Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿ ಷಡ್ಯಂತ್ರ

by admin November 7, 2024
written by admin November 7, 2024 0 comments 2 minutes read
0FacebookTwitterPinterestEmail
165

ಸಂಡೂರು:ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ನನ್ನನ್ನು ಮುಗಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುರುತರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಂದರ್ಭದಲ್ಲಿ, ನನ್ನ ಮೇಲೆ ಇಲ್ಲಸಲ್ಲದ, ಸುಳ್ಳು ಕೇಸ್ ಹಾಕಿಸಿ ಷಡ್ಯಂತ್ರ ನಡೆಸುತ್ತಿದ್ದಾರೆ.

ಅನ್ಯಾಯ ಟೀಕಿಸಿದ್ದಕ್ಕೆ ಪ್ರತಿಫಲ

ನಾನು ನಿರಂತರವಾಗಿ ಈ ಇಬ್ಬರು ನಾಯಕರ ನೀತಿ ಮತ್ತು ಸುಳ್ಳುಗಳನ್ನು ಹಾಗೂ ರಾಜ್ಯಕ್ಕೆ ಅವರು ಮಾಡುತ್ತಿರುವ ಅನ್ಯಾಯವನ್ನು ಟೀಕಿಸಿದ್ದಕ್ಕೆ ನನಗೆ ಇಂತಹ ಪ್ರತಿಫಲ ದೊರೆತಿದೆ.

ನಾನು ಇವರುಗಳ ಯಾವ ಷಡ್ಯಂತ್ರಕ್ಕೂ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ, ನಮ್ಮ ಸರ್ಕಾರ ಇನ್ನೂ ಮೂರೂವರೆ ವರ್ಷಗಳ ಕಾಲ ಆಡಳಿತ ನಡೆಸಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ.

ಮಹಾರಾಷ್ಟ್ರದಲ್ಲಿ ತಮ್ಮ ಕಿಚಡಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಕರ್ನಾಟಕ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.

ವಕ್ಫ್ ಹೆಸರಲ್ಲಿ ಆಸ್ತಿ ಕಬಳಿಕೆ: ಅಧಿಕಾರಿಗಳು ಶಾಮೀಲು ?
ಬಿಜೆಪಿ ಸರಣಿ ಸುಳ್ಳು

ಬಿಜೆಪಿ ಮಹಾರಾಷ್ಟ್ರದ ಜನರನ್ನು ಸರಣಿ ಸುಳ್ಳುಗಳ ಮೂಲಕ ವಂಚಿಸುತ್ತಿದೆ, ’ವಾದಾ ದಿಯಾ: ಪೂರಾ ಕಿಯಾ’ ಎಂದು ಅವರ ಸುಳ್ಳು ಜಾಹೀರಾತಿಗೆ ಕಿಡಿ ಕಾರಿದರು.

ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮತನಾಡಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಭರವಸೆ ನೀಡಿತ್ತು, ಅದು ಈಡೇರಿಸಲಾಗಿದೆ, ಯೋಜನೆಯನ್ನೇ ಇನ್ನೂ ಆರಂಭಿಸದೆ, ವಂಚಿಸಿದೆ ಎಂಬ ಅರ್ಥದಲ್ಲಿ ಪರಮ ಸುಳ್ಳಿನ ಜಾಹೀರಾತುಗಳನ್ನು ಬಿಜೆಪಿ ಪುಟಗಟ್ಟಲೆ ನೀಡುತ್ತಿದೆ.

ಬಿಜೆಪಿಯವರಿಗೆ ಸುಳ್ಳೇ ಮನೆದೇವರು, ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿವೆ.

ಒಂದೆರಡು ದಿನದಲ್ಲಿ ಗೃಹ ಲಕ್ಷ್ಮಿ ಹಣ

ಗೃಹ ಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆಯಾಗಲಿದೆ, ಆದರೆ, ಬಿಜೆಪಿಯವರು ಸುಳ್ಳುಗಳನ್ನು ಹರಡಿಸುತ್ತಾ, ಅದಕ್ಕಾಗಿ ಕೋಟಿ ಕೋಟಿ ರೂ. ವೆಚ್ಚ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಕೊಡ್ತೀವಿ ಅಂತ ಹೇಳಿದ್ದರಲ್ಲಾ ಮೋದಿಯವರೇ ಕೊಟ್ಟಿರೇನ್ರೀ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಉದ್ಯೋಗ ಸೃಷ್ಟಿ ಮಾಡಿದ್ರಾ, ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್, ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ, ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಲಕ್ಷ ಕೋಟಿ ರೂ. ಮಾತ್ರ, ಈಗ ದೇಶದ ಸಾಲ 185 ಲಕ್ಷ ಕೋಟಿ ರೂ.ಗೆ ಏರಿಸಿದ್ದೀರಿ, ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್ ಎಂದು ವ್ಯಂಗ್ಯವಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸದೆ ಸುಮ್ಮನಿದ್ದ ಬಿಜೆಪಿ ಪರಿವಾರದ ಕೊಡುಗೆ ಈ ದೇಶಕ್ಕೆ ಸೊನ್ನೆ.

ವಕ್ಫ್ ಆಸ್ತಿ ವಿವಾದ: ರೈತರ ರಕ್ಷಿಸಲು ಸರ್ಕಾರ ಬದ್ಧ
ಬಿಜೆಪಿ ಕೊಡುಗೆ ಏನು

ಇಂದಿರಾಗಾಂಧಿಯವರು 20 ಅಂಶಗಳ ಕಾರ್ಯಕ್ರಮ ಮೂಲಕ ದೇಶಕ್ಕೆ ಆಹಾರ ಭದ್ರತೆ ಒದಗಿಸಿ, ಬಡತನ ನಿರ್ಮೂಲನೆಗೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದರು, ಬಿಜೆಪಿಯವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ದೇವರಾಜ ಅರಸು ಬಳಿಕ ಐದು ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಿದವನು ನಾನು, ಮತ್ತೆ ಮುಖ್ಯಮಂತ್ರಿ ಆದೆ, ರಾಜ್ಯದ ಜನರಿಗೆ ನಾವು, ನಮ್ಮ ಸರ್ಕಾರ ಕೊಟ್ಟ ಹತ್ತು ಹಲವು ಭಾಗ್ಯಗಳು ಮತ್ತು ನುಡಿದಂತೆ ನಡೆದ ನಮ್ಮ ಜನಪರವಾದ ಬದ್ಧತೆ ಇದಕ್ಕೆ ಕಾರಣ.

ಬಿಜೆಪಿ 2018ರಲ್ಲಿ ಕೊಟ್ಟಿದ್ದ ಭರವಸೆಗಳಲ್ಲಿ ಶೇ.10 ರಷ್ಟನ್ನೂ ಈಡೇರಿಸಲಿಲ್ಲ, ಚುನಾವಣೆ ವೇಳೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು, ಗೆದ್ದ ಬಳಿಕ ಸಾಲ ಮನ್ನಾ ಮಾಡಿ ಅಂದ್ರೆ, ಸಾಲ ಮನ್ನಾ ಮಾಡೋಕೆ ದುಡ್ಡು ಪ್ರಿಂಟ್ ಹಾಕೋ ಮಿಷನ್ ಇದೆಯಾ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದರು.

ಶ್ರೀಮಂತರ ಸಾಲ ಮನ್ನ

ಸಾಲ ಮನ್ನಾ ಮಾಡದ ಕೇಂದ್ರ ಸರ್ಕಾರ, ಅತ್ಯಂತ ಶ್ರೀಮಂತರ ಕಾರ್ಪೋರೇಟ್ ಕಂಪನಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದರು, ಇದೇ ಹಣದಲ್ಲಿ ರೈತರ ಸಾಲ ಮನ್ನಾ ಮಾಡಬಹುದಿತ್ತಲ್ಲ ಎಂದರು.

ಅಚ್ಛೇ ದಿನ್ ಆಯೆಗಾ ಅಂದ್ರಲ್ಲಾ ಮೋದಿ, ಬಂತಾ ಅಚ್ಛೇ ದಿನ್, ಯಾರ ಮನೆ ಬಾಗಿಲಿಗಾದರೂ ಅಚ್ಛೆ ದಿನ್ ಬಂದಿದೆಯಾ, ಯಾರಿಗಾದರೂ ಕಾಣಿಸಿದೆಯಾ ಎಂದು ವಾಗ್ದಾಳಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp lying peoplecm siddramaiahsanduru by-election
0 FacebookTwitterPinterestEmail
admin

previous post
ವಕ್ಫ್ ಆಸ್ತಿ ವಿವಾದ: ರೈತರ ರಕ್ಷಿಸಲು ಸರ್ಕಾರ ಬದ್ಧ
next post
ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ