Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಣೆ

by KM Shivaraju August 4, 2024
written by KM Shivaraju August 4, 2024 0 comments 2 minutes read
0FacebookTwitterPinterestEmail
181
ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ ಎಂದರು.

ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ  ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಹೇಳಿದರು.

ಅವಕಾಶ ಪತ್ರ ಪಡೆದ ಕ್ರಿಡಾ ಸಾಧಕರ ವಿವರ

ಗಿರೀಶ್‌ ಎಚ್.ಎನ್‌ (ಪ್ಯಾರಾ ಅಥ್ಲೆಟಿಕ್ಸ್)‌, ದಿವ್ಯಾ ಟಿ.ಎಸ್.‌ (ಶೂಟಿಂಗ್)‌, ಉಷಾರಾಣಿ ಎನ್.‌ (ಕಬಡ್ಡಿ), ಸುಷ್ಮಿತಾ ಪವಾರ್‌ (ಕಬಡ್ಡಿ), ನಿಕ್ಕಿನ್‌ ತಿಮ್ಮಯ್ಯ (ಹಾಕಿ), ಎಸ್.ವಿ.ಸುನೀಲ್‌ (ಹಾಕಿ), ಕಿಶನ್‌ ಗಂಗೊಳ್ಳಿ (ಚೆಸ್)‌, ರಾಘವೇಂದ್ರ ರತ್ನಾಕರ ಅಣ್ವೇಕರ್‌ (ಈಜು), ರಾಧಾ ವಿ. (ಪ್ಯಾರಾ ಅಥ್ಲೆಟಿಕ್ಸ್)‌, ಶರತ್‌ ಎಂ.ಎಸ್‌ (ಪ್ಯಾರಾ ಅಥ್ಲೆಟಿಕ್ಸ್)‌, ಗುರುರಾಜ (ವೇಯ್ಟ್‌ ಲಿಫ್ಟಿಂಗ್)‌ ಮತ್ತು ಮಲಪ್ರಭಾ ಯಲ್ಲಪ್ಪ ಜಾಧವ (ಕುರಾಶ್)‌ ಇವರಿಗೆ ನೇಮಕಾತಿ ಆಫರ್‌ ಲೆಟರ್‌ ನೀಡಿದರು.

ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterDistributionGovernmentrecruitment letterSiddaramaiahsports activitiessportspersonssupport
0 FacebookTwitterPinterestEmail
KM Shivaraju

previous post
ರಾಜ್ಯದಿಂದ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ವಿಜಯೇಂದ್ರ
next post
ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ