Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

by KM Shivaraju March 2, 2026
written by KM Shivaraju March 2, 2026 0 comments 1 minutes read
0FacebookTwitterPinterestEmail
160

ಬೆಂಗಳೂರು:ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಕದನದಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ವಿಧಾನಸಭಾ ಸದಸ್ಯರು, ಅಧಿಕಾರಿಗಳು, ಪ್ರಭಾವೀ ರಾಜಕಾರಣಿಗಳು ಹಾಗೂ ಕುಟುಂಬ ವರ್ಗದವರು ಸಂಘರ್ಷ ಪ್ರದೇಶದಲ್ಲಿ ಸಿಲುಕಿದ್ದಾರೆ.

ಚಲುವರಾಯಸ್ವಾಮಿ ಮತ್ತು ಅಧಿಕಾರಿಗಳು ಇಂಗ್ಲೆಂಡ್‌ನ ನ್ಯೂಕ್ಯಾಸೆಲ್ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಪ್ರದೇಶಗಳ ಪ್ರವಾಸದಲ್ಲಿದ್ದಾರೆ.

ಬರಲು ಸಾಧ್ಯವಾಗುತ್ತಿಲ್ಲ

ಇವರು ನಾಳೆ, ಮಂಗಳವಾರ ದುಬೈ ಮೂಲಕ ನಗರಕ್ಕೆ ಹಿಂತಿರುಗಬೇಕಿತ್ತು, ಆದರೆ, ಪಶ್ಚಿಮ ಏಷ್ಯಾದಲ್ಲಿನ ಯುದ್ಧ ವಾತಾವರಣದಿಂದಾಗಿ ಬರಲು ಸಾಧ್ಯವಾಗುತ್ತಿಲ್ಲ.

ವಿಶ್ವದ ಅನೇಕ ರಾಷ್ಟ್ರಗಳಿಂದ ದುಬೈ ವಿಮಾನ ನಿಲ್ದಾಣ ಮಾರ್ಗವಾಗಿಯೇ ಭಾರತಕ್ಕೆ ಬರಬೇಕಿದೆ.

ಆದರೆ, ದುಬೈನಲ್ಲಿ ವಿಮಾನ ಹಾರಾಟ ಸ್ಥಗಿತಗೊಂಡಿರುವುದರಿಂದ ಅವರುಗಳು ಹಿಂತಿರುಗಲು ಇನ್ನೂ ಸಮಯ ಬೇಕಾಗಬಹುದು.

ಚಲುವರಾಯಸ್ವಾಮಿ ಜೊತೆ 10ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಮತ್ತು ಕುಟುಂಬ ವರ್ಗದವರೂ ಇದ್ದಾರೆ.

ನಾರಾ ಭರತ ರೆಡ್ಡಿ, ಬೋಜೇಗೌಡ

ಶಾಸಕರಾದ ನಾರಾ ಭರತ ರೆಡ್ಡಿ, ಬೋಜೇಗೌಡ ಸೇರಿದಂತೆ ಕೆಲವು ವಿಧಾನಸಭಾ ಸದಸ್ಯರು ಮತ್ತು ರಾಜಕಾರಣಿಗಳು ಮತ್ತು ಕುಟುಂಬ ವರ್ಗ ದುಬೈನಲ್ಲಿ ಸಿಲುಕಿಗೊಂಡಿದೆ.

ಅಲ್ಲದೆ, ರಾಜ್ಯ ಚುನಾವಣಾ ಆಯುಕ್ತ ಎಸ್.ಸಂಗ್ರೇಶಿ, ಅವರೂ ದುಬೈನಲ್ಲಿದ್ದಾರೆ, ಇವರನ್ನೂ ಸೇರಿದಂತೆ ಕೆಲವು ಶಾಸಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಸಂಪರ್ಕಿಸಿ ಧೈರ್ಯ ತುಂಬಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು ತಕ್ಷಣಕ್ಕೆ ಕರೆತರುವ ಪರಿಸ್ಥಿತಿ ಇಲ್ಲ ಎಂದಿದ್ದಾರೆ.

ವಿಮಾನ ಹಾರಾಟ ಸ್ಥಗಿತ

ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿ ನಂತರ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ನಂತರ ಅಲ್ಲಿನ ದೇಶಗಳು ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿವೆ.

ಸೌದಿ ಅರೇಬಿಯಾ, ದುಬೈ, ಬಹರೈನ್, ಯುಎಇ, ಇರಾಕ್ ಸೇರಿದಂತೆ ಅರಬ್ ದೇಶಗಳ ವಾಯಪ್ರದೇಶಗಳಲ್ಲಿ ನಾಗರಿಕ ವಿಮಾನಯಾನ ಸಂಚಾರ ಪುನರಾರಂಭ ನಂತರ ಕೇಂದ್ರ ಸರ್ಕಾರ ಪ್ರವಾಸಿಗರನ್ನು ಕರೆಸಿಕೊಳ್ಳಲಿದೆ.

ಪರಿಸ್ಥಿತಿಯಿಂದ ಸ್ಥೈರ್ಯ ಕಳೆದುಕೊಳ್ಳಬೇಡಿ, ನೀವು ಎಲ್ಲಿದ್ದೀರೋ ಅಲ್ಲಿಯೇ ಸುರಕ್ಷಿತ ತಾಣಗಳಲ್ಲಿ ಇರಿ, ರಾಜ್ಯ ಸರ್ಕಾರ ಕೇಂದ್ರದ ಜೊತೆ ನಿರಂತರ ಸಂಪರ್ಕದಲ್ಲಿದ್ದು ನಿಮ್ಮ ರಕ್ಷಣೆಗೆ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ.

ಆತಂಕ ಪರಿಹರಿಸಲು ಕ್ರಮ

ನಿಮಗಿರುವ ಆತಂಕ ಪರಿಹರಿಸಲು ಕ್ರಮ ವಹಿಸಿದ್ದೇವೆ, ಕೆಲವರು ನಮ್ಮನ್ನು ಸಂಪರ್ಕಿಸಿ, ವಿಶೇಷ ವಿಮಾನ ವ್ಯವಸ್ಥೆ ಮಾಡಿ ಕರೆಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಅದು ಈಗಿನ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ, ನಾಗರಿಕ ವಿಮಾನ ಹಾರಾಟ ಆರಂಭವಾಗುವವರೆಗೆ ಏನೂ ಮಾಡಲಾಗದು, ಕೆಲವರು ವಿಮಾನ ನಿಲ್ದಾಣದಲ್ಲಿ ತಂಗಿರುವ ಮಾಹಿತಿ ಇದೆ.

ಅಂತಹವರ ವೀಸಾಗಳು ರದ್ದಾಗಿವೆ, ಅವರುಗಳು ತಂಗಿರುವ ನಗರದ ಹೋಟೆಲ್‌ಗಳಿಗೆ ತಲುಪಲು ತಾತ್ಕಾಲಿಕ ವೀಸಾ ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ರಾಯಭಾರ ಕಚೇರಿಗಳಿಗೆ ಮಾಹಿತಿ ಕಳುಹಿಸಲಾಗಿದೆ.

ಮಾರ್ಗಸೂಚಿ ಪಾಲಿಸಿ, ಶಾಂತವಾಗಿರಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಪ್ರವಾಸಿಗಳು ರಾಯಭಾರ ಕಚೇರಿಗಳು ನೀಡುವ ಮಾರ್ಗಸೂಚಿಗಳನ್ನು ಪಾಲಿಸಿ, ಶಾಂತವಾಗಿರಿ, ಕದನ ವಿರಾಮ ಏರ್ಪಡುತ್ತಿದ್ದಂತೆ ತಮ್ಮನ್ನು ಕರೆತರಲು ಎಲ್ಲಾ ಕ್ರಮ ಜರುಗಿಸಲಾಗುವುದು.

ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಂಪುಟ ಉಪಸಮಿತಿ ಭಾನುವಾರ ಸಭೆ ಸೇರಿ ಕೆಲವು ತೀರ್ಮಾನಗಳನ್ನು ಕೈಗೊಂಡಿದೆ, ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಇಲ್ಲ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bojegowdachaluvarayaswamydubaiminister and mla'sna ra bharata reddywar zone
0 FacebookTwitterPinterestEmail
KM Shivaraju

previous post
ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್
next post
ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ