Thursday, July 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

by KM Shivaraju July 29, 2026
written by KM Shivaraju July 29, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಕಾವೇರಿ ಜಲ ವಿವಾದ ಹಾಗೂ ಮೇಕೆದಾಟು ಯೋಜನೆ ಕುರಿತು ದ್ವಿಪಕ್ಷೀಯ ಮಾತುಕತೆಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಅದ್ದೂರಿ ಸ್ವಾಗತ ನೀಡಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ.

ವಿಜಯ್, ಆಗಸ್ಟ್ 3ರಂದು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡು ವಿಧಾನಸೌಧದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಜಲ ವಿವಾದ ಪರಿಹಾರ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.

ವಿಧಾನಸೌಧ ಶೃಂಗಾರ

ಈ ಸಭೆಗಾಗಿ ಇಡೀ ವಿಧಾನಸೌಧದ ಡಿಪಿಆರ್ ಮತ್ತು ಲೋಕೋಪಯೋಗಿ ಇಲಾಖೆ ಸ್ವಚ್ಛತೆ ಮತ್ತು ಶೃಂಗಾರ ಕಾಮಗಾರಿ ಕೈಗೊಂಡಿದೆ.

ವಿಧಾನಸೌಧದ 3ನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣವನ್ನೇ ಅದ್ದೂರಿಯಾಗಿ ಶೃಂಗರಿಸಲಾಗುತ್ತಿದೆ.

ಉಭಯ ರಾಜ್ಯಗಳ ಇಬ್ಬರು ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೂ ಸೇರಿದಂತೆ 25 ಮಂದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರವೇಶ ನಿಷಿದ್ಧ

ಇವರನ್ನು ಹೊರತುಪಡಿಸಿ ಉಳಿದವರಿಗೆ ಅಂದು ವಿಧಾನಸೌಧ ಪ್ರವೇಶ ನಿಷಿದ್ಧ, ಸಭೆಗಾಗಿ ದುಂಡುಮೇಜಿನ ಮಾದರಿಯಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿದೆ.

ವಿಧಾನಸೌಧದ ಪೂರ್ವ ದ್ವಾರದಿಂದ ವಿಜಯ್ ಪ್ರವೇಶಕ್ಕೆ ಸಮ್ಮೇಳನ ಸಭಾಂಗಣದವರೆಗೆ ಸಂಪೂರ್ಣ ಕೆಂಪು ಹಾಸುಗಂಬಳಿಯಿಂದ ಶೃಂಗರಿಸಲಾಗುತ್ತಿದೆ.

ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕುಳಿತುಕೊಳ್ಳುವ ಆಸನದ ಹಿಂಬದಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಅಧಿಕೃತ ಲಾಂಛನ ಒಳಗೊಂಡ ಧ್ವಜಗಳನ್ನು ಅಳವಡಿಸಲಾಗುತ್ತಿದೆ.

ಮೇಕೆದಾಟು ಯೋಜನೆ

ಕಾವೇರಿ ವಿವಾದಕ್ಕಿಂತ ಮಿಗಿಲಾಗಿ ಮೇಕೆದಾಟು ಯೋಜನೆ ಕುರಿತು ವಿಜಯ್ ನಮ್ಮ ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ಮಾತುಕತೆಗೆ ಬರುವುದಾಗಿ ತಿಳಿಸಿದ್ದರು.

ತದನಂತರ ತಮಿಳುನಾಡು ಸರ್ಕಾರದ ಮುಖ್ಯಕಾರ್ಯದರ್ಶಿ ಅವರು, ಕರ್ನಾಟಕದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು, ತಮ್ಮ ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳ ತಂಡ ಮಾತುಕತೆಗೆ ಬರುತ್ತಿರುವುದಾಗಿ ತಿಳಿಸಿದ್ದರು.

ವಿಜಯ್ ಕಾರ್ಯಾಲಯದ ಸಂದೇಶ ಬರುತ್ತಿದ್ದಂತೆ ಸ್ವತಃ ಮುಖ್ಯಮಂತ್ರಿ ಮೇಲ್ವಿಚಾರಣೆ ವಹಿಸಿಕೊಂಡು, ಸಮ್ಮೇಳನ ಸಭಾಂಗಣವನ್ನು ಬೇರೆ ಯಾವ ಕಾರ್ಯಕ್ರಮಕ್ಕೂ ಬಳಸದಂತೆ ಹಾಗೂ ಸಭಾಂಗಣವನ್ನು ಅದ್ದೂರಿಯಾಗಿ ಶೃಂಗರಿಸಲು ಸೂಚಿಸಿದರು.

ಗೌರವಯುತ ಸ್ವಾಗತ

ಅಲ್ಲದೆ, ಅತಿಥಿಗಳನ್ನು ಅತ್ಯಂತ ಗೌರವಯುತವಾಗಿ ಬರಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡುವಂತೆ ಮುಖ್ಯಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಆದೇಶಿಸಿದರು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಎರಡು ಬಾರಿ ಹಾಗೂ ಜಯಲಲಿತಾ ಒಂದು ಬಾರಿ ಕರ್ನಾಟಕಕ್ಕೆ ಆಗಮಿಸಿ ಬೆಂಗಳೂರಿನಲ್ಲಿ ರಾಜ್ಯದ ಅಂದಿನ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದರು.

ದ್ವಿಪಕ್ಷೀಯ ಮಾತುಕತೆ

ಕರುಣಾನಿಧಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡರೆ, ಜಯಲಲಿತಾ ಶಕ್ತಿಸೌಧಕ್ಕೆ ಬರಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣ ಸಮೀಪದ ಪಂಚತಾರಾ ಹೋಟೆಲ್ ಒಂದರಲ್ಲಿ ಸಿದ್ಧಪಡಿಸಿದ್ದ ವೇದಿಕೆಗೆ ಆಗಮಿಸಿ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು.

ಲೀಲಾ ಪ್ಯಾಲೇಸ್‌ನಲ್ಲಿ ನಡೆದ ಈ ಸಭೆಗೆ ಜಯಲಲಿತಾ ತಾವು ಕುಳಿತುಕೊಳ್ಳುವ ಮುಖ್ಯಮಂತ್ರಿ ಆಸನವನ್ನೇ ವಿಶೇಷ ವಿಮಾನದಲ್ಲಿ ತರಿಸಿಕೊಂಡಿದ್ದನ್ನು ಸ್ಮರಿಸಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
d k shivakumarjosef vijaykarnatakakaveri water disputemekedaturound table conferencetamilunadutwo state chief ministers meetvidhana soudha
0 FacebookTwitterPinterestEmail
KM Shivaraju

previous post
ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

You may also like

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (527)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,021)
  • ರಾಜ್ಯ (2,335)
  • ರಾಷ್ಟ್ರ (2,300)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

    July 29, 2026
  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026

KMS Special

  • ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

    July 29, 2026
  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ