Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್‌ಗೆ ಮತ್ತೆ ಸಿಬಿಐ ತನಿಖೆ ಉರುಳು !

by admin July 15, 2024
written by admin July 15, 2024 0 comments 2 minutes read
Share 0FacebookTwitterPinterestEmail
171

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಸಿಬಿಐ ಎಫ್‌ಐಆರ್ ರದ್ದುಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಕರ್ನಾಟಕದ ಮುಖ್ಯಮಂತ್ರಿಯಾಗಲು ಇನ್ನೊಂದು ಮೆಟ್ಟಿಲು ಬಾಕಿ ಇರುವಾಗಲೇ ನ್ಯಾಯಾಲಯದ ಈ ತೀರ್ಪು ಅವರನ್ನು ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸಿದೆ.

ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಇಲ್ಲ

ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡು ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಎಸ್.ಸಿ.ಶರ್ಮಾ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ತಮ್ಮ ವಿರುದ್ಧ ಸಿಬಿಐ ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಶಿವಕುಮಾರ್ ಈ ಮೊದಲು ರಾಜ್ಯ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಶಿವಕುಮಾರ್ ವಾದ ಆಲಿಸಿದ್ದ ನ್ಯಾಯಾಲಯ ಇದನ್ನು ರದ್ದುಪಡಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು.

ಎಷ್ಟು ಸತ್ಯ, ಎಷ್ಟು ಸುಳ್ಳು, ಬಯಲು ಮಾಡುವೆ !
ಹಿಂದಿನ ಸರ್ಕಾರದ ಅನುಮತಿ

ಹೈಕೋರ್ಟ್ ಮೊರೆ ಹೋಗುವುದಕ್ಕೂ ಮುನ್ನ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹಿಂದಿನ ಸರ್ಕಾರದ ಅನುಮತಿಯನ್ನು ಸಿದ್ದರಾಮಯ್ಯ ಸಂಪುಟ ಹಿಂದಕ್ಕೆ ಪಡೆದುಕೊಂಡಿತ್ತು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಹದಾರಿ ಮಾಡಿಕೊಟ್ಟಿತ್ತು, ಇದನ್ನು ಸಿದ್ದರಾಮಯ್ಯ ಸರ್ಕಾರ ನಂತರದ ದಿನಗಳಲ್ಲಿ ಹಿಂದಕ್ಕೆ ಪಡೆದಿತ್ತು.

ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ಹಿಂದಕ್ಕೆ ಪಡೆದಿರುವುದರಿಂದ ತಮ್ಮ ವಿರುದ್ಧದ ಸಿಬಿಐ ತನಿಖೆಯನ್ನು ರದ್ದುಪಡಿಸುವಂತೆ ಶಿವಕುಮಾರ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮುಡಾ-ವಾಲ್ಮೀಕಿ ನಿಗಮ ಹಗರಣಗಳಿಗೆ ಉತ್ತರ ಕೊಡಿ
ಹೆಚ್ಚು ಸಂಪತ್ತು ಗಳಿಕೆ

2013ರಿಂದ 2017ರ ಅವಧಿಯಲ್ಲಿ ಶಿವಕುಮಾರ್ ತಮ್ಮ ಆದಾಯ ಮೂಲಕ್ಕಿಂತ ಹೆಚ್ಚು ಸಂಪತ್ತು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್‌ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಶಿವಕುಮಾರ್ ಮನವಿ ಸಲ್ಲಿಸಿದ್ದರು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಅವರು, ಚಂದ್ರಬಾಬು ನಾಯ್ಡು ಪ್ರಕರಣವನ್ನು ಪೀಠದ ಮುಂದಿಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದರು.

ಮನವಿಗೆ ಪೀಠ ನಿರಾಸಕ್ತಿ

ಮುಂದುವರೆದು ಮುಕುಲ್ ರೋಹಟಗಿ ಅವರು, ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಬೇಕೆಂಬ ಮನವಿಗೆ ಪೀಠ ನಿರಾಸಕ್ತಿ ವ್ಯಕ್ತಪಡಿಸಿತು.

ಈ ಹಿಂದಿನ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರದಲ್ಲಿ ಶಿವಕುಮಾರ್ ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯ ಗಳಿಸಿದ್ದಾರೆಂಬುದು ಪ್ರಮುಖ ಆರೋಪ ಇದಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2016ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸಿದ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದರು.

ಈ ಹಂತದಲ್ಲಿ ವಾದ ಮಂಡಿಸಿದ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾದ ಪ್ರಕರಣವನ್ನು ಹಿಂಪಡೆಯಲಾಗದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿತು. ಇದೇ ವೇಳೆ ಸುಪ್ರೀಂಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು.

ರಾಜಧಾನಿಗೆ ವೈಟ್ ಟಾಪಿಂಗ್ ಶಾಶ್ವತ ರಸ್ತೆ ನಿರ್ಮಾಣ

Share this:

  • WhatsApp
  • Post
  • Tweet
  • Print
  • Email
decision against dcm shivakumarpetition dismissedsupreme court
Share 0 FacebookTwitterPinterestEmail
admin

previous post
ಎಷ್ಟು ಸತ್ಯ, ಎಷ್ಟು ಸುಳ್ಳು, ಬಯಲು ಮಾಡುವೆ !
next post
ವಾಹನಕ್ಕೆ ಜಾಗ ಇದ್ದರೆ ಮಾತ್ರ ಮನೆ ಕಟ್ಟಲು ಅನುಮತಿ

You may also like

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025

Categories

  • Special Story (181)
  • ಅಂಕಣ (102)
  • ಉದ್ಯೋಗ (239)
  • ದಿನ ಭವಿಷ್ಯ (110)
  • ರಾಜಕೀಯ (1,586)
  • ರಾಜ್ಯ (1,875)
  • ರಾಷ್ಟ್ರ (1,847)
  • ವಿಶ್ಲೇಷಣೆ (184)
  • ಶಿಕ್ಷಣ (319)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

    May 22, 2025
  • ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

    May 22, 2025

KMS Special

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ