Thursday, August 27, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, August 27, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

by KM Shivaraju August 26, 2026
written by KM Shivaraju August 26, 2026 0 comments 1 minutes read
0FacebookTwitterPinterestEmail
8

ನವದೆಹಲಿ:ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರಕ್ಕೆ ಪತ್ರ ಬರೆದಿರುವ ಬೆನ್ನೆಲ್ಲೇ ಪಕ್ಷ ಈ ತೀರ್ಮಾನ ಕೈಗೊಂಡಿದೆ.

ಶಿಸ್ತಿನ ಸಿಪಾಯಿ

ಈ ಮಧ್ಯೆ, ಸಚಿವ ಬಿ.ನಾಗೇಂದ್ರ ರಾಜೀನಾಮೆ ವದಂತಿಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿದಂತೆ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಮಾರ್ಮಿಕವಾಗಿ ನುಡಿದರು.

ನಾಗೇಂದ್ರ ವಿರುದ್ಧ ಸಿಬಿಐ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗಬಾರದೆಂಬ ಕಾರಣಕ್ಕೆ ರಾಜೀನಾಮೆ ಪಡೆದುಕೊಳ್ಳುವಂತೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಎಐಸಿಸಿ ಆದೇಶಿಸಿದೆ.

ವರಿಷ್ಠರ ಆದೇಶಕ್ಕೆ ತಲೆಬಾಗಿ ರಾಜೀನಾಮೆ ನೀಡಲು ನಿರ್ಧರಿಸಿರುವ ನಾಗೇಂದ್ರ, ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ಸಿಬಿಐ ತನಿಖೆ

ಕರ್ನಾಟಕದಲ್ಲಿ ಸಿಬಿಐ ತನಿಖೆಗೆ ಮುಕ್ತ ಅವಕಾಶ ಇಲ್ಲದಿರುವುದರಿಂದ ರಾಜ್ಯಪಾಲರ ಮುಖೇನ ನಾಗೇಂದ್ರ ವಿರುದ್ಧ ತನಿಖೆ ನಡೆಸಲು ಅವಕಾಶ ನೀಡುವಂತೆ ಸಿಬಿಐ ಕೋರಿತ್ತು.

ರಾಜ್ಯಪಾಲರ ಪತ್ರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ, ಸಿಬಿಐ ತನಿಖೆಗೆ ವಹಿಸಲು ಅನುಮತಿ ನೀಡಬೇಕೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬೇಕಿದೆ.

ಪ್ರಾಸಿಕ್ಯೂಷನ್ ಅನುಮತಿಗೆ ಸರ್ಕಾರ ನಿರಾಕರಿಸಿದಲ್ಲಿ, ರಾಜ್ಯಪಾಲರು ತಮ್ಮ ಅಧಿಕಾರ ಬಳಕೆ ಮಾಡಿಕೊಂಡು ನಾಗೇಂದ್ರ ವಿರುದ್ಧ ತನಿಖೆಗೆ ಆದೇಶ ಮಾಡಬಹುದಾಗಿದೆ.

ಸರ್ಕಾರಕ್ಕೆ ಮುಜುಗರ

ರಾಜ್ಯಪಾಲರು ಇಂತಹ ನಿರ್ಧಾರ ಕೈಗೊಂಡಿದ್ದೇ ಆದಲ್ಲಿ, ಸರ್ಕಾರಕ್ಕೆ ಮುಜುಗರವಾಗುತ್ತದೆ ಎಂಬುದನ್ನು ಮುಖ್ಯಮಂತ್ರಿ ಅವರು, ವರಿಷ್ಠರ ಗಮನಕ್ಕೆ ತಂದಿದ್ದರು.

ಮುಖ್ಯಮಂತ್ರಿ ಸಲಹೆ ಪರಿಗಣಿಸಿರುವ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಲ್ಲೇ ಬಿಡಾರ ಹೂಡಿರುವ, ಎಐಸಿಸಿ ಅಧ್ಯಕ್ಷ ಮಲ್ಲಿಕಾಜುನ್ ಖರ್ಗೆ ಅವರನ್ನು ಸಂಪರ್ಕಿಸಿ, ನಾಗೇಂದ್ರ ರಾಜೀನಾಮೆ ಪೊಡೆಯುವ ತೀರ್ಮಾನ ಕೈಗೊಂಡರು.

ವರಿಷ್ಠರ ತೀರ್ಮಾನದಂತೆ ಮುಖ್ಯಮಂತ್ರಿ ಅವರು, ನಾಗೇಂದ್ರ ಅವರನ್ನು ಸಂಪರ್ಕಿಸಿ, ರಾಜ್ಯಪಾಲರು ತೆಗೆದುಕೊಂಡಿರುವ ನಿಲುವು ಮತ್ತು ಎಐಸಿಸಿ ತೀರ್ಮಾನದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಮುಂದೆ ನಿಮಗೆ ಪಕ್ಷ ಒಳ್ಳೆಯ ಭವಿಷ್ಯ ರೂಪಿಸಲಿದೆ ಎಂಬ ಸಲಹೆ ನೀಡಿದರು.

ಮುಖ್ಯಮಂತ್ರಿ ಸಲಹೆ

ಮುಖ್ಯಮಂತ್ರಿ ಸಲಹೆಯಂತೆ ನಾಗೇಂದ್ರ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಈ ಹಿಂದೆ ನಿಗಮದ ಹಗರಣ ಬಯಲಾದ ಸಂದರ್ಭದಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ತೊರೆದು ಹೊರಬಂದು ಎಸ್‌ಐಟಿ, ಇ.ಡಿ. ಹಾಗೂ ಸಿಬಿಐ ತನಿಖೆ ಎದುರಿಸಿದ್ದರು.

ನಾಗೇಂದ್ರ ಅವರನ್ನು ಇ.ಡಿ. ಬಂಧಿಸಿ, ಜೈಲಿಗೂ ಕಳುಹಿಸಿತ್ತು, ನಂತರ ಜಾಮೀನು ಪಡೆದು ಹೊರ ಬಂದ ಅವರು, ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾಗಿ ನೇಮಕೊಂಡಿದ್ದರು.

ಬಿಜೆಪಿ-ಜೆಡಿಎಸ್ ಹೋರಾಟ

ಮಂತ್ರಿಯಾಗಿ ನೇಮಕಗೊಂಡ ದಿನದಿಂದಲೇ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ, ಬಿಜೆಪಿ ಮತ್ತು ಜೆಡಿಎಸ್, ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮತ್ತು ಹೊರಗೆ ಹೋರಾಟ ನಡೆಸಿದೆ.

ಅಲ್ಲದೆ, ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ, ಬಿಜೆಪಿ ಸೆಪ್ಟೆಂಬರ್ 1 ರಿಂದ 10 ದಿನಗಳ ಕಾಲ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.nagendrabengalurubjp-jds protestcm d k shivakumarcongres high commandin and out of assemblyminister resignationnewdelhi
0 FacebookTwitterPinterestEmail
KM Shivaraju

previous post
ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

You may also like

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

Social Networks

Facebook Twitter Instagram Linkedin Youtube Email Rss

KMS Analysis

  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026

Categories

  • Special Story (549)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,042)
  • ರಾಜ್ಯ (2,357)
  • ರಾಷ್ಟ್ರ (2,322)
  • ವಿಶ್ಲೇಷಣೆ (200)
  • ಶಿಕ್ಷಣ (405)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

    August 26, 2026
  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026

KMS Special

  • ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

    August 26, 2026
  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ