Wednesday, September 16, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, September 16, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

by KM Shivaraju September 15, 2026
written by KM Shivaraju September 15, 2026 0 comments 2 minutes read
0FacebookTwitterPinterestEmail
10

ಇ.ಡಿ. ಅಧಿಕಾರಿಗಳ ಜೊತೆ ನಿರ್ದೇಶಕ ರಾಹುಲ್ ನವೀನ್ ಚರ್ಚೆ

ಬೆಂಗಳೂರು:ವಿದೇಶದಲ್ಲಿ ಬಂಡವಾಳ ಹೂಡಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

ದಕ್ಷಿಣ ಆಫ್ರಿಕಾದ ವಿವಿಧ ದೇಶಗಳಲ್ಲಿ ಅದಿರು ಗಣಿಗಾರಿಕೆ ಹಾಗೂ ಚಿನ್ನ ನಿಕ್ಷೇಪಗಳಲ್ಲಿ ಹೂಡಿಕೆ ಮಾಡಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಸಚಿವರ ಮನೆ ಮತ್ತು ಕಚೇರಿಗಳ ಮೇಲೆ ಸತತ 37 ಗಂಟೆಗಳ ದಾಳಿ ನಡೆಸಿ ಕೋಟ್ಯಂತರ ರೂ. ನಗದು ಹಾಗೂ ದಾಖಲೆಗಳನ್ನು ವಶ ಪಡಿಸಿಕೊಂಡಿತ್ತು.

ಪ್ರಭಾವೀ ಸಚಿವರ ವ್ಯವಹಾರ

ಪ್ರಭಾವೀ ಸಚಿವರು ನಡೆಸಿರುವ ವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾದ ಇ.ಡಿ. ಅಧಿಕಾರಿಗಳು ಕೇಂದ್ರ ಕಚೇರಿಗೆ ವರದಿ ಸಲ್ಲಿಸುತ್ತಿದ್ದಂತೆ ಇ.ಡಿ. ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳ ತಂಡವೇ ನಗರಕ್ಕೆ ಧಾವಿಸಿತು.

ಗಣೇಶ ಚತುರ್ಥಿ ದಿನದಂದೇ ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಇಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕರ್ನಾಟಕ ಮತ್ತು ಗೋವಾದ ಹಿರಿಯ ಇ.ಡಿ. ಅಧಿಕಾರಿಗಳ ಜೊತೆ ನಿರ್ದೇಶಕ ರಾಹುಲ್ ನವೀನ್, ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ಇಡೀ ದಿನ ಚರ್ಚೆ ನಡೆಸಿ, ಇದೆಲ್ಲಾ ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಆದೇಶ ಮಾಡಿದ್ದಾರೆ.

ಕೋಲಾರ ಹಾಲು ಉತ್ಪಾದಕರ ಸಂಘದಲ್ಲಿ ನಡೆದಿರುವ ಅಕ್ರಮದ ಬಗ್ಗೆ ಶಾಸಕ ಕೆ.ವೈ.ನಂಜೇಗೌಡ, ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ ಅಕ್ರಮ ಆರೋಪ, ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಕೆ.ಸಿ.ವೀರೇಂದ್ರ (ಪಪ್ಪಿ), ಮೈಸೂರಿನ ಮುಡಾ, ಮಹರ್ಷಿ ವಾಲ್ಮೀಕಿ ಹಗರಣ, ಇತ್ತೀಚಿನ ಸತೀಶ್ ಜಾರಕಿಹೊಳಿ ಪ್ರಕರಣ ಸೇರಿದಂತೆ ಒಟ್ಟು 13 ಪ್ರಭಾವೀ ವ್ಯಕ್ತಿಗಳ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಿಸಿಲ್ಲ ಎಂದು ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ವಿಚಾರಣೆ ತೀವ್ರಗೊಳಿಸಲಿಲ್ಲ

ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪ್ರಶ್ನಿಸುವಲ್ಲಿನ ವಿಳಂಬ, ವೀರೇಂದ್ರ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ತೀವ್ರಗೊಳಿಸಲಿಲ್ಲ, ನಂಜೇಗೌಡ ವಿರುದ್ಧದ ಪ್ರಕರಣವೂ ತೀವ್ರಗೊಂಡಿಲ್ಲ ಎಂಬ ಬಗ್ಗೆಯೂ ಪ್ರಶ್ನಿಸಿದರು ಎನ್ನಲಾಗಿದೆ.

ತನಿಖಾ ಸಂಸ್ಥೆಯ ಕಾರ್ಯವೈಖರಿ ಕುರಿತು ರಾಜ್ಯ ಸರ್ಕಾರದ ಸಚಿವರೊಬ್ಬರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇವೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ದಿಟ್ಟ ಹೆಜ್ಜೆ ಇಡಬೇಕು.

2,000 ಕೋಟಿ ರೂ. ವಹಿವಾಟು

ಸಚಿವ ಜಾರಕಿಹೊಳಿ ತಮ್ಮ ವಹಿವಾಟು 2,000 ಕೋಟಿ ರೂ. ಎಂಬುದಾಗಿ ಹೇಳಿಕೊಂಡಿದ್ದು, ಲೆಕ್ಕ ತೋರಿಸಿರುವುದು 170 ರಿಂದ 180 ಕೋಟಿ ರೂ. ಮಾತ್ರ.

ಸಚಿವರಾದ ನಂತರ ಕಳೆದ ಮೂರೂವರೆ ವರ್ಷಗಳಲ್ಲಿ ಇಲಾಖೆಯಲ್ಲಿ ಗುತ್ತಿಗೆ ನೀಡಿಕೆಯಲ್ಲಿನ ಭ್ರಷ್ಟಾಚಾರ ಆರೋಪ ಕುರಿತು ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಅಕ್ರಮ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿರುವ ದಾಖಲಾತಿ ತೀವ್ರ ಪರಿಶೀಲಿಸಿ, ಫೆಮಾ ಸೇರಿದಂತೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಪಿಎಂಸಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿ.

ವಶಕ್ಕೆ ಪಡೆದು ತನಿಖೆ ನಡೆಸಿ

ಅಗತ್ಯ ಕಂಡುಬಂದರೆ ವಶಕ್ಕೆ ಪಡೆದು ತನಿಖೆ ನಡೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಾನು ಇತ್ತೀಚೆಗೆ ನಿರ್ದೇಶಕ ಹುದ್ದೆಯಿಂದ ನಿವೃತ್ತಿ ಆಗುವ ಮುಂಚೆ, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಪರಿಶೀಲನಾ ಸಭೆ ನಡೆಸಿದ್ದೆ, ಕೇಂದ್ರ ಸರ್ಕಾರ ನನ್ನ ಸೇವೆ ವಿಸ್ತರಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿ ಸಭೆ ನಡೆಸುತ್ತಿದ್ದೇನೆ.

ನಾನು ಸಂಗ್ರಹಿಸಿರುವ ಮತ್ತು ನೀವು ನೀಡಿರುವ ಮಾಹಿತಿಯಂತೆ ಹಲವು ಪ್ರಕರಣಗಳಲ್ಲಿ ಪ್ರಭಾವಿಗಳ ಶಾಮೀಲು ಕಂಡುಬರುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಮುಂದಾಗಬೇಕು ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru meetingED director and senior officersenforcement directorate - EDhigh profile persons in scamkarnataka and goa
0 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

You may also like

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (567)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,060)
  • ರಾಜ್ಯ (2,375)
  • ರಾಷ್ಟ್ರ (2,339)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

    September 15, 2026
  • ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

    September 12, 2026
  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026

KMS Special

  • ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

    September 15, 2026
  • ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

    September 12, 2026
  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ...

September 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ