Sunday, June 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, June 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ತೆಕ್ಕೆಗೆ ದಾವಣಗೆರೆ-ಬಾಗಲಕೋಟೆ ಕ್ಷೇತ್ರ

by admin May 4, 2026
written by admin May 4, 2026 0 comments 2 minutes read
0FacebookTwitterPinterestEmail
61

ಶೃಂಗೇರಿ ಕ್ಷೇತ್ರ ಅಂಚೆ ಮರು ಮತಎಣಿಕೆಯಲ್ಲಿ ಬಿಜೆಪಿ ಗೆಲುವು

ಬೆಂಗಳೂರು:ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಎರಡೂ ಸ್ಥಾನಗಳನ್ನು ಉಳಿಸಿಕೊಂಡಿದೆ.

ನ್ಯಾಯಾಲಯದ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ರಾಜೇಗೌಡ ಸೋಲುವಂತಾಗಿದೆ.

ಎಐಸಿಸಿ ಗಮನ ಎತ್ತ

ಒಂದೆಡೆ ಉಪಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದಿದ್ದರೆ, ಇನ್ನೊಂದಡೆ ಕರ್ನಾಟಕ ಕಾಂಗ್ರೆಸ್ ನಾಯಕತ್ವ ಗೊಂದಲ ಮುಂದುವರಿದಿದ್ದು, ಎಐಸಿಸಿ ಈಗ ಇತ್ತ ಗಮನಹರಿಸಬೇಕಿದೆ.

ಬಂಡಾಯದ ಬಿಸಿ ನಡುವೆಯೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು, ಬಿಜೆಪಿ ಅಭ್ಯರ್ಥಿ ದಾಸ್ ಕರಿಯಪ್ಪ ವಿರುದ್ಧ 5,708 ಮತಗಳಿಂದ ಜಯ ಗಳಿಸಿದ್ದಾರೆ.

ಸಮರ್ಥ್ ಪರ 69,578 ಮತಗಳು, ದಾಸ್ ಕರಿಯಪ್ಪ ಪರ 63,570 ಮತಗಳು ಚಲಾವಣೆ ಆಗಿದ್ದು, ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೂಡ್ಲಿ ಬೆಟ್ಟು 18,624 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 98,919 ಮತ ಪಡೆದರೆ, ಬಿಜೆಪಿಯ ವೀರಣ್ಣ ಚರಂತಿಮಠ್ 75,587 ಮತಗಳನ್ನು ಪಡೆದಿದ್ದಾರೆ. ಗೆಲುವಿನ ಅಂತರ 22,332 ಮತಗಳು.

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ಮೊದಲ ಏಳು ಸುತ್ತಿನಲ್ಲಿ ಭಾರೀ ಹಿನ್ನಡೆಯಲ್ಲಿದ್ದರೂ ನಂತರದ ಎಣಿಕೆಯಲ್ಲಿ ಮುನ್ನಡೆ ಪಡೆದು ತಮ್ಮ ತಾತ ಶಾಮನೂರು ಶಿವಶಂಕರಪ್ಪ ಅವರ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ದಾಸ್ ಕರಿಯಪ್ಪ ಕೊನೆ ಗಳಿಗೆವರೆಗೆ ತೀವ್ರ ಪೈಪೋಟಿ ನೀಡಿದರಲ್ಲದೆ, ಕಾಂಗ್ರೆಸ್ ಭದ್ರ ಕೋಟೆ ಛಿದ್ರಗಿಳಿಸಲು ನಡೆಸಿದ ಪ್ರಯತ್ನ ಫಲ ನೀಡಲಿಲ್ಲ.

ಹೆಚ್ಚು ಮತಗಳ ಅಂತರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ 30,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದರು.

ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರು ತಮಗೆ ಟಿಕೆಟ್ ನೀಡಬೇಕೆಂದು ಕೊನೆವರೆಗೂ ಪಟ್ಟು ಹಿಡಿದಿದ್ದರು.

ಕಣದಲ್ಲಿದ್ದ ಪಕ್ಷದ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಅವರನ್ನು ಸ್ಪರ್ಧೆಯಿಂದ ನಿವೃತ್ತಿಗೊಳಿಸಿದರೂ ಎಸ್‌ಡಿಪಿಐ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರ ಅಲ್ಪಸಂಖ್ಯಾತ ಅಭ್ಯರ್ಥಿಗಳು ಒಟ್ಟಾರೆಯಾಗಿ ಸುಮಾರು 23,000 ಮತಗಳನ್ನು ಪಡೆದರೂ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರು.

ಮುಖ್ಯಮಂತ್ರಿ ಒಂದು ವಾರ ಬಿಡಾರ

ಬಾಗಲಕೋಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ವಾರ ಅಲ್ಲಿಯೇ ಬಿಡಾರ ಹೂಡಿ ಚುನಾವಣಾ ಪ್ರಚಾರ ಮಾಡುವ ಮೂಲಕ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲುವಲ್ಲಿ ಶ್ರಮಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್.ವೈ.ಮೇಟಿ ಸುಮಾರು 5,000 ಮತಗಳ ಅಂತರದಿಂದ ಚರಂತಿಮಠ್ ಅವರನ್ನು ಪರಾಭವಗೊಳಿಸಿದ್ದರು, ಉಪಚುನಾವಣೆಯಲ್ಲಿ ಪುತ್ರ ಉಮೇಶ್ ಮೇಟಿ ಭಾರೀ ಅಂತರದ ಗೆಲುವಿನ ಮೂಲಕ ಕ್ಷೇತ್ರ ಉಳಿಸಿಕೊಂಡಿದ್ದಾರೆ.

ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳು ಈ ಹಿಂದೆ ಪ್ರತಿನಿಧಿಸಿದ್ದ ಶಾಸಕರ ಕುಟುಂಬಗಳ ಪಾಲಾಗಿವೆ.

ನ್ಯಾಯಾಲಯದ ಮೊರೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಚಲಾವಣೆಗೊಂಡಿದ್ದ 1,822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತಗೊಂಡಿದ್ದವು, ಇದನ್ನು ಪ್ರಶ್ನಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮೂರು ವರ್ಷಗಳ ಹೋರಾಟದ ನಂತರ ನ್ಯಾಯಾಲಯ ಅಂಚೆ ಮತಗಳ ಮರುಎಣಿಕೆಗೆ ಆದೇಶಿಸಿತ್ತು.

ಕಳೆದ ಶನಿವಾರ ರಾತ್ರಿಯಿಡೀ ನಡೆದ ಮತಎಣಿಕೆಯಲ್ಲಿ ಜೀವರಾಜ್ ಜಯಗಳಿಸಿದ್ದರಾದರೂ ಅಧಿಕೃತ ಪ್ರಕಟಣೆ ಹೊರಬಿದ್ದಿರಲಿಲ್ಲ.

ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಇಂದು ಫಲಿತಾಂಶ ಘೋಷಿಸಿ, ಅಭ್ಯರ್ಥಿಗೆ ಗೆಲುವಿನ ಪ್ರಮಾಣಪತ್ರ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp jeevaraj winby-electioncongres win both seatsshurngeri recounting
0 FacebookTwitterPinterestEmail
admin

previous post
ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು
next post
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ : ಸಿದ್ದರಾಮಯ್ಯ

You may also like

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (500)
  • ಅಂಕಣ (109)
  • ಉದ್ಯೋಗ (334)
  • ದಿನ ಭವಿಷ್ಯ (110)
  • ರಾಜಕೀಯ (1,994)
  • ರಾಜ್ಯ (2,308)
  • ರಾಷ್ಟ್ರ (2,273)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026

KMS Special

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ