Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜ್ಯ ಜಲಾಶಯಗಳ ನೀರು ಕುಡಿಯಲು ಮಾತ್ರ ಬಳಕೆ

by admin March 24, 2026
written by admin March 24, 2026 0 comments 1 minutes read
0FacebookTwitterPinterestEmail
134

ಬೆಂಗಳೂರು:ಪ್ರಸಕ್ತ ವರ್ಷ ಮಳೆ ಕೊರತೆ ಉಂಟಾಗಬಹುದೆಂಬ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳಲ್ಲಿನ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಲು ಸರ್ಕಾರ ತೀರ್ಮಾನಿಸಿದೆ.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿರುವುದಲ್ಲದೆ, ಪ್ರಸ್ತುತ ವರ್ಷ ಜೂನ್ ಜುಲೈ ತಿಂಗಳಲ್ಲಿ ವಾಡಿಕೆ ಮಳೆ ಆಗಲಿದೆ, ತದನಂತರ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ.

ತಾಪಮಾನ ಹೆಚ್ಚಾಗಲಿದೆ

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆಯಾಗಲಿದೆ, ಈ ಬೇಸಿಗೆಯಲ್ಲಿ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಲಿದೆ, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಲಿದೆ, ಈ ಕಾರಣಕ್ಕಾಗಿ ಕೆರೆ-ಕಟ್ಟೆ ಮತ್ತು ಜಲಾಶಯಗಳಲ್ಲಿ ಇರುವ ನೀರನ್ನು ಕುಡಿಯಲು ಮಾತ್ರ ಬಳಸಲು ತೀರ್ಮಾನಿಸಿದೆ.

ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ ಎಂದರು.

ಮುಂಬರುವ ತಿಂಗಳು ಲಾ ನಿನಾ ಪರಿಸ್ಥಿತಿ ತಟಸ್ಥವಾಗುವ ನಿರೀಕ್ಷೆ ಇದೆ, 2026ರ ಮೇ-ಜುಲೈ ವರೆಗೆ ಲಾ ನಿನಾ ತಟಸ್ಥವಾಗಿ ಮುಂದುವರೆಯುವ ಸಾಧ್ಯತೆ.

ಲಾ ನಿನಾ ಪರಿಸ್ಥಿತಿ

2026ರ ಜೂನ್ ಆಗಸ್ಟ್ ಅವಧಿಗೆ ಲಾ ನಿನಾ ಪರಿಸ್ಥಿತಿ ತಲೆದೋರಲಿದ್ದು, ವರ್ಷಾಂತ್ಯದವರೆಗೆ ಮುಂದುವರೆಯಲಿದೆ.

ಬೇಸಿಗೆಯಲ್ಲಿ 207 ತಾಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ, ಈ ಪೈಕಿ 60 ತಾಲೂಕುಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿದೆ.

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಮುಂಜಾಗ್ರತಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕೇಂದ್ರಕ್ಕೆ ಪ್ರಸ್ತಾವನೆ

ಕಳೆದ ಅವಧಿಯಲ್ಲಿ ಮಲೆನಾಡು ಕರಾವಳಿ ಭಾಗದಲ್ಲಿ ಭೂ ಕುಸಿತ ಉಪಶಮನ ಕಾಮಗಾರಿಗಳಿಗಾಗಿ ಅಂದಾಜು 466.63 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ, ಅಲ್ಲದೆ, ಸಮುದ್ರ ಕೊರತೆ ಉಪಶಮನಕ್ಕೆ 198.88 ಕೋಟಿ ರೂ. ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯ ಸರ್ಕಾರ 2025 ನವೆಂಬರ್ 17ನೇ ತಾರೀಖು ಭಾರತ ಸರ್ಕಾರಕ್ಕೆ ಎರಡು ಜ್ಞಾಪನ ಪತ್ರಗಳನ್ನು ಸಲ್ಲಿಸಲಾಗಿದೆ, ಪರಿಹಾರವಾಗಿ ಬೆಳೆ ಇನ್ಪುಟ್ ಸಬ್ಸಿಡಿಗಾಗಿ 614.90 ಕೋಟಿ ರೂ. ಮತ್ತು ಹಾನಿಗೊಳಗಾದ ಮೂಲಸೌಕರ್ಯಗಳ ಮರುಸ್ಥಾಪನೆಗಾಗಿ ಚೇತರಿಕೆ ಮತ್ತು ಪುನರ್ ನಿರ್ಮಾಣ ಅಡಿಯಲ್ಲಿ 1521.67 ಕೋಟಿ ರೂ. ಕೋರಲಾಗಿದೆ.

ಮುನ್ನೆಚ್ಚರಿಕಾ ಕ್ರಮ

ಐಎಂಟಿಸಿ ತಂಡ 2026ರ ಜನವರಿ 11 ರಿಂದ 13 ರವರೆಗೆ ಕರ್ನಾಟಕಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದೆ, ಮಳೆ ಕೊರತೆ ಎದುರಿಸಲು ಮುನ್ನೆಚ್ಚರಿಕಾ ಕ್ರಮಗಳಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಪ್ತಾಹಿಕ ಮಳೆ ಮೇಲ್ವಿಚಾರಣೆ, ಜಿಲ್ಲಾವಾರು ಬೆಳೆ ಆಕಸ್ಮಿಕ ಯೋಜನೆ ಮತ್ತು ಬರ ನಿರೋಧಕ ಬಿತ್ತನೆಬೀಜ ತಳಿಗಳ ಅಭಿವೃದ್ಧಿಪಡಿಸುವುದು.

ಮೇವು ಲಭ್ಯತೆ ಬಗ್ಗೆ ನಿರಂತರ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಮೇವಿನ ಕೊರತೆಗಾಗಿ ಆಕಸ್ಮಿಕ ಯೋಜನೆಗಳನ್ನು ಸಿದ್ಧಪಡಿಸುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet sub committeeminister krishna byregowdasummer drinking water
0 FacebookTwitterPinterestEmail
admin

previous post
ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಗೊಂದಲ ಇಲ್ಲ
next post
ನಾಯಕತ್ವ ಗೊಂದಲ ಬಗೆಹರಿಸಿ: ವರಿಷ್ಠರಿಗೆ ಪತ್ರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ