Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸಿದ್ದರಾಮಯ್ಯ ರಾಜೀನಾಮೆ ಏಕೆ ಪಡೆದಿಲ್ಲ

by admin October 19, 2024
written by admin October 19, 2024 0 comments 2 minutes read
0FacebookTwitterPinterestEmail
281

ಬೆಂಗಳೂರು:ಹಗರಣಗಳ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರನ್ನು ತಕ್ಷಣ ಬಂಧಿಸಿ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ.

ಮುಡಾ, ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮೈಸೂರು ಟರ್ಫ್ ಕ್ಲಬ್ ಸ್ಟುವರ್ಡ್ ನೇಮಕಾತಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಸಿದ್ದರಾಮಯ್ಯ ಅವರಿಗೆ ಛೀಮಾರಿ ಹಾಕಿ ತನಿಖೆಗೆ ಆದೇಶಿಸಿವೆ.

ಎಲ್ಲಕ್ಕೂ ಮಿಗಿಲಾಗಿ ರಾಜ್ಯಪಾಲರು ೧೭ಎ ಅಡಿ ಪ್ರಾಸಿಕ್ಯೂಷನ್‌ಗೆ ಆದೇಶ ಮಾಡಿದ್ದು, ಇದನ್ನು ಪ್ರಶ್ನಿಸಿದ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯಗಳೂ ತೀರ್ಪಿನ ಮೂಲಕ ಛಾಟಿ ಬೀಸಿದ್ದರೂ ಅಧಿಕಾರದಲ್ಲಿ ಮುಂದುವರೆಯುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ಮುಡಾ ಭ್ರಷ್ಟಾಚಾರ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದ ಬಿಡಿ ನಿವೇಶನಗಳ ಹಂಚಿಕೆಯಲ್ಲಿ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ.

ಇಷ್ಟೆಲ್ಲಾ ಆರೋಪ ಮತ್ತು ತನಿಖೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ಸಿದ್ದರಾಮಯ್ಯ ಅವರ ರಾಜೀನಾಮೆ ಏಕೆ ಪಡೆದಿಲ್ಲ, ಆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ಉಪನ್ಯಾಸ ನೀಡುತ್ತಾರೆ, ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ನೋಡಿಕೊಳ್ಳಲಿ ಎಂದರು.

ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಅಧ್ಯಕ್ಷ ಮರಿಗೌಡ ಅವರ ರಾಜೀನಾಮೆ ಪಡೆದಿದ್ದು ಏಕೆ, ಅವರ ಮೇಲೆ ಹಗರಣ ಆರೋಪ ಹೊರಿಸಲು ಹೊರಟಿದ್ದಾರೆಯೇ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ದೀಪಾವಳಿ: ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ
ಕಡತಗಳನ್ನು ಸುಟ್ಟು ಹಾಕಿದ್ದಾರೆ

ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಸಚಿವ ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಿ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ, ಅವರು ಮುಡಾದಿಂದ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಬಂದು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದರು.

ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿ ನಂತರ ವಾಪಸ್ ಪಡೆದಿದ್ದಾರೆ, 2013ರಲ್ಲಿ ತಮ್ಮ ಕೇಸುಗಳಿಂದ ಹೊರಬರಲು ಲೋಕಾಯುಕ್ತವನ್ನೇ ಮುಚ್ಚಿದ್ದರು, ಟರ್ಫ್ ಕ್ಲಬ್ ಪ್ರಕರಣದಲ್ಲಿ ಸ್ಟೂವರ್ಡ್ ಮಾಡಲು ಚೆಕ್ ಮೂಲಕ 1.30 ಕೋಟಿ ರೂ. ಪಡೆದ ಸಿದ್ದರಾಮಯ್ಯ ಭ್ರಷ್ಟಾಚಾರರಹಿತ ವ್ಯಕ್ತಿ ಆಗಲು ಹೇಗೆ ಸಾಧ್ಯ.

ಮುಖ್ಯಮಂತ್ರಿ ಪತ್ನಿ ಅವರಿಗೆ ನಿವೇಶನ ಹಂಚಿಕೆ ಸಂಬಂಧ ಮುಡಾ ನಿರ್ಧಾರ ಕೈಗೊಂಡಾಗ ಸಿದ್ದರಾಮಯ್ಯ ಪುತ್ರ ಯತೀಂದ್ರ ಶಾಸಕರಾಗಿದ್ದರಲ್ಲದೆ, ಮುಡಾ ಸದಸ್ಯರೂ ಆಗಿದ್ದರು, ಅವರ ಒತ್ತಡದಿಂದ ನಿವೇಶನಗಳು ಸಿಕ್ಕಿವೆ.

ಅಪರಾಧಕ್ಕೆ ಮೊದಲ ಸಾಕ್ಷಿ

ಇಷ್ಟೆಲ್ಲ ನಡೆದಾಗ ಸಿದ್ದರಾಮಯ್ಯ ಸಂವಿಧಾನಿಕ ಹುದ್ದೆಗಳಲ್ಲಿದ್ದರು, ಪ್ರಭಾವ ಬೀರಿ ಹೆಚ್ಚು ಮೌಲ್ಯಯುತ ಪ್ರದೇಶದಲ್ಲಿ ನಿವೇಶನ ಪಡೆಯಲಾಗಿದೆ, ನಿವೇಶನ ವಾಪಸ್ ಕೊಟ್ಟಿದ್ದೇ ಅಪರಾಧಕ್ಕೆ ಮೊದಲ ಸಾಕ್ಷಿ ಎಂದು ವಿಶ್ಲೇಷಿಸಿದರು.

ಬೊಕ್ಕಸದ ಹಣ ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆ ಆಗುತ್ತಿದೆ, ಸಿದ್ದರಾಮಯ್ಯ ತಾನು ಬಹಳ ಶುದ್ಧ ಎಂದು ಹೇಳಿಕೊಳ್ಳುತ್ತಿದ್ದರು, ಅವರ ಪರಿಶುದ್ಧತೆಯ ಒಂದೊಂದೇ ಮುಖವಾಡಗಳು ಕಳಚಿ ಬೀಳುತ್ತಿವೆ.

ಮುಡಾ ಹಗರಣ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದ್ದು ತನಿಖೆ ಮಾಡಿ ವರದಿ ಕೊಟ್ಟಿದ್ದರು.

ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಒಂದು ರೂಪಾಯಿ ಬಿಡುಗಡೆ ಆಗುತ್ತಿಲ್ಲ, ಬೆಂಗಳೂರಿನಲ್ಲಿ ಬಿದ್ದ ಮಳೆ ಇಡೀ ನಗರವನ್ನೇ ಮುಳುಗಿಸಿದೆ, ಜನರನ್ನು ಕೇಳುವವರು, ಹೇಳುವವರು ಇಲ್ಲವಾಗಿದೆ, ಭ್ರಷ್ಟಾಚಾರದಿಂದ ದುಡ್ಡು ಮಾಡುವುದೇ ದಂಧೆಯಾಗಿದೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongresmuda scamresignationshobha karandlaje
0 FacebookTwitterPinterestEmail
admin

previous post
ಮುಡಾ: ಸಿದ್ದರಾಮಯ್ಯಗೆ ಬಿಗಿಯಾದ ಕಾನೂನು ಕುಣಿಕೆ !
next post
ದೀಪಾವಳಿ: ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ