Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಎಸ್‌ವೈ, ಬೊಮ್ಮಾಯಿ ಆಡಳಿತದ ಹಗರಣಗಳ ತನಿಖೆ

by admin July 19, 2024
written by admin July 19, 2024 0 comments 2 minutes read
0FacebookTwitterPinterestEmail
221

ಬೆಂಗಳೂರು:ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಆಡಳಿತದ ಸಂದರ್ಭದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ತನಿಖೆಗೆ ಒಪ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತು ಮುಂದುವರೆದು ಉತ್ತರ ನೀಡಿದ ಮುಖ್ಯಮಂತ್ರಿ ಅವರು, ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಗರಣಗಳ ಪಟ್ಟಿಯನ್ನೇ ಸದನದ ಮುಂದಿಟ್ಟು ಇದರಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಅಷ್ಟೇ ಅಲ್ಲದೆ, ಹಲವು ಸಚಿವರುಗಳು ಭಾಗಿಯಾಗಿದ್ದಾರೆ ಎಂದರು.

ಅಸಂಖ್ಯಾತ ಹಗರಣಗಳು

ಇವರಿಬ್ಬರ ಆಡಳಿತದಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ, ಅದರಲ್ಲಿ ಕೆಲವನ್ನು ಮಾತ್ರ ನಾನು ಇಲ್ಲಿ ಹೇಳಬಯಸುತ್ತೇನೆ ಮತ್ತು ತನಿಖೆಗೂ ಒಪ್ಪಿಸುತ್ತೇನೆ ಎಂದು ಪಟ್ಟಿಯನ್ನೇ ಸದನದ ಮುಂದಿಟ್ಟರು.

ಯಡಿಯೂರಪ್ಪ, ಬೊಮ್ಮಾಯಿ ಆಡಳಿತವಿದ್ದಾಗ ಎಪಿಎಂಸಿಯಲ್ಲಿ 47.16 ಕೋಟಿ ರೂ., ಬೋವಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂ.ಗೂ ಹೆಚ್ಚು, ದೇವರಾಜ ಅರಸು ಟ್ರಕ್ ಟರ್ಮಿನಲ್ 50 ಕೋಟಿ ರೂ.ಗೂ ಹೆಚ್ಚು, ಗಂಗಾಕಲ್ಯಾಣ ಯೋಜನೆಯಡಿ 430 ಕೋಟಿ ರೂ., ಪ್ರವಾಸೋದ್ಯಮ ಇಲಾಖೆಯಲ್ಲಿ 247 ಕೋಟಿ ರೂ., ಕಿಯೊನಿಕ್ಸ್ ಹಗರಣದಲ್ಲಿ 500 ಕೋಟಿ ರೂ., ಕೋವಿಡ್ ಹಗರಣ.

ಪಿಎಸ್‌ಐ ಮತ್ತು ಇತರ ನೇಮಕಾತಿ, ಪರುಶುರಾಮ್ ಥೀಮ್ ಪಾರ್ಕ್, ಬಿಟ್ ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆ ನಡೆಸಲಾಗುವುದು.

ಆದಾಯ ಮೀರಿದ ಆಸ್ತಿ

ಯಡಿಯೂರಪ್ಪ ಆಪ್ತ ಉಮೇಶ್ ಹಾಗೂ ಇತರರ ಮನೆಯಲ್ಲಿ 750 ಕೋಟಿ ರೂ.ಗೂ ಹೆಚ್ಚು ಹಣ ದೊರೆತಿದೆ, ಅಲ್ಲದೆ, ಯಡಿಯೂರಪ್ಪ ಮತ್ತು ವಿಜಯೇಂದ್ರ ಕುಟುಂಬದ ಆದಾಯ ಮೀರಿದ ಆಸ್ತಿ ನೂರಾರು ಕೋಟಿ ರೂ.

ಕೆಕೆಆರ್‌ಡಿಬಿ, ಕಂದಾಯ, ಕೃಷಿ, ಅಂಗನವಾಡಿ, ಗಣಿ, ಬಿಡಿಎ ಮತ್ತು ಕೆಐಎಡಿಬಿ ಡಿ-ನೋಟಿಫಿಕೇಷನ್ ಹಗರಣಗಳು ಇವರ ಆಡಳಿತದಲ್ಲೇ ನಡೆದಿರುವುದು.

ಇವರ ಆಡಳಿತದ ಸಚಿವರಾಗಿದ್ದ ವಿ.ಸುನೀಲ್‌ಕುಮಾರ್, ಎಚ್.ನಾಗೇಶ್, ಆರ್. ಅಶೋಕ್, ಪಿ.ಮುನಿರತ್ನ, ಬಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೆ.ಸುಧಾಕರ್, ಶ್ರೀರಾಮುಲು, ಡಾ.ಅಶ್ವತ್ಥನಾರಾಯಣ, ಸಿ.ಪಿ.ಯೋಗೇಶ್ವರ್, ಕೋಟ ಶ್ರೀನಿವಾಸ ಪೂಜಾರಿ ಈ ಹಗರಣದಲ್ಲಿ ಪ್ರಮುಖ ಪಾಲುದಾರರು ಮತ್ತು ಇವರ ಮೂಗಿನಡಿಯಲ್ಲಿಯೇ ಹಗರಣಗಳು ನಡೆದಿವೆ ಎಂದು ಬಿಡಿಸಿಟ್ಟರು.

ಕಾಂಗ್ರೆಸ್ ಸರ್ಕಾರದ ಪಾರದರ್ಶಕ ಭ್ರಷ್ಟ ಆಡಳಿತ
ತೀವ್ರ ಪ್ರತಿಭಟನೆ

ಧರಣಿ ನಿರತ ಬಿಜೆಪಿ ಅವರಿಂದ ತೀವ್ರ ಪ್ರತಿಭಟನೆ ನಡುವೆಯೂ ಸಿದ್ಧಪಡಿಸಿ ಹೇಳಿಕೆಯನ್ನು ಓದಿದ್ದಲ್ಲದೆ, ಇವೆಲ್ಲವೂ ದಾಖಲೆಗೆ ಸೇರಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡರು.

ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ, ತಿಂದವರು, ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರವಲ್ಲ ಅಥವಾ ಮೋದಿ ಸರ್ಕಾರವಲ್ಲ, ಯಾರೇ ತಪ್ಪೆಸಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ.

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಸುತ್ತಿದ್ದು, ಒಂದಷ್ಟು ಹಣವನ್ನು ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಿದ್ದಾರೆ, ನಂತರ ನಾವು ಅವರನ್ನು ಅಮಾನತು ಮಾಡಿದ್ದೇವೆ.

ಆದರೆ, ಬಿಜೆಪಿ ಆಡಳಿತದಲ್ಲಿ ಇಂತಹ ಕಳ್ಳರನ್ನು ಮಟ್ಟ ಹಾಕಿದ್ದರೆ ಅಥವಾ ಮೋದಿ ಸರ್ಕಾರ ಖದೀಮ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದರೆ ಇಂದು ದೇಶದಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ.

ಅನೇಕ ಬ್ಯಾಂಕ್ ಫ್ರಾಡ್‌ಗಳು

ರಾಜ್ಯದಲ್ಲಿ ಕಳೆದ ಐದಾರು ವರ್ಷಗಳಲ್ಲಿ ಅನೇಕ ಬ್ಯಾಂಕ್‌ಗಳಲ್ಲಿ ಫ್ರಾಡ್‌ಗಳು ನಡೆದಿವೆ, ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಕಠಿಣ ನಿಲುವುಗಳನ್ನೇ ತೆಗೆದುಕೊಂಡಿಲ್ಲ ಎಂದು ದೂರಿದರು.

ವಾಲ್ಮೀಕಿ ಅಭಿವೃದ್ಧಿ ನಿಮಗದಲ್ಲಿ ಹಿಂದೆಯೂ ಹಗರಣಗಳಾಗಿವೆ, ಅವುಗಳನ್ನೂ ನಾವು ಹೊರ ತರುತ್ತೇವೆ.

ಬಿಜೆಪಿ ಆಡಳಿತದಲ್ಲಿ ಇದ್ದಾಗ ಎಷ್ಟು ಹಣ ವಸೂಲಿ ಮಾಡಿದ್ದೀರಿ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಅವರು, ಖದೀಮರನ್ನು ಜೈಲಿಗೆ ಹಾಕದೆ, ಎಲ್ಲರನ್ನೂ ರಕ್ಷಿಸಿದ್ದರಿಂದಲೇ ಈ ಪ್ರಕರಣಗಳು ಮರುಕಳಿಸುತ್ತಿವೆ.

ಬಿಜೆಪಿ ಆಡಳಿತದಲ್ಲಿ ನಿಗಮಗಳ 300 ಕೋಟಿ ರೂ. ಅಕ್ರಮ
ದೊಡ್ಡ ಪ್ರಮಾಣದ ವ್ಯವಹಾರಗಳು

ಚುನಾವಣಾ ಸಂದರ್ಭದಲ್ಲಿ ಇಷ್ಟು ದೊಡ್ಡ ಪ್ರಮಾಣದ ವ್ಯವಹಾರಗಳು ನಡೆಯುವಾಗ ಆದಾಯ ತೆರಿಗೆ ಇಲಾಖೆಯವರು, ಬ್ಯಾಂಕಿನವರನ್ನು ಏಕೆ ಪ್ರಶ್ನೆ ಮಾಡಲಿಲ್ಲ, ಆ ಸಿಬ್ಬಂದಿಗಳು ನಿಗಮದ ಅಧಿಕಾರಿಗಳ ಜೊತೆ ಕೈಜೋಡಿಸಿ ಈ ಅವ್ಯವಹಾರ ನಡೆಸಿದ್ದಾರೆ.

ಯಾವುದೇ ಸಂದರ್ಭದಲ್ಲೂ ಕಳ್ಳರು ಏಕಾಏಕಿ ಹುಟ್ಟುವುದಿಲ್ಲ, ಅವರು ನುರಿತರು ಹಾಗೂ ಪರಿಣಿತರಾಗಬೇಕಾದರೆ ಅವರಿಗೆ ಹಿಂದೆ ಬಹಳ ಇಮ್ಯೂನಿಟಿ ದೊರೆತಿರುತ್ತದೆ, ಹಾಗಾಗಿ ಕಳ್ಳರನ್ನು ಬೆಳೆಸಿದವರು ನೀವೇ.

ಈ ವಿಷಯದಲ್ಲಿ ಆರೋಪಿಗಳಾಗಿರುವ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ.ಪದ್ಮನಾಭ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಲೂಟಿ ಮಾಡಿದ್ದರು, ಆಗ ನೀವು ಅವರನ್ನು ರಕ್ಷಣೆ ಮಾಡಿದ್ದಿರಿ, ಇಂದು ದೊಡ್ಡ ಪ್ರಮಾಣದಲ್ಲಿ ಲೂಟಿ ಮಾಡಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bsy - bommai rule scamcm siddaramaiahInvestigationstatement in assembly
0 FacebookTwitterPinterestEmail
admin

previous post
ಬಿಜೆಪಿ ಆಡಳಿತದಲ್ಲಿ ನಿಗಮಗಳ 300 ಕೋಟಿ ರೂ. ಅಕ್ರಮ
next post
ಶಾಲಾ ಮಕ್ಕಳಿಗೆ ವಾರ ಪೂರ್ತಿ ಪೌಷ್ಠಿಕ ಆಹಾರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ