Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೈತರ ಆತ್ಮಹತ್ಯೆ ಸಿದ್ದರಾಮಯ್ಯ ಸರ್ಕಾರದ ಸಾಧನೆ

by admin December 9, 2025
written by admin December 9, 2025 0 comments 1 minutes read
0FacebookTwitterPinterestEmail
63

ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸಕ್ತ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ 2,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆರೋಪಿಸಿದ್ದಾರೆ.

ರೈತರ ಸಂಕಷ್ಟ ಮುಂದುವರೆದಿದೆ, ರೈತರ ಆತ್ಮಹತ್ಯೆಯಲ್ಲಿ ರಾಜ್ಯ ಎರಡನೇ ಸ್ಥಾನ ಪಡೆದಿದೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದೇ ಸರ್ಕಾರದ ಸಾಧನೆಯಾಗಿದೆ ಎಂದು ಟೀಕಿಸಿದರು.

ರೈತ ವಿರೋಧಿ ನೀತಿ

ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರೈತ ವಿರೋಧಿ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.

ಭತ್ತ, ಕಬ್ಬು, ಹತ್ತಿ, ಮೆಕ್ಕೆಜೋಳ ಮೊದಲಾದ ಉತ್ಪನ್ನ ಬೆಳೆಯುವ ರೈತರ ಮತ್ತು ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ, ಅತಿವೃಷ್ಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ನೆಲದ ಮೇಲೆ ಓಡಾಡಲಿಲ್ಲ, ವೈಮಾನಿಕ ಸಮೀಕ್ಷೆ ಮಾಡಿದರು.

ಕನಿಷ್ಠ ಬೆಂಬಲ ಬೆಲೆ ಹೆಚ್ಚು ನೀಡಲು ಅವಕಾಶವಿದ್ದರೂ ಏಕೆ ನೀಡಲಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿದ ಅವರು, ಇದೊಂದು ಲಜ್ಜೆಗೆಟ್ಟ ಸರ್ಕಾರ ಎಂದರು.

ನ್ಯಾಯ ಸಿಗುವವರೆಗೆ ಹೋರಾಟ

ಬಿ.ಎಸ್.ಯಡಿಯೂರಪ್ಪ ನಡೆಸಿದ ರೈತಪರ ನಿರಂತರ ಹೋರಾಟ ಸ್ಮರಿಸಿದ ಅವರು, ನಾನು ಅವರ ಮಗನಾಗಿ, ರೈತರ ಹೋರಾಟಕ್ಕೆ ನ್ಯಾಯ ಸಿಗುವವರೆಗೆ ವಿರಮಿಸುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರೈತರ ಧ್ವನಿ ಸುವರ್ಣಸೌಧ, ವಿಧಾನಸೌಧ ಮುಟ್ಟಬೇಕು, ವಿಧಾನಸಭೆ ಒಳಗೆ, ಹೊರಗೆ ಹೋರಾಟ ಮುಂದುವರೆಯಲಿದೆ, ಕರ್ನಾಟಕದಲ್ಲಿ ಸರ್ಕಾರ ಸತ್ತುಹೋಗಿದೆ ಎಂದು ಟೀಕಿಸಿದರು.

ಹತ್ತಿ, ತೊಗರಿ, ಉದ್ದು ಬೆಳೆ ನಾಶ

ಅನೇಕ ಪ್ರದೇಶಗಳು ಅತಿವೃಷ್ಟಿಗೆ ತುತ್ತಾಗಿ ಬೆಳೆ ನಾಶವಾಗಿವೆ, ಹತ್ತಿ, ತೊಗರಿ, ಉದ್ದು ಬೆಳೆ ನಾಶವಾಗಿದೆ, ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸಬೇಕಿತ್ತು, ಆದರೆ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ.

ಸಿದ್ದರಾಮಯ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು, ಇಲ್ಲವೇ ಅಧಿಕಾರ ಬಿಟ್ಟು ತೊಲಗಬೇಕು ಎಂದು ಒತ್ತಾಯಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjp protest in balagamstate govt. against farmers
0 FacebookTwitterPinterestEmail
admin

previous post
ಯತೀಂದ್ರ ಹೇಳಿಕೆಗೆ ಶಿವಕುಮಾರ್ ಬಣ ಗರಂ
next post
ಮಧ್ಯವರ್ತಿ ಹಾವಳಿಗೆ ಆರ್‌ಟಿಒ ಅಧಿಕಾರಿಗಳೇ ಹೊಣೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ