Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

by KM Shivaraju August 29, 2024
written by KM Shivaraju August 29, 2024 0 comments 2 minutes read
0FacebookTwitterPinterestEmail
598
ಶ್ರೀನಗರ – ಬಾರಮುಲ್ಲಾ ರೈಲಿನಲ್ಲಿ ಪ್ರಯಾಣ; ಗೌಡರೇ ಮಂಜೂರು ಮಾಡಿದ್ದ ರೈಲ್ವೆ ಯೋಜನೆ

ನವದೆಹಲಿ/ಶ್ರೀನಗರ : ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.

ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದು, ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ

ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ, ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಗೌಡರು, ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ ಎಂದರು.

ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಮತ್ತೆ ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು.

ರೈಲು ಪ್ರಯಾಣದ ಬಗ್ಗೆ ಸಂತಸ
ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಗೌಡರು, ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು.

1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೇಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೈಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಅವರು ಭಾವುಕರಾದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ರೇಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ರೇಲ್ವೆ ಮಾರ್ಗದ ಬಗ್ಗೆ ಹಾಗೂ ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು.

ಬೆಳಿಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹಿಡಿದ ಮಾಜಿ ಪ್ರಧಾನಿಗಳು, ಮಧ್ಯಾಹ್ನ 12:30 ಗಂಟೆಗೆ ಬಾರಮುಲ್ಲಾ ತಲುಪಿದರು.

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು 200 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ 50,000 ರೂ.ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಮಾಜಿ ಪ್ರಧಾನಿಗಳು ಸುದ್ದಿಗಾರರ ಜತೆ ಮಾತಾಡುತ್ತಾ ಹೇಳಿದರು.

ನಾಳೆ ದಾಲ್ ಸರೋವರ, ಶಂಕರರ ದೇಗುಲಕ್ಕೆ ಭೇಟಿ

ಶುಕ್ರವಾರವೂ ಮಾಜಿ ಪ್ರಧಾನಿಗಳು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
devegowdaFormer Prime MinisterHdlast part of IndiaRailway projectSanctionedSrinagar - BaramullatrainTravelvisited
0 FacebookTwitterPinterestEmail
KM Shivaraju

previous post
ಕುತೂಹಲ ಕೆರಳಿಸಿರುವ ಪ್ರಾಸಿಕ್ಯೂಷನ್ ಅನುಮತಿ ಕುರಿತ ತೀರ್ಪು
next post
ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ 5 ಎಕರೆ ಸಿ.ಎ.ನಿವೇಶನ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ