Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಷ್ಟ್ರ

ಗಣೇಶ ಗಲಭೆಗೆ ಸಿದ್ದರಾಮಯ್ಯ ಆಡಳಿತವೇ ಕಾರಣ

by admin September 8, 2025
written by admin September 8, 2025 0 comments 2 minutes read
0FacebookTwitterPinterestEmail
69

ಬೆಂಗಳೂರು:ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆಗೆ ಕಾಂಗ್ರೆಸ್ ನಡವಳಿಕೆ, ಅದರ ಆಡಳಿತವೇ ಕಾರಣ ಎಂದು ಜೆಡಿಎಸ್ ಮತ್ತು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿವೆ.

ರಾಜ್ಯದ ಕೆಲವು ಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಇಂತಹ ಗಲಭೆ ಕಳೆದ ಎರಡು ವರ್ಷಗಳಿಂದ ಇಡೀ ರಾಜ್ಯಕ್ಕೆ ಹರಡಿ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಂಡ ಕಾರಿದ್ದಾರೆ.

ಬಿಜೆಪಿ-ಜೆಡಿಎಸ್ ತರಾಟೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತ್ಯೇಕ ಪತ್ರಿಕಾಗೋಷ್ಠಿ ಮತ್ತು ಹೇಳಿಕೆ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದೂಗಳು ಅಸಮಾಧಾನವಾಗುವ ರೀತಿ ಕಾಂಗ್ರೆಸ್ ಮಾಡುತ್ತಿದೆ, ಇದನ್ನು ನಾವು ರಾಜಕೀಯವಾಗಿ ಹೇಳುತ್ತಿಲ್ಲ, ರಾಜ್ಯದ ಹಲವೆಡೆ ಗಲಾಟೆ ಆಗಲು ಕಾಂಗ್ರೆಸ್ ಪಕ್ಷವೇ ಕಾರಣ.

ಇದರಿಂದ ಆ ಪಕ್ಷದ ಅವನತಿ ಆರಂಭವಾಗಿದೆ ಎಂದು ವಾಗ್ದಾಳಿ ಮಾಡಿರುವ ನಾಯಕರು, ಕಳೆದ ಶುಕ್ರವಾರ ಈದ್ ಮಿಲಾದ್ ಆಚರಣೆ ವೇಳೆ ಮುಸ್ಲಿಂ ಸಮುದಾಯ ಮೆರವಣಿಗೆಗಳನ್ನು ನಡೆಸಿದೆ, ಆದರೆ, ಎಲ್ಲಿಯೂ ಕಲ್ಲು ತೂರಾಟ ಮತ್ತು ಗಲಭೆಗಳು ನಡೆದಿಲ್ಲ.

ಹಿಂದೂಗಳನ್ನು ಕೆಣಕುವ ಕೆಲಸ

ಗಣೇಶ ವಿಸರ್ಜನೆ ವೇಳೆ ಮದ್ದೂರು ಅಷ್ಟೇ ಅಲ್ಲ, ರಾಜ್ಯದ ಕೆಲವು ಭಾಗಗಳಲ್ಲಿ ಈ ಸಮುದಾಯ ಕಲ್ಲು ತೂರಾಟ ನಡೆಸಿ ಹಿಂದೂಗಳನ್ನು ಕೆಣಕುವ ಕೆಲಸ ಮಾಡಿದ್ದಾರೆ, ಇದಕ್ಕೆ ಸರ್ಕಾರದ ಬೆಂಬಲವೇ ಕಾರಣ.

ಕಳೆದ ಎರಡು ವರ್ಷಗಳಿಂದ ಕೈಕಟ್ಟಿ ಕುಳಿತುಕೊಳ್ಳುವಂತೆ ಪೋಲಿಸರನ್ನು ನಿಸ್ಸಹಾಯಕ ಮಾಡಿದೆ, ಇದು ಪೋಲಿಸರ ವೈಫಲ್ಯವಲ್ಲ, ಗುಪ್ತಚರ ಮತ್ತು ಸರ್ಕಾರದ ವೈಫಲ್ಯ ಎಂದು ಗುಡುಗಿದ್ದಾರೆ.

ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಏಕೈಕ ಉದ್ದೇಶದಿಂದ ಹಿಂದೂಗಳ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ, ಈ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಎರಡನೇ ದರ್ಜೆ ಪ್ರಜೆ

ಜಾತ್ಯತೀತ ಸರ್ಕಾರದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾಗಿದ್ದಾರೆ, ನಿಮ್ಮ ಬ್ರದರ‍್ಸ್‌ಗಳು ನಿರಂತರವಾಗಿ ದಾಳಿ ಮಾಡುತ್ತಿದ್ದರೂ, ನೀವು ಕೈಕಟ್ಟಿ ಕುಳಿತಿದ್ದೀರಿ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಮದ್ದೂರು ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೋಲಿಸ್ ಮಹಾನಿರ್ದೇಶಕರನ್ನು ಸಂಪರ್ಕಿಸಿ ಹೆಚ್ಚಿನ ಬಿಗಿ ಬಂದೋಬಸ್ತ್ ವಹಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರನ್ನು ಕರೆಸಿಕೊಂಡು ಘಟನೆ ಬಗ್ಗೆ ಮಾಹಿತಿ ಪಡೆದು, ಪರಿಸ್ಥಿತಿ ಶಾಂತಗೊಳ್ಳುವವರೆಗೆ ಮದ್ದೂರಿನಲ್ಲಿ ಬಿಡಾರ ಹೂಡುವಂತೆ ಸೂಚಿಸಿದ್ದಾರೆ.

೨೧ ಜನರ ಬಂಧನ

ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಗಣೇಶ ಮೆರವಣಿಗೆ ವೇಳೆ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಮಾಹಿತಿ ಇದೆ, ಈ ಬಗ್ಗೆ ವಿಚಾರಣೆ ನಂತರ 21 ಜನರನ್ನು ಬಂಧಿಸಲಾಗಿದೆ, ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ, ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಘಟನೆ ನಡೆದ ತಕ್ಷಣ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ, ಬಿಜೆಪಿ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ, ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲು ಹೇಳಬಹುದಿತ್ತು, ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು.

ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ಘಟನೆ ನಡೆದಿಲ್ಲ, ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ, ಯಾವುದೇ ಸಮಾಜದವರಿದ್ರೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ಬಿಜೆಪಿ, ಜೆಡಿಎಸ್ ರಾಜಕಾರಣ ಮೂಲಕ ನಮ್ಮನ್ನು ಎದುರಿಸಲಾಗದೆ ಪ್ರಚೋದನೆ ಮಾಡುತ್ತಿದ್ದಾರೆ.

ಯಾರ ಓಲೈಕೆ

ನಾವು ಯಾರ ಓಲೈಕೆಯನ್ನೂ ಮಾಡುತ್ತಿಲ್ಲ, ಹಾಗಿದ್ದಿದ್ದರೆ 21 ಜನರ ಬಂಧನ ಏಕೆ ಮಾಡುತ್ತಿದ್ದೆವು.

ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ, ಸದನದಲ್ಲಿ ನಮ್ಮನ್ನು ಎದುರಿಸಲೂ ಆಗೋದಿಲ್ಲ, ಆದ್ದರಿಂದ ಇಂತಹಾ ಘಟನೆಗಳು ನಡೆದಾಗ ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jdschaluvaraya swamycm siddaramaiahcongresmadduru ganesha festivalstone pelting
0 FacebookTwitterPinterestEmail
admin

previous post
ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು
next post
ಸೈಬರ್ ಕ್ರೈಂಗೆ ಮಾಜಿ ಶಾಸಕನ 31 ಲಕ್ಷ ರೂ. ಸ್ವಾಹಾ !

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ