Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯ

ಅಧಿಕಾರ ಹಸ್ತಾಂತರ ನಿರ್ಣಯ ಸಿದ್ದರಾಮಯ್ಯ ಹೆಗಲಿಗೆ

by KM Shivaraju November 22, 2025
written by KM Shivaraju November 22, 2025 0 comments 1 minutes read
0FacebookTwitterPinterestEmail
136

ಬೆಂಗಳೂರು:ಅಧಿಕಾರ ಹಸ್ತಾಂತರ ಕುರಿತು ಪಕ್ಷ ಮತ್ತು ಸರ್ಕಾರಕ್ಕೆ ದಕ್ಕೆ ಆಗದಂತೆ ಎರಡು-ಮೂರು ದಿನದಲ್ಲಿ ನಿರ್ಣಯ ಕೈಗೊಳ್ಳುವಂತೆ ದೆಹಲಿ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂದೇಶ ರವಾನಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಧಿಕಾರ ಹಸ್ತಾಂತರಿಸಬೇಕೆಂಬ ಕೂಗು ಎಬ್ಬಿಸಿದ್ದಾರೆ.

ಮುಖ್ಯಮಂತ್ರಿ ಮೇಲೆ ಒತ್ತಡ

ಇದರ ಜೊತೆಯಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆಯೂ ಮುಖ್ಯಮಂತ್ರಿ ಮೇಲೆ ಒತ್ತಡ ತರಲು ಶಿವಕುಮಾರ್ ಬೆಂಬಲಿಗರು ಮುಂದಾಗಿದ್ದಾರೆ.

ಇನ್ನೊಂದೆಡೆ ಉಪಮುಖ್ಯಮಂತ್ರಿ ಪರ ಸಹಿ ಸಂಗ್ರಹವೂ ನಡೆಯುತ್ತಿದ್ದು, ಒಂದು ಹಂತಕ್ಕೆ ತಲುಪುತ್ತಿದ್ದಂತೆ ಬಹಿರಂಗವಾಗಿಯೇ ಶಾಸಕಾಂಗ ಸಭೆ ಕರೆಯುವಂತೆ ಸಿದ್ದರಾಮಯ್ಯ ಹಾಗೂ ವರಿಷ್ಠರನ್ನು ಒತ್ತಾಯಿಸಲಿದ್ದಾರೆ.

ಮತ್ತೊಂದೆಡೆ ಶಿವಕುಮಾರ್ ಪಕ್ಷದ ಶಾಸಕರನ್ನು ಕರೆದು ಮುಖಾಮುಖಿ ಚರ್ಚಿಸಿ, ತಮ್ಮನ್ನು ಬೆಂಬಲಿಸುವಂತೆ ಮನವೊಲಿಕೆ ಪ್ರಯತ್ನವನ್ನೂ ನಡೆಸಿದ್ದಾರೆ.

ವಿಷಯಕ್ಕೆ ಶೀಘ್ರವೇ ತೆರೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಬುಗಿಲೆದ್ದಿರುವ ಅಧಿಕಾರ ಹಸ್ತಾಂತರ ವಿಷಯಕ್ಕೆ ಶೀಘ್ರವೇ ತೆರೆ ಎಳೆಯದಿದ್ದರೆ, ಇರುವ ಅಧಿಕಾರವೂ ಹೋಗಲಿದೆ ಎಂಬ ಭಯ ಕೆಲವು ಶಾಸಕರಿಗೆ ಕಾಡುತ್ತಿದೆ.

ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರುಗಳು ಶಿವಕುಮಾರ್ ಪರ ನಿಂತಿದ್ದಾರೆ.

ಈ ಮೂವರೂ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರ ವಿಷಯವನ್ನು ಸುಲಲಿತವಾಗಿ ಬಗೆಹರಿಸುವ ಜವಾಬ್ದಾರಿ ನೀಡಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ
ಅಧಿಕಾರ ಕೊಡಬೇಕಿದೆ

ಶಿವಕುಮಾರ್ ಪಕ್ಷದ ನಿಷ್ಠಾವಂತ ನಾಯಕ ಅವರಿಗೆ ಸಿಗಬೇಕಾದ ಅಧಿಕಾರ ಕೊಡಬೇಕಿದೆ ಎಂಬ ವಿಚಾರವನ್ನು ಖರ್ಗೆ ಗಮನಕ್ಕೆ ತಂದಿದ್ದಾರೆ.

ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಕರ್ನಾಟಕ ಕಾಂಗ್ರೆಸ್ ಮತ್ತು ಸರ್ಕಾರದ ಬಗ್ಗೆ ಇದುವರೆಗೆ ಯಾವುದೇ ದೃಢ ನಿಲುವು ತಳೆದಿಲ್ಲ.

ಅಧಿಕಾರ ಹಸ್ತಾಂತರ ಕುರಿತಂತೆ ತಮ್ಮ ನಿಲುವು ಏನೆಂಬುದನ್ನು ರಾಹುಲ್ ಬಹಿರಂಗ ಪಡಿಸದಿರುವುದು ಖರ್ಗೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸೂತ್ರ ಸಿದ್ಧಪಡಿಸಲು ಕಸರತ್ತು

ವಿದೇಶ ಪ್ರವಾಸದಲ್ಲಿರುವ ರಾಹುಲ್ ಬರುವುದಕ್ಕೂ ಮುನ್ನ ಒಂದು ಸೂತ್ರ ಸಿದ್ಧಪಡಿಸಲು ಖರ್ಗೆ ಕಸರತ್ತು ನಡೆಸಿದ್ದಾರೆ.

ಸೋನಿಯಾ, ಪ್ರಿಯಾಂಕಾ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲ ನೀಡಿರುವ ಮಾಹಿತಿಯನ್ನು ಸಿದ್ದರಾಮಯ್ಯ ಅವರಿಗೆ ತಲುಪಿಸಿರುವ ಖರ್ಗೆ ಇನ್ನೆರಡು-ಮೂರು ದಿನದಲ್ಲಿ ಈ ಬಗ್ಗೆ ನಿಮ್ಮ ನಿಲುವನ್ನು ಪಕ್ಷಕ್ಕೆ ತಿಳಿಸಿ ಎಂಬ ಸಂದೇಶ ರವಾನಿಸಿದ್ದಾರೆ.

ಸರ್ಕಾರ ರಚನೆಗೂ ಮುನ್ನ ಆಗಿರುವ ಒಪ್ಪಂದವನ್ನು ಪಾಲಿಸುವಂತೆ ಶಿವಕುಮಾರ್ ವರಿಷ್ಠರನ್ನು ಕೋರಿದ್ದಾರೆ.

ನೀವೇ ನಿರ್ಣಯಕ್ಕೆ ಬನ್ನಿ

ಒಪ್ಪಂದ ನಡೆದಿದೆ, ಈಗ ನೀವೇ ಇದರ ಬಗ್ಗೆ ನಿರ್ಣಯಕ್ಕೆ ಬನ್ನಿ, ನಿಮ್ಮ ನಿರ್ಧಾರದ ನಂತರ ರಾಹುಲ್ ಸ್ವದೇಶಕ್ಕೆ ಹಿಂತಿರುಗಿದ ನಂತರ ಅವರೊಂದಿಗೆ ಚರ್ಚಿಸಿ ಪಕ್ಷದ ತೀರ್ಮಾನವನ್ನು ತಿಳಿಸುತ್ತೇವೆ ಎಂದಿದ್ದಾರೆ ಖರ್ಗೆ.

ಡಿಸೆಂಬರ್ 1ರಿಂದ ಆರಂಭಗೊಳ್ಳುತ್ತಿರುವ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ರಾಹುಲ್ ಸ್ವದೇಶಕ್ಕೆ ಮರಳಲಿದ್ದಾರೆ.

ಅದುವರೆಗೂ ಕರ್ನಾಟಕ ಕಾಂಗ್ರೆಸ್ ನಾಯಕತ್ವ ಕಗ್ಗಂಟು ಹೀಗೇ ಮುಂದುವರೆಯುವ ಸಾಧ್ಯತೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahdcm d k shivakumark c venugopalpower sharingpriyanka gandhiRahul Gandhiranadeep singh surjevalasoniya gandhi
0 FacebookTwitterPinterestEmail
KM Shivaraju

previous post
ಆರೇಳು ತಿಂಗಳಲ್ಲಿ ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆ : ಕುಮಾರಸ್ವಾಮಿ ಭವಿಷ್ಯ
next post
ಶಿವಕುಮಾರ್ ಪರ 63 ಶಾಸಕರು: ಉನ್ನತ ಮೂಲಗಳ ಮಾಹಿತಿ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ