಳಿಯುವುದು ನಿಶ್ಚಿತವಾದರೆ, ಅವರ ಜಾಗಕ್ಕೆ ದಲಿತ ನಾಯಕರೊಬ್ಬರು ಬರಬೇಕು, ಯಾವ ಕಾರಣಕ್ಕೂ ಅವಕಾಶ ತಪ್ಪಬಾರದು ಎಂಬ ಹಕ್ಕೊತ್ತಾಯದ ಐತಿಹಾಸಿಕ ದಲಿತ ಸಮಾವೇಶ ಇದಾಗಲಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ತಿರುವು ಪಡೆಯುವ ನಿರೀಕ್ಷೆಯಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm postdavanagere conclavescheduled caste
0 FacebookTwitterPinterestEmail
KM Shivaraju

previous post
ದಸರಾ ಉದ್ಘಾಟನೆ: ಸೋನಿಯಾ ಗಾಂಧಿಗೆ ಆಹ್ವಾನ !
next post
ಕರ್ನಾಟಕ ರಾಜಕೀಯ ವಿದ್ಯಮಾನ: ಎಚ್‌ಡಿಕೆ-ಷಾ ಚರ್ಚೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ