Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಪಾಲರು ಜನರಿಂದ ಆಯ್ಕೆಯಾಗುವುದಿಲ್ಲ

by admin September 27, 2024
written by admin September 27, 2024 0 comments 1 minutes read
0FacebookTwitterPinterestEmail
170

ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ, ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇ.ಡಿ., ಸಿಬಿಐ ಹಾಗೂ ರಾಜಭವನದ ಕಚೇರಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆರೋಪಿಸಿದರು.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಗಳಾಗಲಿ, ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಇವರ‍್ಯಾರೂ ಚುನಾವಣೆ ಮೂಲಕ ಆಯ್ಕೆಯಾದವರಲ್ಲ, ಅವರು ಸಂವಿಧಾನ ಪ್ರಮುಖರು.

ಜನಪ್ರತಿನಿಧಿಗಳೇ ಆಡಳಿತ ಪ್ರಮುಖರು

ಜನಪ್ರತಿನಿಧಿಗಳು ಚುನಾವಣೆ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು, ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ, ಈ ವಿಷಯ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು, ನನಗಿರುವ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ.

ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ, ಐದು ವರ್ಷ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಗೊಳಿಸಬೇಕೆಂಬ ಜನಾದೇಶವಿದೆ.

‘ಸಿದ್ವಿಲಾಸ’ಕ್ಕೆ ಉಘೇ ಉಘೇ.., ’ಕರ್ಮ ಹಿಟ್ ಬ್ಯಾಕ್’
ಇ.ಡಿ., ಸಿಬಿಐ, ರಾಜಭವನ ದುರ್ಬಳಕೆ

ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರದಿಂದ ಇ.ಡಿ., ಸಿಬಿಐ ಹಾಗೂ ರಾಜಭವನ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ, ಜಾಮೀನಿನ ಮೇಲಿರುವ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದಾರೆಯೇ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿದ್ದಾರೆ, ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ರಾಜೀನಾಮೆ ನೀಡಿದ್ದರೇ, ನಮ್ಮ ಸರ್ಕಾರ ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ, ಆಪರೇಷನ್ ಕಮಲ ಮಾಡಿ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ವಿಫಲವಾಗಿದೆ ಎಂದರು.

ಲೋಕಾಯುಕ್ತ ಮುಚ್ಚಿರಲಿಲ್ಲ

ಲೋಕಾಯುಕ್ತ ಮುಚ್ಚಿರಲಿಲ್ಲ, ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ, ಈ ಧೋರಣೆ ಏಕೆ, ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ, ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ.

ಅನಿಶ್ಚಿತ ರಾಜಕೀಯ ಬೆಳವಣಿಗೆಯಿದ್ದರೂ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದಿದೆ, ಎಂದಿಗೂ ಜನಾದೇಶ ಪಡೆಯದೆ ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahgovernor and president not elected by peoplelokayukta not closedmla and mp are rulers
0 FacebookTwitterPinterestEmail
admin

previous post
‘ಸಿದ್ವಿಲಾಸ’ಕ್ಕೆ ಉಘೇ ಉಘೇ.., ’ಕರ್ಮ ಹಿಟ್ ಬ್ಯಾಕ್’
next post
ಸಿದ್ದರಾಮಯ್ಯ ವಿರುದ್ಧ ವಂಚನೆ, ಫೋರ್ಜರಿ ಕೇಸ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ