Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಸಿದ್ದರಾಮಯ್ಯ ತಂತ್ರ !

by KM Shivaraju October 25, 2024
written by KM Shivaraju October 25, 2024 0 comments 2 minutes read
0FacebookTwitterPinterestEmail
272

ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರರ ವಿರೋಧದ ನಡುವೆಯೂ ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಎಷ್ಟು ವಿರೋಧಿಯೂ ಅಷ್ಟೇ ಸಮನಾಗಿ ಯೋಗೇಶ್ವರ್ ಅವರನ್ನೂ ವಿರೋಧಿಸುತ್ತಾರೆ.

ಸಹೋದರರು ನಂಬಲು ಸಿದ್ಧರಿಲ್ಲ

ಕುಮಾರಸ್ವಾಮಿ ಅವರನ್ನು ನಂಬಿದರೂ, ಯೋಗೇಶ್ವರ್ ಅವರನ್ನು ರಾಜಕೀಯವಾಗಿ ನಂಬಲು ಶಿವಕುಮಾರ್ ಸಹೋದರರು ಸಿದ್ಧರಿಲ್ಲ.

ಆದರೆ, ಸಿದ್ದರಾಮಯ್ಯ ಅವರಿಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಖಭಂಗ ಮಾಡಬೇಕೆಂಬುದೇ ಗುರಿ.

ಈ ಗುರಿ ಸಾಧಿಸಲು ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿಗಳು ಇಲ್ಲದ ಕಾರಣ ಕಳೆದ ಎರಡು ತಿಂಗಳ ಹಿಂದಿನಿಂದಲೂ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದು ಉಪಚುನಾವಣಾ ಕಣಕ್ಕಿಳಿಸಲು ತೆರೆಮರೆಯಲ್ಲಿ ಮಾತುಕತೆ ನಡೆದಿದ್ದವು.

ಜನಸಾಗರದೊಂದಿಗೆ ತೆರಳಿ ನಿಖಿಲ್ ನಾಮಪತ್ರ ಸಲ್ಲಿಕೆ
ಜಾರ್ಜ್ ನಿವಾಸದಲ್ಲಿ ಚರ್ಚೆ

ಕಳೆದ ತಿಂಗಳು ಸಚಿವ ಜಾರ್ಜ್ ನಿವಾಸದಲ್ಲಿ ಮುಖ್ಯಮಂತ್ರಿ ಅವರು, ಯೋಗೇಶ್ವರ್ ಅವರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಂದೇ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಯಲ್ಲಿ ಗೆದ್ದು ಬನ್ನಿ, ನಿಮ್ಮನ್ನು ಬರುವ ಜನವರಿಯಲ್ಲಿ ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದಲ್ಲದೆ, ಚುನಾವಣೆಯಲ್ಲಿ ಗೆಲ್ಲಿಸುವುದೂ ನನ್ನ ಹೊಣೆ ಎಂದಿದ್ದರು.

ಈ ಯಾವ ಬೆಳವಣಿಗೆಗಳೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಗಮನಕ್ಕೆ ಬಂದಿರಲಿಲ್ಲ, ಅವರಿಗೆ ಚನ್ನಪಟ್ಟಣ ಕ್ಷೇತ್ರದಲ್ಲಿ ಪಕ್ಷದ ಶಕ್ತಿ ಏನು ಎಂಬುದು ತಿಳಿದಿತ್ತು.

ಉಪಚುನಾವಣೆ : ರಾಜಕೀಯ ಬದಲಾವಣೆ ದಿಕ್ಸೂಚಿ
ಕ್ಷೇತ್ರದಲ್ಲಿ ಸುತ್ತಾಟ

ಮೊದಲು ತಮ್ಮ ಸಹೋದರ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿ ಕ್ಷೇತ್ರದಲ್ಲಿ ಹಲವು ಬಾರಿ ಸುತ್ತಾಟವನ್ನೂ ನಡೆಸಿದ್ದರು.

ನಂತರ ತಮ್ಮ ನಿಲುವಿನಿಂದ ಹಿಂದೆ ಸರಿದು, ದೂರದ ಸಂಬಂಧಿ ಹಾಗೂ ಕೆಪಿಎಸ್‌ಸಿ ಮಾಜಿ ಸದಸ್ಯ ರಘುನಂದ ರಾಮಣ್ಣ ಅವರನ್ನು ಕಣಕ್ಕಿಳಿಸುವ ತೀರ್ಮಾನ ಕೈಗೊಂಡಿದ್ದರು.

ಯೋಗೇಶ್ವರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ದೊರೆಯುವುದಿಲ್ಲ, ಅವರು ಬಂಡಾಯ ಎದ್ದು ಪಕ್ಷೇತರರಾಗಿ ನಿಲ್ಲಬಹುದು, ಇಂತಹ ಸನ್ನಿವೇಶದಲ್ಲಿ ಅವರು ಗೆಲುವಿನ ದಡ ಮುಟ್ಟುವುದಿಲ್ಲ ಎಂಬ ಅನಿಸಿಕೆ ಶಿವಕುಮಾರ್ ಅವರಲ್ಲಿತ್ತು.

ಬೆಂಬಲ ಬೆಲೆಗೆ 11 ಜಿಲ್ಲೆಗಳಲ್ಲಿ ಶೇಂಗಾ ಖರೀದಿ
ಪಕ್ಷಕ್ಕೆ ಕರೆತರುವ ಅನುಮತಿ

ಆದರೆ, ಉಪಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ಎಐಸಿಸಿ ರಾಜಕೀಯ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮೂಲಕ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತರುವ ವಿಷಯ ಪ್ರಸ್ತಾಪಿಸಿ, ಅನುಮತಿಯನ್ನೂ ಪಡೆದುಕೊಂಡರು.

ಚನ್ನಪಟ್ಟಣ ಗೆಲುವೊಂದೇ ಮುಖ್ಯ, ಇದು ಯೋಗೇಶ್ವರ್ ಅವರಿಂದ ಮಾತ್ರ ಸಾಧ್ಯ, ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ಹಿನ್ನಡೆ ಉಂಟು ಮಾಡಲು ನಮಗೆ ಇದೊಂದು ಅವಕಾಶ ಎಂದು ವರಿಷ್ಠರಿಗೆ ಸಿದ್ದರಾಮಯ್ಯ ಮನವರಿಕೆ ಮಾಡಿದ್ದು ಯಶಸ್ಸು ತಂದಿತು.

ವೇಣುಗೋಪಾಲ್ ಅವರೇ ಶಿವಕುಮಾರ್ ಅವರನ್ನು ಸಂಪರ್ಕಿಸಿ ಯೋಗೇಶ್ವರ್ ವಿಷಯ ಪ್ರಸ್ತಾಪಿಸಿ, ಅವರೇ ಪಕ್ಷದ ಅಭ್ಯರ್ಥಿ ಎಂದಿದ್ದಲ್ಲದೆ, ಚುನಾವಣಾ ಹೊಣೆಯನ್ನೂ ವಹಿಸಿಕೊಳ್ಳುವಂತೆ ಆದೇಶ ಮಾಡಿದರು.

ಮುಖ್ಯಮಂತ್ರಿ ಗಾದಿಗೆ ಸಮೀಪಿಸುವ ಸಂದರ್ಭದಲ್ಲಿ ಪಕ್ಷದ ವರಿಷ್ಠರ ಹಾಗೂ ಸಿದ್ದರಾಮಯ್ಯ ಅವರ ವಿರೋಧ ಕಟ್ಟಿಕೊಳ್ಳಬಾರದೆಂಬ ಕಾರಣಕ್ಕೆ ಒಲ್ಲದ ಮನಸ್ಸಿನಿಂದ ಯೋಗೇಶ್ವರ್ ಆಗಮನಕ್ಕೆ ಶಿವಕುಮಾರ್ ಒಪ್ಪಿಗೆ ಸೂಚಿಸಿದರಾದರೂ, ಚುನಾವಣೆಯಲ್ಲಿ ಇದು ಎಷ್ಟರ ಮಟ್ಟಿಗೆ ಫಲ ನೀಡುವುದೆಂಬುದನ್ನು ಕಾದು ನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattana by-electioncm siddramaiahcongrescp yogeshwarDCM DK Shivakumarjds
0 FacebookTwitterPinterestEmail
KM Shivaraju

previous post
ಜನಸಾಗರದೊಂದಿಗೆ ತೆರಳಿ ನಿಖಿಲ್ ನಾಮಪತ್ರ ಸಲ್ಲಿಕೆ
next post
ದೇವೇಗೌಡ-ಉಪರಾಷ್ಟ್ರಪತಿ ಧನಕರ್ ಸೌಹಾರ್ದ ಭೇಟಿ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ