Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಗರಣಗಳ ತನಿಖೆ: ರಾಜ್ಯಪಾಲರ ಅನುಮತಿಗೆ ಮನವಿ

by admin July 13, 2024
written by admin July 13, 2024 0 comments 2 minutes read
Share 0FacebookTwitterPinterestEmail
321

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಭೂಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಸ್ಪಷ್ಟವಾಗಿದ್ದು ಇವರ ವಿರುದ್ಧ ಪ್ರಕರಣದ ತನಿಖೆ ಹಾಗೂ ನ್ಯಾಯಾಲಯಕ್ಕೆ ಹೋಗಲು ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಮನವಿ ಮಾಡಿದ್ದಾರೆ.

ಆಡಳಿತದಲ್ಲಿದ್ದ ಸಂದರ್ಭದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಮುಡಾದಲ್ಲಿ ಭಾರೀ ಅವ್ಯವಹಾರ ನಡೆಸಿದ್ದಾರೆಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಮುಂದಿಟ್ಟರು.

ನ್ಯಾಯಾಲಯಕ್ಕೆ ಹೋಗಲು ಅನುಮತಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯವಾದಿಯೊಬ್ಬರು ಎಲ್ಲಾ ದಾಖಲೆಗಳನ್ನು ರಾಜ್ಯಪಾಲರ ಮುಂದಿಟ್ಟು ಮುಖ್ಯಮಂತ್ರಿ ವಿರುದ್ಧ ತನಿಖೆ ಮತ್ತು ನ್ಯಾಯಾಲಯಕ್ಕೆ ಹೋಗಲು ರಾಜ್ಯಪಾಲರಿಂದ ಅನುಮೋದನೆ ಪಡೆದುಕೊಳ್ಳಬೇಕು.

ಸರ್ಕಾರ ಮಾಡುವ ತನಿಖೆ, ಇಲ್ಲವೇ ನಾವು ಒತ್ತಾಯ ಮಾಡಿ ನಡೆಸುವ ಮತ್ತೊಂದು ತನಿಖೆಯಿಂದ ಸತ್ಯ ಹೊರಬೀಳುವುದಿಲ್ಲ, ಸಿದ್ದರಾಮಯ್ಯ ಅವರ ಮೂಗಿನಡಿಯೇ ಅವರ ಕುಟುಂಬದವರು ಮಾಡಿರುವ ಹಗರಣದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಿ ತಪ್ಪಿಸ್ಥರಿಗೆ ಶಿಕ್ಷೆ ನೀಡಬೇಕು.

ಕರ್ನಾಟಕದಲ್ಲಿ ಈ ಹಿಂದೆ ಇಂತಹ ಅನೇಕ ಘಟನೆಗಳು ನಡೆದಿವೆ, ಮುಡಾ ಭೂಮಿಯನ್ನೇ ಒತ್ತುವರಿ ಮಾಡಿ, ಅದನ್ನು ತಮ್ಮದೆಂದು ಹೇಳಿಕೊಂಡು ಅತ್ಯಂತ ಬೆಲೆ ಬಾಳುವ 14 ನಿವೇಶನ ಪಡೆದಿರುವುದು ಮಹಾಪರಾಧ.

ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು
3.16 ಎಕರೆ ಭೂಸ್ವಾಧೀನ ವಿವಾದ

ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ 3.16 ಎಕರೆ ಭೂಮಿಗೆ ಸಂಬಂಧಿಸಿದಂತೆ ಎಲ್ಲ ವ್ಯವಹಾರವೂ ನಡೆದಿದೆ.

ಇವರು ಹೇಳಿಕೊಳ್ಳುವ ಭೂಮಿ, ನಿಂಗ ಉರುಫ್ ಜವರ ಎಂಬುವರಿಗೆ ಸೇರಿದ್ದು, ಆ ಭೂಮಿಯನ್ನು ಮುಡಾ ಭೂಸ್ವಾಧೀನ ಮಾಡಿಕೊಂಡು ಮಾಲೀಕರಿಗೆ 3.26 ಲಕ್ಷ ರೂ. ಸಂದಾಯ ಮಾಡಿದೆ.

ಈ ಭೂಮಿಗೆ 1992ರಲ್ಲಿ ಪ್ರಾಥಮಿಕ ನೋಟಿಫಿಕೇಷನ್ ಮಾಡಿ 1998ರಲ್ಲಿ ಅಂತಿಮ ನೋಟಿಫಿಕೇಷನ್ ಆಗಿದೆ. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಈ ಭೂಮಿ ದೇವರಾಜ್ ಎಂಬುವರ ಹೆಸರಿನಲ್ಲಿ ಪೌತಿ ಖಾತೆ ಆಗಿರುತ್ತೆ, ಅವರು ಅದನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡಿರುತ್ತಾರೆ.

2004ರವರೆಗೂ ತಕರಾರು ಇಲ್ಲ

2004ರವರೆಗೂ ಯಾರೂ ಈ ಭೂಮಿಯ ಬಗ್ಗೆ ತಕರಾರು ತೆಗೆದಿರುವುದಿಲ್ಲ, ಇದನ್ನು ಅದೇ ವರ್ಷ ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜ್ ಅವರಿಂದ ಖರೀದಿ ಮಾಡಿರುತ್ತಾರೆ.

ಮಲ್ಲಿಕಾರ್ಜುನಸ್ವಾಮಿ, ಕೃಷಿ ಭೂಮಿಯನ್ನು ವಸತಿ ಸಮುಚ್ಛಯ ನಿರ್ಮಾಣಕ್ಕೆ ಭೂಪರಿವರ್ತನೆಗೆ ಅನುಮತಿ ನೀಡಬೇಕೆಂದು ಡಿಸಿ ಅವರಿಗೆ ಅರ್ಜಿ ಸಲ್ಲಿಸುತ್ತಾರೆ.

ಆ ವೇಳೆಗೆ ಅಲ್ಲಿ ಕೆಲವು ನಿವೇಶನಗಳ ಹಂಚಿಕೆಯಾಗಿ ಪಾರ್ಕ್ ಸಹಾ ಆಗಿರುತ್ತದೆ, ಅಂದಿನ ಜಿಲ್ಲಾಧಿಕಾರಿಗಳಾಗಲಿ, ಅಧಿಕಾರಿಗಳಾಗಲಿ ಸ್ಥಳ ಪರಿಶೀಲನೆ ಮಾಡದೆ ಭೂಪರಿವರ್ತನೆ ಮಾಡಿಕೊಡುತ್ತಾರೆ.

ಅರಿಶಿನ-ಕುಂಕುಮ ಕೊಡುಗೆ

ಭೂಪರಿವರ್ತನೆ ನಂತರ ಮಲ್ಲಿಕಾರ್ಜುನಸ್ವಾಮಿ, ಮುಖ್ಯಮಂತ್ರಿ ಅವರ ಪತ್ನಿಯೂ ಆದ ತಮ್ಮ ಸಹೋದರಿಗೆ ಈ ಭೂಮಿಯನ್ನು ಅರಿಶಿನ-ಕುಂಕುಮ ರೂಪದಲ್ಲಿ ನೀಡುತ್ತಾರೆ.

ಭೂಮಿ ನೋಂದಣೆ ಸಂದರ್ಭದಲ್ಲೂ ಕೃಷಿ ಭೂಮಿಯೆಂದೇ ಸಮೂದಿಸಿರುತ್ತಾರೆ, 2013ರಲ್ಲಿ ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ವೇಳೆ ಚುನಾವಣಾ ಪ್ರಮಾಣಪತ್ರದಲ್ಲಿ ಈ ಭೂಮಿಯ ಉಲ್ಲೇಖ ಮಾಡಿರುವುದಿಲ್ಲ.

ಆ ನಂತರ ಅವರು ಮುಖ್ಯಮಂತ್ರಿ ಆಗುತ್ತಾರೆ, 2014ರಲ್ಲಿ ಅವರ ಕುಟುಂಬದವರು ಮುಡಾಗೆ ಪತ್ರ ಬರೆದು ನಮ್ಮ ಭೂಮಿ ಅತಿಕ್ರಮಣ ಮಾಡಿ ಬಡಾವಣೆ ನಿರ್ಮಿಸಿದ್ದೀರಿ, ನಮಗೆ ಪರ್ಯಾಯ ಜಾಗ ಕೊಡಿ ಎಂದು ಕೇಳುತ್ತಾರೆ.

ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು
ನಿಯಮಬಾಹಿರ ನೋಂದಣಿ

ಈ ಸಂಬಂಧ ಮುಡಾ ಸರಣಿ ಸಭೆಗಳನ್ನು ನಡೆಸಿ, ಅಧಿಕಾರದ ಒತ್ತಡಕ್ಕೆ ಮಣಿದು ನಿಯಮಬಾಹಿರವಾಗಿ 2020ರಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹಕ್ಕೆ ನೋಂದಣಿ ಅಧಿಕಾರಿಗಳನ್ನು ಕರೆಸಿಕೊಂಡು ಅಲ್ಲೇ 14 ನಿವೇಶನಗಳನ್ನು ಅವರ ಕುಟುಂಬಕ್ಕೆ ಮುಡಾ ನೋಂದಣಿ ಮಾಡಿಕೊಡುತ್ತದೆ.

ಪ್ರತಿ ನಿವೇಶನಕ್ಕೆ ಒಂದು ಸಾವಿರ ರೂ.ನಂತೆ ನೋಂದಣಿ ಶುಲ್ಕ ಕಟ್ಟಿಸಿಕೊಂಡು ನಿವೇಶನ ದಾಖಲೆಗಳನ್ನು ನೀಡುತ್ತದೆ, ಮುಡಾ ಬೈಲಾ ಪ್ರಕಾರ ಇವರ ಭೂಮಿಗೆ ಕೇವಲ ಎರಡು ನಿವೇಶನಗಳನ್ನು ಮಾತ್ರ ಅದೇ ಬಡಾವಣೆಯಲ್ಲಿ ನೀಡಬೇಕಿದೆ.

ಆದರೆ, ಇವರು ಅಭಿವೃದ್ಧಿ ಹೊಂದಿದ ಬೇರೆ ಬಡಾವಣೆಗಳಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಾರೆ.

ಸಿದ್ದರಾಮಯ್ಯ ಅವರ ಅಧಿಕಾರ ಕಾಲದಲ್ಲೇ ಈ ಎಲ್ಲಾ ಭ್ರಷ್ಟಾಚಾರ ನಡೆದಿದೆ, ಬೇರಾವುದೇ ತನಿಖೆಯಿಂದಲೂ ಸತ್ಯ ಹೊರಬರುವುದಿಲ್ಲ, ಯಾರಾದರೂ ಕಾನೂನು ತಜ್ಞರು ಅನುಮತಿ ಕೋರಿದರೆ, ರಾಜ್ಯಪಾಲರು ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Share this:

  • WhatsApp
  • Post
  • Tweet
  • Print
  • Email
give permission to file case against siddaramaiahhd kumara swamy request to governormuda scam
Share 0 FacebookTwitterPinterestEmail
admin

previous post
ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು
next post
ವಿಧಾನಸೌಧದ ನವೀಕೃತ ಪಶ್ಚಿಮ ದ್ವಾರ ಮುಖ್ಯಮಂತ್ರಿಗಳಿಂದ ಉದ್ಘಾಟನೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ