Thursday, April 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ

by KM Shivaraju April 29, 2026
written by KM Shivaraju April 29, 2026 0 comments 1 minutes read
0FacebookTwitterPinterestEmail
10

ನವದೆಹಲಿ:ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ಪರಿಹಾರವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಸಾಧ್ಯತೆ ಸುಳಿವು ಹಿನ್ನೆಲೆಯಲ್ಲಿ, ಅವರನ್ನೇ ಮುಂದುವರೆಸುವಂತೆ ಮನವಿ ಮಾಡಲು ದಲಿತ ಸಮುದಾಯದ ಸಚಿವರು ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ ಸಂದರ್ಭದಲ್ಲಿ ಈ ಸಂದೇಶ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಬಗ್ಗೆ ಚರ್ಚೆ

ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಪ್ರವಾಸದ ನಂತರ ಶುಕ್ರವಾರ ದೆಹಲಿಗೆ ಹಿಂತಿರುಗಲಿದ್ದು, ಕರ್ನಾಟಕ ಕಾಂಗ್ರೆಸ್ ಬಗ್ಗೆ ಚರ್ಚಿಸುತ್ತೇವೆ.

ಮೇ 4ರ ನಂತರ ಹೈಕಮಾಂಡ್ ನಿರ್ಧಾರ ಪ್ರಕಟಿಸುವುದಾಗಿ ಖರ್ಗೆ ತಮ್ಮನ್ನು ಭೇಟಿ ಮಾಡಿದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಅವರಿಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಬದಲಾವಣೆ ನಿಶ್ಚಿತ ಎಂದಾದರೆ, ನೀವು ರಾಜ್ಯದ ಉಸ್ತುವಾರಿ ವಹಿಸಿಕೊಳ್ಳಿ ಎಂದು ಮತ್ತೆ ಆಹ್ವಾನ ನೀಡಿದ್ದಾರೆ.

ದಲಿತ ಮುಖ್ಯಮಂತ್ರಿ ಮನವಿ

ದಲಿತರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ದೊರೆತರೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಕಾರಾತ್ಮಕ ಸಂದೇಶ ರವಾನೆ ಆಗುವುದಲ್ಲದೆ, ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳುತ್ತದೆ.

ನಾಯಕತ್ವ ಬದಲಾವಣೆ ಆಗುವುದೇ ಆದರೆ, ನೀವು ಅಥವಾ ಇನ್ನೊಬ್ಬ ದಲಿತ ನಾಯಕರನ್ನೇ ಆರಿಸಿ ಎಂದಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದಲ್ಲಿ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು ಎಂಬ ಸುಳಿವು ನೀಡಿದ್ದಾರೆ.

ನಮ್ಮ ಹಿತ ಕಾಪಾಡಿ

ಒಂದು ವೇಳೆ ಮಂತ್ರಿಮಂಡಲ ಪುನರ್ ರಚನೆ ತೀರ್ಮಾನ ಕೈಗೊಂಡರೆ, ನಮ್ಮ ಹಿತ ಕಾಪಾಡಿ ಎಂದೂ ಮನವಿ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿರುವ ಮೂವರು ಸಚಿವರು, ಖರ್ಗೆ ಅವರನ್ನಷ್ಟೇ ಅಲ್ಲದೆ, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರುಗಳನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಚಾಮರಾಜನಗರ ಸಂಸದ ಅನಿಲ್ ಬೋಸ್ ಅವರ ದೆಹಲಿ ನಿವಾಸದಲ್ಲಿ ಈ ಸಚಿವರು ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಲ್ಲದೆ, ಮರುದಿನ ಬೆಳಗ್ಗೆಯೂ ಅಲ್ಲಿಯೇ ಮಾತುಕತೆ ಮುಂದುವರೆಸಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಹಾ ಉಪಸ್ಥಿತರಿದ್ದರು.

ಸಮಾವೇಶಕ್ಕೆ ಸಿದ್ಧತೆ

ದಲಿತರಿಗೆ ಒಳ ಮೀಸಲಾತಿ ಕಲ್ಪಿಸಿರುವ ಹಿನ್ನೆಲೆಯಲ್ಲಿ ದಾವಣಗೆರೆ ಅಥವಾ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲು ಈ ನಾಯಕರು ನಿರ್ಧರಿಸಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್ ನಮಗೆ ಒಳ ಮೀಸಲಾತಿ ಕಲ್ಪಿಸಿದೆ, ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ದಲಿತ ವ್ಯಕ್ತಿಯ ಆಯ್ಕೆಗೆ ಒತ್ತಾಯಿಸಿ ನಿರ್ಣಯ ಕೈಗೊಂಡು ವರಿಷ್ಠರಿಗೆ ರವಗಾನಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ.

ಕಾಂಗ್ರೆಸ್ ವತಿಯಿಂದಲೇ ಸಮಾವೇಶ ನಡೆಸುವುದಾಗಿ ತಿಳಿಸಿರುವ ನಾಯಕರು, ಇದನ್ನು ತಡೆಯುವ ಪ್ರಯತ್ನ ಮಾಡದಂತೆ ನೋಡಿಕೊಳ್ಳಬೇಕೆಂದು ಕೋರಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecouncil member b k hariprasadk h muniyappaleadership changeministers dr h c mahadevappapower sharingsatish jarakiholi
0 FacebookTwitterPinterestEmail
KM Shivaraju

previous post
ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

You may also like

ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

April 28, 2026

ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

April 25, 2026

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (447)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,941)
  • ರಾಜ್ಯ (2,256)
  • ರಾಷ್ಟ್ರ (2,225)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ

    April 29, 2026
  • ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

    April 28, 2026
  • ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

    April 25, 2026

KMS Special

  • ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ

    April 29, 2026
  • ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

    April 28, 2026
  • ಅಧಿಕಾರ ಹಂಚಿಕೆ: ಹೈಕಮಾಂಡ್‌ಗೆ ಡಿಕೆಶಿ ಗಡುವು

    April 25, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಜಿಸಲು ಸಿದ್ಧು ಮಾನಸಿಕವಾಗಿ ಸಿದ್ಧ

April 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ