Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ರಾಹುಲ್ ಖರ್ಗೆಗೆ ನಿಯಮ ಪ್ರಕಾರ ಸಿಎ ನಿವೇಶನ

by admin August 26, 2024
written by admin August 26, 2024 0 comments 1 minutes read
0FacebookTwitterPinterestEmail
259

ಸಚಿವ ಪಾಟೀಲ್ ಅಧ್ಯಕ್ಷತೆ ಸಭೆಯಲ್ಲಿ ಜಾಗ ಮಂಜೂರು

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಡಿ 14 ಬಿಡಿ ನಿವೇಶನ ಪಡೆದ ಪ್ರಕರಣದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಎಂ. ಖರ್ಗೆ ಅವರಿಗೆ ಕೈಗಾರಿಕಾ ಪ್ರದೇಶದಲ್ಲಿ ನಾಗರಿಕ ಸೌಲಭ್ಯಗಳಿಗೆ ಮೀಸಲಿಟ್ಟ ಸ್ಥಳದಲ್ಲಿ ಐದು ಎಕರೆ ಜಮೀನನ್ನು ಸರ್ಕಾರ ನೀಡಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಹಂಚಿಕೆಯಾಗಿರುವ ವಿಸ್ತೀರ್ಣದಲ್ಲಿ ರಾಹುಲ್ ಖರ್ಗೆ ಟ್ರಸ್ಟಿ ಆಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ ಹೆಸರಿನಲ್ಲಿ ಈ ಜಮೀನು ಪಡೆದಿದ್ದಾರೆ.

ಪರಿಶಿಷ್ಟ ಜಾತಿ ಕೋಟದಡಿ ಜಾಗ

ಪರಿಶಿಷ್ಟ ಜಾತಿ ಕೋಟದಡಿಯಲ್ಲೇ ಐದು ಎಕರೆ ವಿಸ್ತೀರ್ಣ ಜಾಗವನ್ನು ಸರ್ಕಾರ ಮಂಜೂರು ಮಾಡಿದೆ.

ಈ ಟ್ರಸ್ಟ್ ಸಂಶೋಧನೆ ಮತ್ತು ಅಭಿವೃದ್ಧಿ ತರಬೇತಿ ಸಂಸ್ಥೆಗಳ ಸ್ಥಾಪನೆಗಾಗಿ ಜಾಗ ಮಂಜೂರು ಮಾಡುವಂತೆ ಕೋರಿತ್ತು.

ಅವರ ಅರ್ಜಿ ಮೇರೆಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸ್ಥಳ ಮಂಜೂರು ಮಾಡಲಾಗಿದೆ.

ನಟ ದರ್ಶನ್‌ಗೆ ರಾಜಾತಿಥ್ಯ : ಅಧಿಕಾರಿಗಳ ಸಸ್ಪೆಂಡ್
ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿಎ ನಿವೇಶನ

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಎಂ.ಬಿ.ಪಾಟೀಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿಎ ನಿವೇಶನವನ್ನು ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ನೀಡಿರುವ ಜಾಗದಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ತಿಳಿಸಿದ್ದು, ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ.

ರಾಹುಲ್ ಖರ್ಗೆ ಐಐಟಿ ಪದವೀಧರರಾಗಿದ್ದು, ಅವರ ಕುಟುಂಬ ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ, ಕೆಐಎಡಿಬಿ ನಿಯಮಗಳ ಪ್ರಕಾರ ಸಿಎ ನಿವೇಶನಗಳಲ್ಲಿ ಆರ್ ಅಂಡ್ ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರ್ಕಾರಿ ಕಚೇರಿಗಳು, ಬ್ಯಾಂಕ್, ಆಸ್ಪತ್ರೆ, ಹೋಟೆಲ್, ಪೆಟ್ರೋಲ್‌ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ.

ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು, ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಶಿಫಾರಸಿನ ನಂತರವೇ ನಿವೇಶನಗಳ ಹಂಚಿಕೆಯಾಗುತ್ತದೆ.

ಬಿಜೆಪಿ ಆಡಳಿತದಲ್ಲಿ ಚಾಣಕ್ಯ ವಿವಿಗೆ ಜಾಗ

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ನೀಡಲಾಗಿದೆ, ಇದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ, ಲೆಹರ್ ಸಿಂಗ್ ಅವರು ಈ ಬಗ್ಗೆ ಮಾತನಾಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಈ ಮೊದಲು ಕೆಐಎಡಿಬಿ ಮಂಡಳಿಯೇ ಸಿಎ ನಿವೇಶನಗಳ ಹಂಚಿಕೆ ಮಾಡುತ್ತಿತ್ತು, ತಾವು ಅಧಿಕಾರ ವಹಿಸಿಕೊಂಡ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡುವ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲಾಗಿದೆ, ಮೊದಲ ಬಾರಿಗೆ ಸಿಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ.24.10 ಮೀಸಲಾತಿ ಕಲ್ಪಿಸಲಾಗಿದೆ, ಲೆಹರ್ ಸಿಂಗ್ ಈ ಸತ್ಯ ಅರಿತು ಮಾತನಾಡುವುದು ಒಳ್ಳೆಯದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp ruleca site to rahul khargeminister mb patilsite to chanakya vv
0 FacebookTwitterPinterestEmail
admin

previous post
ನಟ ದರ್ಶನ್‌ಗೆ ರಾಜಾತಿಥ್ಯ : ಅಧಿಕಾರಿಗಳ ಸಸ್ಪೆಂಡ್
next post
ಆಸ್ತಿ ನೋಂದಣಿಗೆ ಇನ್ನು ಮುಂದೆ ಆಧಾರ್ ಕಡ್ಡಾಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ