Tuesday, August 4, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, August 4, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

by admin August 3, 2026
written by admin August 3, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲ ವಿಸ್ತರಿಸಿ ಹೊಸದಾಗಿ 19 ಮಂದಿಯನ್ನು ಸಂಪುಟಕ್ಕೆ ಇಂದಿಲ್ಲಿ ಸೇರ್ಪಡೆ ಮಾಡಿಕೊಂಡಿದ್ದಾರೆ.

ಲೋಕಭವನದ ಗಾಜಿನಮನೆಯಲ್ಲಿ ಸಂಜೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು, ಇದರೊಂದಿಗೆ ಶಿವಕುಮಾರ್ ಸಂಪುಟದ ಒಂದು ಸ್ಥಾನ ಉಳಿಸಿಕೊಂಡು ಉಳಿದ ಎಲ್ಲಾ ಸ್ಥಾನಗಳು ಭರ್ತಿಯಾಗಿವೆ.

ಲಕ್ಷ್ಮಣ ಸವದಿ, ಬಸವರಾಜ ರಾಯರೆಡ್ಡಿ

ಲಕ್ಷ್ಮಣ ಸವದಿ (ಬೆಳಗಾವಿ), ಬಸವರಾಜ ರಾಯರೆಡ್ಡಿ (ಕೊಪ್ಪಳ), ವಿಜಯಾನಂದ ಕಾಶಪ್ಪನವರ್ (ಬಾಗಲಕೋಟೆ), ಪಿ.ಎಂ.ನರೇಂದ್ರ ಸ್ವಾಮಿ ಹಾಗೂ ಎನ್.ಚಲುವರಾಯ ಸ್ವಾಮಿ (ಮಂಡ್ಯ).

ಕೆ.ಎಂ.ಶಿವಲಿಂಗೇಗೌಡ (ಹಾಸನ), ಎಚ್.ಸಿ.ಬಾಲಕೃಷ್ಣ (ಬೆಂಗಳೂರು ದಕ್ಷಿಣ), ಶಿವರಾಜ್ ತಂಗಡಗಿ (ರಾಯಚೂರು), ರುದ್ರಪ್ಪ ಲಮಾಣಿ (ಹಾವೇರಿ), ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಕೆ.ಎಸ್.ಬಸವಂತಪ್ಪ (ದಾವಣಗೆರೆ).

ಬಿ.ನಾಗೇಂದ್ರ (ಬಳ್ಳಾರಿ), ಟಿ.ರಘುಮೂರ್ತಿ (ಚಿತ್ರದುರ್ಗ), ಬಿ.ಜೆಡ್.ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್ (ಬೆಂಗಳೂರು ನಗರ), ಸಂತೋಷ್ ಲಾಡ್ (ಧಾರವಾಡ).

ಪುಟ್ಟರಂಗಶೆಟ್ಟಿ, ಡಾ.ಅಜಯ್ ಸಿಂಗ್

ಎಸ್.ಮಧುಬಂಗಾರಪ್ಪ (ಶಿವಮೊಗ್ಗ), ಪುಟ್ಟರಂಗಶೆಟ್ಟಿ (ಚಾಮರಾಜನಗರ), ಡಾ.ಅಜಯ್ ಸಿಂಗ್ (ಯಾದಗಿರಿ) ಇವರುಗಳು ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಗೊಂಡರು.

ಸಂವಿಧಾನ, ದೇವರು ಹಾಗೂ ತಮ್ಮ ಆಪ್ತ ಗುರುಪೀಠಗಳ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕರ್ನಾಟಕದ ಎಲ್ಲ ಸಮುದಾಯಗಳಿಗೂ ಅರ್ಥಪೂರ್ಣ ಪ್ರಾತಿನಿಧ್ಯ ನೀಡುವ ಮೂಲಕ ಶಿವಕುಮಾರ್ ಸಾಮಾಜಿಕ ನ್ಯಾಯಕ್ಕೆ ತಮ್ಮ ಬದ್ಧತೆಯನ್ನು ತೋರಿದ್ದಾರೆ.

7 ಲಿಂಗಾಯತರಿಗೆ ಸ್ಥಾನ

ಹಿಂದಿನ ಸಚಿವ ಸಂಪುಟದಲ್ಲಿದ್ದ ವರ್ಗ ಮತ್ತು ಸಮುದಾಯಗಳ ಪ್ರಾತಿನಿಧ್ಯ ಮುಂದುವರಿಸಿದ್ದು, 7 ಲಿಂಗಾಯತರಿಗೆ ಸ್ಥಾನ ನೀಡಲಾಗಿದೆ.

ಹಿಂದಿನ ಸಚಿವ ಸಂಪುಟದಂತೆಯೇ ಒಕ್ಕಲಿಗರಿಗೆ 5 ಸಚಿವ ಸ್ಥಾನ ನೀಡಿದ್ದು, ಇದರ ಜೊತೆಗೆ ಮುಖ್ಯಮಂತ್ರಿ ಸಹಾ ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತಾರೆ.

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ 7 ಪರಿಶಿಷ್ಟ ಜಾತಿ ಸಚಿವರಿಗೆ ಅವಕಾಶ ನೀಡಲಾಗಿದೆ, ಇದರಲ್ಲಿ 3 ಬಲಗೈ, 2 ಎಡಗೈ, 1 ಲಂಬಾಣಿ ಹಾಗೂ 1 ಭೋವಿ ಸಮುದಾಯದ ಪ್ರತಿನಿಧಿಗಳಿದ್ದು, ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ, ಪರಿಶಿಷ್ಟ ಪಂಗಡದ ೩ ಸಚಿವರಿಗೆ ಸ್ಥಾನ ನೀಡಲಾಗಿದೆ.

ಹಿಂದುಳಿದ ವರ್ಗಗಳಿಗೆ 6

ಮುಸ್ಲಿಂ ಸಮುದಾಯಕ್ಕೆ 3, ಹಿಂದುಳಿದ ವರ್ಗಗಳಿಗೆ 6 ಸಚಿವ ಸ್ಥಾನಗಳನ್ನು ನೀಡಲಾಗಿದೆ.

ಒಟ್ಟಾರೆ 33 ಸಚಿವ ಸ್ಥಾನಗಳಲ್ಲಿ 22 ಸ್ಥಾನಗಳು, ಅಂದರೆ ಶೇ.60ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪ್ರತಿನಿಧಿಗಳಿಗೆ ದೊರೆತಿವೆ.

ಕೆ.ಎಸ್.ಬಸವಂತಪ್ಪ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ಡಾ.ಅಜಯ್ ಸಿಂಗ್, ಕೆ.ಎಂ.ಶಿವಲಿಂಗೇಗೌಡ, ಎಚ್.ಸಿ.ಬಾಲಕೃಷ್ಣ, ವಿಜಯಾನಂದ ಕಾಶಪ್ಪನವರ್ ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಚಿವರಾಗಿ ಅನುಭವ

ಉಳಿದವರಿಗೆ ಬಿ.ಎಸ್.ಯಡಿಯೂರಪ್ಪ. ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸಂಟುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ.

ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ಸಚಿವರು, ಶಾಸಕರು, ಕಾಂಗ್ರೆಸ್ ಸಂಸದರು ಹಾಗೂ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumar cabinet expansiongovernor thavar chand gehlotlokabhavana glass houseraised to 33swearing in ceremony
0 FacebookTwitterPinterestEmail
admin

previous post
ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (530)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,024)
  • ರಾಜ್ಯ (2,338)
  • ರಾಷ್ಟ್ರ (2,303)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

    July 30, 2026

KMS Special

  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

    July 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ