Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಧರ್ಮಾಸ್ತ್ರ !

by KM Shivaraju September 18, 2025
written by KM Shivaraju September 18, 2025 0 comments 1 minutes read
0FacebookTwitterPinterestEmail
88

ಬೆಂಗಳೂರು:ಮುಂದೆ ಎದುರಾಗಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಇಂದಿಲ್ಲಿ ನಿರ್ಧರಿಸಿರುವ ರಾಜ್ಯ ಬಿಜೆಪಿ, ಈ ಕದನಕ್ಕೆ ಧರ್ಮಾಸ್ತ್ರ ಬಳಸಲಿದೆ.

ಜಿಲ್ಲಾ, ತಾಲ್ಲೂಕು ಪಂಚಾಯತ್‌ಗಳಲ್ಲದೆ, ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಆಡಳಿತಾರೂಢ ಕಾಂಗ್ರೆಸ್ ವೇದಿಕೆ ಸಿದ್ಧಪಡಿಸಿರುವ ಬೆನ್ನಲ್ಲೇ ಬಿಜೆಪಿ ಕೂಡಾ ಇಂದು ತಂತ್ರಗಾರಿಕೆ ರೂಪಿಸಿದೆ.

ರಾಜಕೀಯ ಚಿಂತನಾ ಶಿಬಿರ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಧ್ಯಕ್ಷತೆಯಲ್ಲಿ ನಡೆದ ಎರಡು ದಿನಗಳ ರಾಜಕೀಯ ಚಿಂತನಾ ಶಿಬಿರದಲ್ಲಿ ಕೆಲವು ಮಹತ್ವದ ತೀರ್ಮಾನ ಕೈಗೊಂಡಿದೆ.

ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಹಾಲಿ ಸದಸ್ಯರು ಪಕ್ಷದ ವಿವಿಧ ಸಂಘಟನೆಗಳ ಅಧ್ಯಕ್ಷರು ಕಳೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಜನ ವಿರೋಧಿ ನೀತಿ ಮತ್ತು ಧರ್ಮ ವಿಭಜಿಸಿ ರಾಜಕೀಯ ಮಾಡಲು ಹೊರಟಿರುವ ಕುತಂತ್ರದ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದೆ.

ಹಿಂದೂಗಳನ್ನು ಕ್ರೈಸ್ತ ಸಮುದಾಯಕ್ಕೆ ಬಲವಂತವಾಗಿ ಮತಾಂತರಿಸಲು ಹೊರಟಿರುವ ಸಿದ್ದರಾಮಯ್ಯ ಕುತಂತ್ರವನ್ನು ರಾಜ್ಯದ ಜನತೆ ಮುಂದಿಡಬೇಕು.

ಭ್ರಷ್ಟ, ಅದಕ್ಷರ ಕೈಯಲ್ಲಿ ಸಿಲುಕಿ ಕರ್ನಾಟಕ ನರಳುತ್ತಿದೆ
ಜಾತಿ ಗಣತಿ ಹೆಸರಿನಲ್ಲಿ ವಿಭಜನೆ

ಜಾತಿ ಗಣತಿ ಹೆಸರಿನಲ್ಲಿ ಸಮುದಾಯಗಳನ್ನು ವಿಭಜನೆ ಮಾಡಿ ಅಲ್ಪಸಂಖ್ಯಾತರನ್ನು ಮುನ್ನೆಲೆಗೆ ತರಲು ಈ ಸರ್ಕಾರ ಹೊರಟಿದೆ.

ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಸಂವಿಧಾನ ಆಶೋತ್ತರಗಳ ವಿರುದ್ಧವಾಗಿದೆ.

ಆದರೆ, ಕಾಂಗ್ರೆಸ್ ಸರ್ಕಾರದ ಜನಗಣತಿಯಲ್ಲಿ ಈ ಸಮುದಾಯಗಳಲ್ಲದೆ, ಉದ್ದೇಶಪೂರ್ವಕವಾಗಿ ’ಇತರೆ’ ಎಂಬ ಕಾಲಂ ಕೊಡುವ ಮೂಲಕ ಹಿಂದೂಗಳನ್ನು ಕ್ರೈಸ್ತ ಸಮುದಾಯಕ್ಕೆ ಬಲವಂತವಾಗಿ ಸೇರಿಸಲು ಇಟ್ಟಿರುವ ಹೆಜ್ಜೆಯಾಗಿದೆ.

ಪ್ರಮುಖ ಜಾತಿಗಳ ವಿಭಜನೆ

ಅಲ್ಲದೆ, ಒಕ್ಕಲಿಗ, ಲಿಂಗಾಯತ ಸೇರಿದಂತೆ ಪ್ರಮುಖ ಜಾತಿಗಳನ್ನು ವಿಭಜಿಸಿ ಒಳಪಂಗಡಗಳನ್ನೂ ಅಳವಡಿಸುವ ಮೂಲಕ ಅವುಗಳ ಒಟ್ಟಾರೆ ಸಂಖ್ಯಾಬಲವನ್ನು ಕಡಿಮೆ ಮಾಡಲು ಹೊರಟಿದೆ.

ಮುಂದೆ ಎದುರಾಗುವ ಚುನಾವಣೆಯಲ್ಲಿ ಈ ಸರ್ಕಾರದಲ್ಲಿ ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳಿಗಿಂತ ಜಾತಿ ಅಸ್ತ್ರವನ್ನೇ ಬಳಸಿಕೊಂಡು ಹೋರಾಟ ಮಾಡಬೇಕು.

ಜಾತಿ ಗಣತಿ ಹೆಸರಿನಲ್ಲಿ ಇವರು ಮಾಡುತ್ತಿರುವ ಕುತಂತ್ರವನ್ನು ಜನತೆ ಮುಂದಿಡುವ ನಿರ್ಧಾರವನ್ನು ಸಭೆ ಕೈಗೊಂಡಿದೆ.

ವಿರೋಧಿ ಹೋರಾಟ

ಈ ಜಾತಿ ಗಣತಿಯನ್ನೇ ನಾವು ವಿರೋಧಿಸೋಣ, ಇದರ ಜೊತೆ ಜೊತೆಗೆ ನಮ್ಮ ಹೋರಾಟವೂ ಮುಂದುವರೆಯಬೇಕು.

ಸರ್ಕಾರ ತೆಗೆದುಕೊಂಡಿರುವ ಈ ದ್ವಂದ್ವ ನಿಲುವುಗಳನ್ನು ಜನಸಾಮಾನ್ಯರಿಗೆ ತಿಳಿಸಿ, ಅವರಲ್ಲಿ ಅರಿವು ಮೂಡಿಸುವ ಕೆಲಸ ಮಾಡುವ ಮೂಲಕವೇ ನಾವು ಚುನಾವಣಾ ಹೋರಾಟ ನಡೆಸೋಣ.

ವಿಭಜನೆಗೊಂಡಿರುವ ಬೆಂಗಳೂರು ಮಹಾನಗರ ಪಾಲಿಕೆ ಜೊತೆಗೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಢ ಹಾಗೂ ಶಿವಮೊಗ್ಗ ಪಾಲಿಕೆಗಳಿಗೆ ಚುನಾವಣೆ ಎದುರಾಗಲಿದೆ.

ಪೂರ್ವ ಸಿದ್ಧತೆ

ಇದಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡಿದೆ.

ಈ ಎಲ್ಲಾ ಚುವಾಣೆಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹೋರಾಟ ಮಾಡುವ ತೀರ್ಮಾನವನ್ನು ಕೈಗೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
decided to fightlocal body electionstate bjp meet
0 FacebookTwitterPinterestEmail
KM Shivaraju

previous post
ಭ್ರಷ್ಟ, ಅದಕ್ಷರ ಕೈಯಲ್ಲಿ ಸಿಲುಕಿ ಕರ್ನಾಟಕ ನರಳುತ್ತಿದೆ
next post
ಸಂಪುಟದಲ್ಲೇ ಸಿದ್ದರಾಮಯ್ಯಗೆ ಜಾತಿಗಣತಿ ತರಾಟೆ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ