Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ : ತಪ್ಪಿತಸ್ಥರಿಗೆ ಶಿಕ್ಷೆ ಖಚಿತ

by KM Shivaraju September 11, 2024
written by KM Shivaraju September 11, 2024 0 comments 2 minutes read
0FacebookTwitterPinterestEmail
201

ಎಲ್ಲರೂ ಮುಖ್ಯಮಂತ್ರಿಯಾಗಿ  ಸಿದ್ದರಾಮಯ್ಯ ಮುಂದುವರೆಯಲಿ ಎನ್ನುತ್ತಿದ್ದಾರೆ

ಬೆಂಗಳೂರು :  ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವುದರಲ್ಲಿ ಯಾವುದೇ ಸಂಶಯ ಬೇಡ ಎಂದಿರುವ ಸಿದ್ದರಾಮಯ್ಯ, ಬಿಜೆಪಿ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರದ ಹಗರಣಗಳಿಗೆ ಗತಿ ಕಾಣಿಸುವುದಾಗಿ ಘೋಷಿಸಿದ್ದಾರೆ.

ಬಿಜೆಪಿ ಮುಖಂಡರ ರೀತಿ ನಾವು ದ್ವೇಷ ರಾಜಕಾರಣ ಮಾಡುವುದಿಲ್ಲ. ಆದರೆ, ಅವರ
ಆಡಳಿತಾವಧಿಯ 21 ಪ್ರಮುಖ ಹಗರಣಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ಖಚಿತ.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಯಾರು ಕುರ್ಚಿಗೆ ಆಸೆ ಪಡುತ್ತಿಲ್ಲ. ಕೆಲವು ಸಚಿವರು ಸೇರಿದಂತೆ ಪಕ್ಷದ ಮುಖಂಡರು ಸಿದ್ದರಾಮಯ್ಯ ಅವರೇ ಮುಂದುವರೆಯಬೇಕು ಎಂದು ಹೇಳುತ್ತಿದ್ದಾರೆ. ಒಂದು ವೇಳೆ ಕುರ್ಚಿ ಖಾಲಿಯಾದರೆ ನಾವು ಅದಕ್ಕೆ ಅರ್ಹರಿದ್ದೇವೆ ಎಂದು ಹೇಳುತ್ತಿದ್ದಾರೆ ಅಷ್ಟೇ ಎಂದರು.

ಅದರಲ್ಲಿ ಏನೂ ತಪ್ಪಿಲ್ಲ. ಎಲ್ಲರಲ್ಲೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂಬ ಇಚ್ಛೆ ಇರುವಾಗ ಆಡಳಿತದಲ್ಲಿ ನಾನು ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಅರಣ್ಯ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ 40 ತಿಂಗಳಲ್ಲಿ ಅಂದಿನ ಮುಖ್ಯಮಂತ್ರಿ ಸೇರಿದಂತೆ ಸಚಿವರು ಭಾರೀ ಭ್ರಷ್ಟಾಚಾರ ನಡೆಸಿದ್ದಾರೆ.

ಸಿಇಟಿ, ನೀಟ್ ಆಯ್ಕೆ ಬದಲಾವಣೆಗೆ ಮತ್ತಷ್ಟು ಅವಕಾಶ

ಅವರು ಮಾಡಿರುವ ಭ್ರಷ್ಟಾಚಾರದ ಪಟ್ಟಿಯನ್ನು ಸದನದಲ್ಲೇ ಬಿಡುಗಡೆ ಮಾಡಿದ್ದೇನೆ. ಅವುಗಳ ಬಗ್ಗೆ ಒಂದಲ್ಲ ಒಂದು ತನಿಖೆ ಆರಂಭಗೊಂಡಿದೆ.
ತನಿಖೆಯ ಪ್ರಗತಿ ಮತ್ತು ಅದಕ್ಕೆ ವೇಗ ಕೊಡುವ ಉದ್ದೇಶದಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವರ ಸಮಿತಿ ರಚಿಸಿದ್ದೇನೆ.

ಈ ಎಲ್ಲಾ ಹಗರಣಗಳ ತನಿಖೆಗೆ ತ್ವರಿತ ಚಾಲನೆ ನೀಡುವ ಉದ್ದೇಶದಿಂದಲೇ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಗಡುವು ನೀಡಿದ್ದೇನೆ.

ಪಿಎಸ್ಐ ಹಗರಣ, 40% ಕಮಿಷನ್, ಕೋವಿಡ್-19, ಬಿಟ್ ಕಾಯಿನ್ ಹಗರಣಗಳ ಬಗ್ಗೆ ಎಸ್ಐಟಿ ಹಾಗೂ ಕೆಲವು ಆಯೋಗಗಳಿಂದ ತನಿಖೆ ನಡೆಯುತ್ತಿದೆ.
ಇವು ಸೇರಿದಂತೆ ಉಳಿದ ಹಗರಣಗಳ ಬಗ್ಗೆಯೂ ಸಮಿತಿ ಕೂಲಂಕುಶವಾಗಿ ಸಮಿತಿ ಪರಿಶೀಲನೆ ನಡೆಸಿ ಅವುಗಳಿಗೆ ಚುರುಕುಗೊಳಿಸಲು ಕ್ರಮ ಕೈಗೊಳ್ಳುವುದು. ತ್ವರಿತವಾಗಿ ತನಿಖೆ ಮುಗಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುತ್ತಾರೆ ಎಂದು ಅವರು ಹೇಳಿದರು.

ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆಯೇ ಹೊರತು ಬಿಜೆಪಿ ವಿರುದ್ಧ ದ್ವೇಷ ರಾಜಕಾರಣ ಮಾಡಲು ಅಲ್ಲ. ಆದರೆ, ಅವರು ನನ್ನ ಬಗ್ಗೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಮಾತ್ರ ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಲ್ಕು ಪಥಗಳ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ

ಕರ್ನಾಟಕದಲ್ಲಷ್ಟೇ ಅಲ್ಲ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿದ್ವಷ ರಾಜಕಾರಣವನ್ನೇ ಮಾಡಿಕೊಂಡು ಬಂದಿದೆ. ದೆಹಲಿ,ತೆಲಂಗಾಣ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ತಮಗಾಗದವರ ವಿರುದ್ಧ ಕೇಂದ್ರ ತನಿಖಾ ತಂಡಗಳ ಮೂಲಕ ಹೆದುರಿಸಿ ಬೆದರಿಸುವ ಕೆಲಸ ಮಾಡಲಾಗುತ್ತಿದೆ.

ನಾವು ಇಂತಹ ಕೆಲಸ ಮಾಡಿಲ್ಲ. ಅವರು ಮಾಡಿರುವ ಭ್ರಷ್ಟಾಚಾರಕ್ಕೆ ಶಿಕ್ಷೆ ಕೊಡಿಸಬಾರದೇ ಎಂದು ಮಾಧ್ಯಮದವರನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಆ ಕಾರಣಕ್ಕಾಗಿಯೇ ತನಿಖೆಗೆ ವಹಿಸಲಾಗಿದೆ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
21 scamsannouncedBJP administrationChief Ministercorruption scandalsInvestigationPunishments Everyone wantsSiddaramaiahSiddaramaiah to continue
0 FacebookTwitterPinterestEmail
KM Shivaraju

previous post
ಸಿಇಟಿ, ನೀಟ್ ಆಯ್ಕೆ ಬದಲಾವಣೆಗೆ ಮತ್ತಷ್ಟು ಅವಕಾಶ
next post
ಅವತ್ತು ದಿಲ್ಲಿ ಗದ್ದುಗೆಯತ್ತ ದೇವೇಗೌಡರ ನಡಿಗೆ ಆರಂಭವಾಯಿತು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ