Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ

by admin September 19, 2024
written by admin September 19, 2024 0 comments 2 minutes read
0FacebookTwitterPinterestEmail
400

ಬೆಂಗಳೂರು:ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದಿಲ್ಲಿ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‌ಐಆರ್‌ಗಳು ದಾಖಲಾಗುತ್ತಿವೆ, ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ, ಕೇಂದ್ರ ಸಚಿವರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದರು.

ಸಂಸದ ತೇಜಸ್ವಿ ಸೂರ್ಯ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ, ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಧ್ವನಿ ಅಡಗಿಸುವುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಡುತ್ತಿದೆ.

ದೂರನ್ನು ತೆಗೆದುಕೊಂಡಿಲ್ಲ

ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂಬುದಾಗಿ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿಕೆ ಕೊಟ್ಟಿದ್ದರು, ನಮ್ಮ ಮಂಗಳೂರಿನ ಜನರು, ಕಾರ್ಯಕರ್ತರು ದಿನವೂ ಪೊಲೀಸ್ ಸ್ಟೇಶನ್‌ಗೆ ಹೋಗುವಂತಾಗಿದೆ, ದೂರುಗಳನ್ನೂ ನೀಡುತ್ತಿದ್ದಾರೆ, ಆದರೆ, ಈವರೆಗೂ ದೂರನ್ನು ತೆಗೆದುಕೊಂಡಿಲ್ಲ, ಘಟನೆಗಳಿಗೆ ಕಾರಣರಾದವರ ಮೇಲೆ ಏಕೆ ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಕರ್ನಾಟಕವನ್ನು ಏನು ಮಾಡಲು ಹೊರಟಿದ್ದೀರಿ, ಘಟನೆ, ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದ ನಾಗಮಂಗಲದಲ್ಲಿ ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನಿನಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ನಾಗಮಂಗಲ ಉತ್ಸವದಲ್ಲಿ ಗಣಪತಿ ಮೂರ್ತಿಗೆ ದುಷ್ಕರ್ಮಿಗಳು ಚಪ್ಪಲಿ, ಕಲ್ಲುಗಳನ್ನು ಎಸೆಯಲು ಅವಕಾಶ ಕೊಟ್ಟಿದ್ದೀರಿ, ಮೂರ್ತಿ ಭಗ್ನ ಆಯಿತು, ಮೂರ್ತಿಯನ್ನು ಅಲ್ಲೇ ಬಿಟ್ಟು ಓಡಿದರು, 25 ಅಂಗಡಿಗಳನ್ನು ಸುಟ್ಟುವರು ಯಾರು, ನಾಗಮಂಗಲದ ಜನರಿಗೆ ಆ ಧೈರ್ಯ ಹೇಗೆ ಬಂತು ಎಂದರು.

ಕರ್ತವ್ಯ ಪ್ರಜ್ಞೆ ಇಲ್ಲದ ಸಚಿವ ಡಾ.ಪರಮೇಶ್ವರ್
ಕೇರಳದಿಂದ ಬಂದ ದುಷ್ಕರ್ಮಿಗಳು

ಲಭ್ಯ ವರದಿ ಪ್ರಕಾರ ದುಷ್ಕರ್ಮಿಗಳು ಕೇರಳದಿಂದ ಬಂದಿದ್ದಾರೆ ಎನ್ನಲಾಗುತ್ತಿದೆ, ಅವರು ಯಾರು, ಹೇಗೆ ಮತ್ತು ಯಾಕೆ ಬಂದರು, ನಾಗಮಂಗಲದ ಕೇಸನ್ನೂ ಸರ್ಕಾರ ಮುಚ್ಚಿ ಹಾಕಿದೆ, ಪೊಲೀಸರು ಇದೊಂದು ಘಟನೆಯೇ ಅಲ್ಲ ಎಂಬಂತೆ ಆ ಕೇಸ್ ಕ್ಲೋಸ್ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇದೊಂದು ಚಿಕ್ಕ ಘಟನೆ ಎನ್ನುತ್ತಾರೆ, ಯಾವುದು ಚಿಕ್ಕ ಘಟನೆ ಪರಮೇಶ್ವರ್ ಅವರೇ, 25 ಅಂಗಡಿ ಸುಟ್ಟಿದ್ದು ಚಿಕ್ಕ ಘಟನೆಯೇ, ಪಕ್ಕದ ರಾಜ್ಯದಿಂದ ಬಂದು ಗಲಭೆ ಮಾಡಿದ್ದು ಚಿಕ್ಕ ಘಟನೆಯೇ ಎಂದು ಪ್ರಶ್ನಿಸಿದರು.

ಬೆಳಗಾವಿಯಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ 3 ಜನ ಹಿಂದೂ ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ, ಕೋಲಾರದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಪ್ಯಾಲೆಸ್ಟೀನ್ ಧ್ವಜ ನೋಡುವಂತಾಗಿದೆ, ಕೋಲಾರದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜದ ಪ್ರದರ್ಶನ ಆಗಿದೆ, ನಿನ್ನೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ರಾಷ್ಟ್ರಧ್ವಜ ವಿರೂಪಗೊಳಿಸಿ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದುವಿನಲ್ಲಿ ಬರೆದಿದ್ದಾರೆ, ಇಂಥ ಧ್ವಜವನ್ನು ಬೆಂಗಳೂರಿನಲ್ಲಿ ಹಾರಿಸುತ್ತಿದ್ದಾರೆ, ಇದು ಕರ್ನಾಟಕದ ರಾಜಧಾನಿಯ ಸ್ಥಿತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಟಿಪ್ಪು ವೈಭವೀಕರಣ

ಶಿವಮೊಗ್ಗದಲ್ಲಿ ಹಿಂದೂಗಳನ್ನು ಕಗ್ಗೊಲೆ ಮಾಡಿದ ಔರಂಗಬೇಬನ ರಕ್ತ ಸಿಕ್ತ ಖಡ್ಗ ಪ್ರದರ್ಶನ ಮಾಡುತ್ತಾರೆ, ಕೋಲಾರದಲ್ಲೂ ಇದರ ಪ್ರದರ್ಶನ ನಡೆದಿದೆ, ಟಿಪ್ಪುವನ್ನು ವೈಭವೀಕರಿಸಲಾಗುತ್ತಿದೆ, ಆದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಹನುಮಾನ್ ಚಾಲೀಸ ಕೇಳುತ್ತಿದ್ದ ಹುಡುಗನ ಮೇಲೆ ಹಲ್ಲೆ ಮಾಡಲಾಗಿದೆ, ಇದನ್ನು ಪ್ರಶ್ನಿಸಲು ಹೋದವರ ಮೇಲೇ ಕೇಸು ಹಾಕಿದ್ದೀರಿ.

ಅಲ್ಪಸಂಖ್ಯಾತರ ಓಲೈಕೆ ಮಾಡಿ ಪ್ರಜಾತಂತ್ರ ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದೀರಿ, ನೀವು ಪ್ರಜಾತಂತ್ರ ರಕ್ಷಕರೇ ಎಂದು ವ್ಯಂಗ್ಯವಾಡಿದರು.

ಸಂವಿಧಾನ ರಕ್ಷಣೆಗೆ ಶಾಲೆ-ಕಾಲೇಜು ಮಕ್ಕಳ ಮಾನವ ಸರಪಳಿ ಮಾಡಿದಿರಿ, ಆದರೆ ಜನರೇ ಬರಲಿಲ್ಲ, ಮನೆಗಳಿಗೆ ಹೋಗಿದ್ದ ಮಕ್ಕಳನ್ನು ಪುನಃ ಕರೆತಂದು ರಸ್ತೆಯಲ್ಲಿ ಬಿಸಿಲಲ್ಲಿ ನಿಲ್ಲಿಸಿದಿರಿ. ಈ ಬಗ್ಗೆ ನಮಗೆ ನೂರಾರು ಫೋನ್ ಕರೆಗಳು ಬಂದಿವೆ, ಇದು ಯಾವ ರೀತಿಯ ಸಂವಿಧಾನ ರಕ್ಷಣೆ.

ಜನೋತ್ಸವವಾಗಿ ಕರ್ನಾಟಕ ಸುವರ್ಣ ಸಂಭ್ರಮ
ವಿಧಾನಸೌಧದಲ್ಲಿ ಪಾಕಿಸ್ತಾನ್ ಘೋಷಣೆ

ನೀವು ಮುಖ್ಯಮಂತ್ರಿ ಆದ ಮೇಲೆ ರಾಜ್ಯಸಭೆ ಚುನಾವಣೆ ನಡೆದಾಗ ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಬೇಕಾಯಿತು, ಘಟನೆ ಸಂಬಂಧ ಎಫ್‌ಎಸ್‌ಎಲ್ ವರದಿ ಬಳಿಕ ಕೇಸು ಹಾಕುವುದಾಗಿ ಹೇಳಿ ದಿನ ತಳ್ಳಲಾಯಿತು.

ಅತ್ಯಂತ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕಾಂಗ್ರೆಸ್ ಶಾಸಕ ಮತ್ತು ಶಾಸಕರ ಪುತ್ರ ಸೇರಿ ತಮಗೆ ಹಣ ಕೇಳಿದ್ದು, ಅದನ್ನು ಕೊಡಲು ನನಗೆ ಶಕ್ತಿ ಇಲ್ಲ, ನನಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಅಧಿಕಾರಿ ಹೇಳಿ ಮೃತಪಟ್ಟರು, ಆದರೂ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಹಿಂದೆ ಮುಂದೆ ನೋಡುತ್ತಿದ್ದೀರಿ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆಸಿ ಸಿಕ್ಕಿ ಹಾಕಿಕೊಂಡ ನಂತರ ಎಸ್‌ಐಟಿ ರಚಿಸಿದ್ದೀರಿ, ಎಸ್‌ಐಟಿ ವರದಿ ಓದಿದ್ದೀರಾ ಸಿದ್ದರಾಮಯ್ಯನವರೇ, ಆ ವರದಿಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಏಕೆ ಇಲ್ಲ, ಅವರು ಅಪರಾಧಿ ಅಲ್ಲವೇ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahfir on bjp workersminister shobha karandlajenagamangala riot
0 FacebookTwitterPinterestEmail
admin

previous post
ಜನೋತ್ಸವವಾಗಿ ಕರ್ನಾಟಕ ಸುವರ್ಣ ಸಂಭ್ರಮ
next post
ಮೈಸೂರು ದಸರಾ: ಸಾಹಿತಿ ಡಾ.ಹಂ.ಪ.ನಾ ಉದ್ಘಾಟನೆ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ