Sunday, July 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, July 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

by admin July 18, 2026
written by admin July 18, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ಬರ ಘೋಷಣೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಸಂಬಂಧ ಬರ ಘೋಷಣೆ ಮತ್ತು ಗುಳೇ ಹೋಗುವುದನ್ನು ತಪ್ಪಿಸಲು ಪ್ರಮುಖ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ವಿಡಿಯೊ ಕಾನ್ಫರೆನ್ಸಿಂಗ್

ಇದಕ್ಕೂ ಮುನ್ನ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ನಡೆಸಿ, ಕುಡಿಯುವ ನೀರು, ರಾಸುಗಳಿಗೆ ಮೇವು ಹಾಗೂ ಕೃಷಿ ಸಂಬಂಧಿತ ಮಾಹಿತಿಯನ್ನು ಜಿಲ್ಲಾಡಳಿತಗಳಿಂದ ಪಡೆಯಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಈಗಾಗಲೇ ಕಲಬುರಗಿ ಮತ್ತು ಬೆಳಗಾವಿ ವಿಭಾಗದ ಸಭೆ ನಡೆಸಿ, ಬರ ಪರಿಸ್ಥಿತಿ ಸಂಬಂಧ ಮಾಹಿತಿ ಪಡೆಯಲಾಗಿದೆ, ನಾಳೆ ಉಳಿದ ಎಲ್ಲಾ ಜಿಲ್ಲೆಗಳ ಮಾಹಿತಿ ಪಡೆದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಸಭೆ ತೀರ್ಮಾನಿಸಲಿದೆ ಎಂದರು.

ಮಳೆ ಕೊರತೆ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಬಂದಿದೆ, ಎಲ್ಲೆಲ್ಲಿ ಎಷ್ಟು ಕೊರತೆ ಆಗಿದೆ, ಇದರಿಂದ ಉಂಟಾಗಿರುವ ಕುಡಿಯುವ ನೀರು ಮತ್ತು ರಾಸುಗಳಿಗೆ ಮೇವಿನ ಸಮಸ್ಯೆ, ಉದ್ಯೋಗ ಅರಸಿ ಜನರು ಗುಳೇ ಹೊರಟಿದ್ದಾರೆ ಎಂಬುದು ಗೊತ್ತಿದೆ.

ಗುಳೇ ತಪ್ಪಿಸಲು ಕಾರ್ಯಕ್ರಮ

ಮೊದಲು ಗುಳೇ ತಪ್ಪಿಸಲು ಕಾರ್ಯಕ್ರಮ ರೂಪಿಸುವ ಉದ್ದೇಶದಿಂದ ತುರ್ತು ಮಂತ್ರಿಮಂಡಲ ಸಭೆ ಕರೆಯಲಾಗಿದೆ, ಅಲ್ಲಿ ಎಲ್ಲ ವಿಷಯ ಚರ್ಚಿಸಿ ಬರ ಘೋಷಣೆ ಮಾಡಲಾಗುವುದು ಎಂದರು.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರತಿ ಜಿಲ್ಲೆಗೆ ಐದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ಅಲ್ಲದೆ, ವಿವಿಧ ಬಾಬ್ತಿನಡಿ ಜಿಲ್ಲಾಡಳಿತದಲ್ಲಿ 929 ಕೋಟಿ ರೂ. ಇದೆ, ಅಗತ್ಯ ಸಂದಭsಗಳಲ್ಲಿ ಈ ಹಣ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಪತ್ರ

ಬರ ಪರಿಸ್ಥಿತಿ ನಿಯಮ ಸಡಿಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ, ಬರಪೀಡಿತ ಘೋಷಣೆಗೆ ನಿರ್ದಿಷ್ಟ ನಿಯಮಗಳ ಪಾಲನೆ ಕಡ್ಡಾಯವಾಗಿದ್ದು, ಅವುಗಳಲ್ಲಿ ಸಡಿಲಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಬರ ಪರಿಸ್ಥಿತಿ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ, ಇಡೀ ದೇಶದಲ್ಲಿದೆ, ಆದ್ದರಿಂದ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮನವಿ ಮಾಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumardcm dr.g.parameshwaremergency cabinet meetingofficers meetingtomorrow in bengaluru
0 FacebookTwitterPinterestEmail
admin

previous post
ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

You may also like

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (519)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,013)
  • ರಾಜ್ಯ (2,327)
  • ರಾಷ್ಟ್ರ (2,292)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026

KMS Special

  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ