Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿಯಲ್ಲಿನ ಸಿದ್ದರಾಮಯ್ಯ ಪರ ತಂಡ ಹೊರಹಾಕಿ

by KM Shivaraju October 3, 2024
written by KM Shivaraju October 3, 2024 0 comments 1 minutes read
0FacebookTwitterPinterestEmail
402

ಬೆಂಗಳೂರು:ಪಕ್ಷದಲ್ಲಿದ್ದುಕೊಂಡೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಚಾವ್ ಮಾಡಲು ಹೊರಟಿರುವ ತಂಡವನ್ನು ಹೊರಹಾಕಿ ಎಂಬ ಕೂಗು ರಾಜ್ಯ ಬಿಜೆಪಿಯಲ್ಲಿ ಎದ್ದಿದೆ.

ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರುಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಬಣ ತಿರುಗಿಬಿದ್ದಿದೆ.

ವರಿಷ್ಠರಿಗೆ ಒತ್ತಾಯ

ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ಸೇರಿದ್ದ ಈ ಬಣ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ವರಿಷ್ಠರನ್ನು ಒತ್ತಾಯಿಸಿದೆ.

ವರಿಷ್ಠರಿಂದ ನೇಮಿಸಲ್ಪಟ್ಟ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುವುದೆಂದರೆ ವರಿಷ್ಠರನ್ನೇ ಪ್ರಶ್ನಿಸಿದಂತೆ, ಹಿರಿಯರಾದ ಬಸನಗೌಡ ಪಾಟೀಲ್ ಯತ್ನಾಳ್, ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರರ ಬಗ್ಗೆ ಪ್ರಸ್ತಾಪ ಮಾಡುತ್ತಾರೆ, ಅನಗತ್ಯವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ, ಅವರಿಗೆ ಅನುಭವ ಇಲ್ಲ, ಚಿಕ್ಕವರು ಎಂದೆಲ್ಲ ಮಾತನಾಡುತ್ತಾರೆ.

5 ವರ್ಷ ನಮ್ಮದೇ ಆಡಳಿತ: ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯಾಧ್ಯಕ್ಷರಿಗೆ ಮಾನಸಿಕ ಕಿರಿಕಿರಿ

ರಾಜ್ಯಾಧ್ಯಕ್ಷರಿಗೆ ಮಾನಸಿಕ ಕಿರಿಕಿರಿ ಉಂಟು ಮಾಡುವ ಉದ್ದೇಶ ಯತ್ನಾಳ್ ಅವರದು, ಇದು ಎಷ್ಟರ ಮಟ್ಟಿಗೆ ಸರಿ, ಹಿಂದೆ ಎ.ಕೆ.ಸುಬ್ಬಯ್ಯ ಅವರು 42 ರಿಂದ 44 ವರ್ಷದವರಿದ್ದಾಗ ಪಕ್ಷದ ಅಧ್ಯಕ್ಷರಾಗಿದ್ದರು, ಯಡಿಯೂರಪ್ಪ ಅಧ್ಯಕ್ಷರಾದಾಗ ಅವರಿಗೆ 48 ವರ್ಷ, ಈಗ ವಿಜಯೇಂದ್ರರಿಗೆ 49ರಿಂದ 50 ವರ್ಷ, ಇವರು ಹೇಗೆ ಕಿರಿಯರಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮಗ ಎಂಬ ಕಾರಣಕ್ಕೆ ವಿಜಯೇಂದ್ರ ಅವರನ್ನು ಒಪ್ಪುವುದಿಲ್ಲ ಎನ್ನುತ್ತಾರೆ, ಯತ್ನಾಳ್‌ರಲ್ಲೇ ಒಂದಷ್ಟು ಗೊಂದಲಗಳಿವೆ, ವಿಜಯೇಂದ್ರರನ್ನು ರಾಜ್ಯದ ಅಧ್ಯಕ್ಷರನ್ನಾಗಿ ಮಾಡುವ ಸಂದರ್ಭದಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಪಡೆದು ನೇಮಕ ಮಾಡಿದ್ದಾರೆ.

ನೇಮಕ ಮಾಡುವಾಗ ರಾಜ್ಯ ಬಿಜೆಪಿ ಹಿರಿಯ ಮುಖಂಡರ, ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದಾರೆ.

ಯತ್ನಾಳ್ ತಂಡ ವರಿಷ್ಠರ ಭೇಟಿ ಮಾಡಲಿ

ಯತ್ನಾಳ್ ತಂಡಕ್ಕೆ ಭಿನ್ನಾಭಿಪ್ರಾಯವಿದ್ದರೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಸಲಹೆ, ಸೂಚನೆ ಕೊಡಬೇಕು, ಸಮಸ್ಯೆಗಳನ್ನು ಚರ್ಚಿಸಬೇಕು, ಅದು ಬಿಟ್ಟು, ರಸ್ತೆಯಲ್ಲಿ, ಹೋದಲ್ಲಿ-ಬಂದಲ್ಲಿ, ಯಾವ್ಯಾವುದೋ ಸಭೆಗೆ ಹೋದಾಗ ಮಾತನಾಡುವುದು ಸರಿಯಲ್ಲ.

ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಪರ ಪರೋಕ್ಷವಾಗಿ ಮಾತನಾಡುವ ಮೂಲಕ ಬಿಜೆಪಿ ಹೋರಾಟದಲ್ಲಿ ಭಿನ್ನಮತ ಇದೆ ಎಂಬಂತೆ ಬಿಂಬಿಸಲು ಹೊರಟಿದ್ದಾರೆ.

ಅವರಿಗೆ ಸಿದ್ದರಾಮಯ್ಯ ಅವರಿಗಿಂತ ವಿಜಯೇಂದ್ರ ಅವರೇ ಟಾರ್ಗೆಟ್ ಆಗಿದ್ದಾರೆ, ಇನ್ನು ಮುಂದಾದರೂ ಇದನ್ನು ಬಿಟ್ಟು ವರಿಷ್ಠರ ಸಲಹೆ, ಸೂಚನೆಗಳಂತೆ ನಡೆಯಲಿ.

ನಮಗೆ ವ್ಯಕ್ತಿಯಲ್ಲ, ಪಕ್ಷ ಮುಖ್ಯ ಎಂದಿರುವ ಬಣ, ಈ ಎಲ್ಲಾ ಬೆಳವಣಿಗೆಗಳನ್ನು ವರಿಷ್ಠರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ನಿರ್ಧರಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basana gowda patil yatnalbjpbp harishby vijayendra prokatta subramnya naidu
0 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಸಚಿವರು ನ್ಯಾಯಾಲಯಕ್ಕಿಂತ ದೊಡ್ಡವರೇ
next post
ಬೈರತಿ ಸುರೇಶ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ